ವಿವಿಯಲ್ಲಿ ಶೀಘ್ರವೇ ಮಹಿಳಾ ವಸ್ತು ಸಂಗ್ರಹಾಲಯ


Team Udayavani, Sep 20, 2020, 6:06 PM IST

ವಿವಿಯಲ್ಲಿ ಶೀಘ್ರವೇ ಮಹಿಳಾ ವಸ್ತು ಸಂಗ್ರಹಾಲಯ

ವಿಜಯಪುರ: ಮಹಿಳಾ ಸಬಲೀಕರಣಕ್ಕಾಗಿ ಜನ್ಮ ತಳೆದಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಲ ತಿಂಗಳಲ್ಲಿ ದೇಶದಲ್ಲೇ ವಿಶಿಷ್ಟವಾದ ಮಹಿಳಾ ವಸ್ತು ಸಂಗ್ರಹಾಲಯ ಕಾರ್ಯಾರಂಭ ಮಾಡಲಿದೆ ಎಂದು ಹಂಗಾಮಿ ಕುಲಪತಿ ಪ್ರೋ| ಓಂಕಾರ ಕಾಕಡೆ ಪ್ರಕಟಿಸಿದರು.

ಶನಿವಾರ ನಡೆದ ವಿವಿಯ 11ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಿಷಯ ತಜ್ಞರು ವಸ್ತು ಸಂಗ್ರಹಾಲ ಯದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಈ ಯೋಜನೆಯಲ್ಲಿ ಮಹಿಳೆಯರ ಜ್ಞಾನ, ಕೌಶಲ್ಯ, ಸಮಾಜಕ್ಕೆ ನೀಡಿದ ಕೊಡುಗೆ ಬಿಂಬಿಸಲಾಗುತ್ತಿದೆ. ಇದಕ್ಕಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಹುತೇಕ ಮುಕ್ತಾಯದ ಹಂತದಲ್ಲಿದೆ ಎಂದರು.

ಈಗಾಗಲೇ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಶಿಲೊ³àದ್ಯಾನದಲ್ಲಿ ಗ್ರಾಮೀಣ ಬದುಕು ಬಿಂಬಿಸುವಕಲಾಕೃತಿಗಳು, ಸಾಧಕ ಮಹಿಳೆಯರೊಂದಿಗೆ ಹಳ್ಳಿ ಮಹಿಳೆಯರು ಜನ ಜೀವನದ ಮಾದರಿಗಳು ಗಮನ ಸೆಳೆದಿದೆ. ಈ ಭಾಗದಲ್ಲಿ ಇಂತಹ ಕಲಾಕೃತಿಗಳು ವಿಶೇಷವಾಗಿದ್ದು ಗ್ರಾಮೀಣ ಮಹಿಳಾ ಬದುಕನ್ನು ಪರಿಚಯಿಸುತ್ತಿವೆ ಎಂದರು.

ಉತ್ತಮವಾದ ಶೈಕ್ಷಣಿಕ ಚಟುವಟಿಕೆಗಳಿಗೆ ಮೂಲಸೌಕರ್ಯಗಳು ಅವಶ್ಯಕ ಎಂಬುದನ್ನು ವಿಶ್ವವಿದ್ಯಾಲಯ ಮನಗಂಡಿದ್ದು ಕಳೆದ ಸಾಲಿನಲ್ಲಿ ವಿಶ್ವವಿದ್ಯಾಲಯ ಕೆಲವು ಮಹತ್ವದ ಮೂಲಭೂತ ಸೌಕರ್ಯ ಕಾರ್ಯ ಕೈಗೆತ್ತಿಕೊಂಡಿದೆ. ಹೊಸ ಕಟ್ಟಡಗಳ ನಿರ್ಮಾಣ, ಹಳೆ ಕಟ್ಟಡಗಳ ದುರಸ್ತಿ ಕಾರ್ಯ, ಪ್ರಯೋಗಾಲಯಗಳ ಉನ್ನತೀಕರಣಕ್ಕೆ ಪಾರದರ್ಶಕವಾಗಿ ರೂಸಾ ಅನುದಾನಬಳಸಿಕೊಳ್ಳಲಾಗಿದೆ. ಶಿಕ್ಷಣ, ದೈಹಿಕ ಶಿಕ್ಷಣ, ವಿದ್ಯುನ್ಮಾನ ವಿಭಾಗಗಳು ತಮ್ಮ ಸ್ವಂತ ಕಟ್ಟಡಗಳಲ್ಲಿ ಕಾರ್ಯ ಮಾಡಲಾರಂಭಿಸಿವೆ.ಗ್ರಂಥಾಲಯ ಕಟ್ಟಡದ ವಿಸ್ತರಣಾ  ಕಾಮಗಾರಿ ಮುಕ್ತಾಯಗೊಂಡಿದೆ. ಇದು ಆಡಳಿತಾತ್ಮಕ, ವಿದ್ಯಾರ್ಥಿನಿಯರ ಶೈಕ್ಷಣಿಕ ದೃಷ್ಟಿಯಿಂದ ಅನುಕೂಲವಾಗಿದೆ. ಇದನ್ನು ಸಾಕಾರಗೊಳಿಸಿದ ಹಿಂದಿನ ಕುಲಪತಿ ಪ್ರೊ| ಸಬಿಹಾ ಭೂಮಿಗೌಡ ಶ್ರಮ ಇಲ್ಲಿ ಸ್ಮರಣೀಯ ಎಂದರು. ಸಮಾಜ ಕಲ್ಯಾಣ ಇಲಾಖೆಯ 8 ಕೋಟಿ ರೂ. ಅನುದಾನದಲ್ಲಿ ಅರ್ಧಕ್ಕೆ ನಿಂತಿದ್ದ ಬೃಹತ್‌ ಸಭಾಂಗಣದ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು ಡಾ| ಬಿ.ಆರ್‌. ಅಂಬೇಡ್ಕರ್‌ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದರು.

ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ರಾಸಾಯನ ಶಾಸ್ತ್ರ ವಿಭಾಗ, ಸಸ್ಯಶಾಸ್ತ್ರ ವಿಭಾಗ, ವಸತಿ ನಿಲಯ, ಹಿಂದಿ ಭವನ ಮುಂತಾದ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ. ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಹೊಸದಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಲಾಗಿದೆ. ಮಂಡ್ಯ ವಿಸ್ತರಣಾ ಕೇಂದ್ರದ ಆಡಳಿತ ಕಟ್ಟಡ 5 ಕೋಟಿ ರೂ. ಅನುದಾನದ ಕಾಮಗಾರಿಗಳು ಪ್ರಗತಿಯಲ್ಲಿವೆ. 13 ಕೋಟಿ ರೂ. ವೆಚ್ಚದಲ್ಲಿ ಸಿಂಧನೂರು ಆಡಳಿತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.

ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಪದವಿಯ 5, 6ನೇ ಸೆಮಿಸ್ಟರ್‌ ಗೆ ಕನ್ನಡ ಮತ್ತು ಇಂಗ್ಲಿಷ್‌ನ 12 ಭಾಷಾ ಪಠ್ಯಪುಸ್ತಕ ಪ್ರಕಟಿಸಿದೆ. ಪದವಿ ಭಾಷಾ ಕನ್ನಡ ಮತ್ತು ಇಂಗ್ಲಿಷ್‌, ಪ್ರಸ್ತುತ ಪದವಿಯ 1 ಮತ್ತು 2ನೇ ಸೆಮಿಸ್ಟರ್‌ ಹಿಂದಿ ಭಾಷಾ ಪಠ್ಯಪುಸ್ತಕ ಪ್ರಕಟಗೊಂಡಿವೆ. ಉಳಿದ ಸೆಮಿಸ್ಟರ್‌ನ ಪಠ್ಯಗಳು ಮುದ್ರಣ ಹಂತದಲ್ಲಿವೆ ಎಂದು ವಿವರಿಸಿದರು.

ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಪದವಿಯ 5, 6ನೇ ಸೆಮಿಸ್ಟರ್‌ಗೆ ಕನ್ನಡ ಮತ್ತು ಇಂಗ್ಲಿಷ್‌ನ 12 ಭಾಷಾ ಪಠ್ಯಪುಸ್ತಕ ಪ್ರಕಟಿಸಿದೆ. ಪದವಿ ಭಾಷಾ ಕನ್ನಡ ಮತ್ತು ಇಂಗ್ಲಿಷ್‌, ಪ್ರಸ್ತುತ ಪದವಿಯ 1 ಮತ್ತು 2ನೇ ಸೆಮಿಸ್ಟರ್‌ ಹಿಂದಿ ಭಾಷಾ ಪಠ್ಯಪುಸ್ತಕ ಪ್ರಕಟಗೊಂಡಿವೆ. ಉಳಿದ ಸೆಮಿಸ್ಟರ್‌ನ ಪಠ್ಯಗಳು ಮುದ್ರಣ ಹಂತದಲ್ಲಿವೆ. -ಓಂಕಾರ ಕಾಕಡೆ, ಪ್ರಭಾರ ಕುಲಪತಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.