ಕ್ರಿಯಾಯೋಜನೆಯಂತೆ ಕೆಲಸ ಮಾಡಿ
Team Udayavani, Jul 29, 2020, 2:38 PM IST
ವಿಜಯಪುರ: ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿ ತ್ತೈಮಾಸಿಕ ಅವಧಿಯಲ್ಲಿ ಕ್ರಿಯಾಯೋಜನೆ ಅನ್ವಯ ಕಾರ್ಯ ನಿರ್ವಹಿಸಬೇಕು. ವಿವಿಧ ಮಹಿಳೆಯರ ಮತ್ತು ಮಕ್ಕಳ ಅನುಕೂಲಕ್ಕಾಗಿ ಚಟುವಟಿಕೆ, ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾ ಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರದ 2020-21 ನೇ ಸಾಲಿನ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂದಿನ 3 ತಿಂಗಳ ಅವ ಧಿಗೆ ರೂಪಿಸಿರುವ ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವ ಜೊತೆಗೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೋವಿಡ್ ಸೇರಿದಂತೆ ಸಾಂಕ್ರಾಮಿಕ ರೋಗ, ಕೋವಿಡ್ ನಿಯಂತ್ರಣಕ್ಕೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಯೋಗದಲ್ಲಿ ಜಿಲ್ಲೆಯ ಮಹಿಳೆಯರಲ್ಲಿ ಜಾಗೃತಿ, ಗ್ರಾಮ, ತಾಲೂಕು ಮಟ್ಟದ ಮಹಿಳೆಯರಲ್ಲಿ ಸರ್ಕಾರದ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಸಣ್ಣ ಹಣಕಾಸು ಉದ್ದಿಮೆ ಸ್ಥಾಪನೆ ಹಾಗೂ ವಿವಿಧ ಸಾಲ ಸೌಲಭ್ಯಗಳು, ಬಾಲ್ಯವಿವಾಹ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಮೌಡ್ಯಗಳ ನಿವಾರಣೆ ಸೇರಿದಂತೆ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಅಡಿಯಲ್ಲಿ ಪೋಷಣ ಅಭಿಯಾನ ಅಂಗವಾಗಿ ನಡೆಯುವ ಲಸಿಕಾ ಕಾರ್ಯಕ್ರಮ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆ, ಮಕ್ಕಗಳಿಗೆ ಶಿಕ್ಷಣ ಮತ್ತು ರಕ್ಷಣೆ ಕುರಿತಂತೆ ಸೂಕ್ತ ಅರಿವು ಪಾಲಕರಲ್ಲಿ ಮೂಡಿಸಬೇಕು ಎಂದರು.
2020-21ನೇ ಸಾಲಿನ ಕ್ರಿಯಾಯೋಜನೆ ಅನ್ವಯ ಗ್ರಾಮೀಣ-ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವಾರ್ಡ್ವಾರು ಸಮೂಹ ಮಾಧ್ಯಮ, ಆಕಾಶವಾಣಿ, ಎಸ್ಎಂಎಸ್, ಬಸ್ ನಿಲ್ದಾಣಗಳಲ್ಲಿ ಜಿಂಗಲ್ಸ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಕುರಿತು ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಸಖೀ ಒನ್ ಸ್ಟಾಪ್ ಸೆಂಟರ್ ಯೋಜನೆ ಜಿಲ್ಲಾ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗೌರವಧನ ಆಧಾರದ ಮೇಲೆ ಈ ಕೇಂದ್ರಗಳ ಸಿಬ್ಬಂದಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಈ ಕೇಂದ್ರಗಳಲ್ಲಿ 2020ರ ಏಪ್ರೀಲ್ ತಿಂಗಳಿಂದ ಜುಲೈವರೆಗಿನ ದಾಖಲಾದ ಪ್ರಕರಣಗಳು ಸೇರಿದಂತೆ ಈವರೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರ ಸಮಗ್ರ ಮತ್ತು ಸಮರ್ಪಕ ವರದಿಯೊಂದಿಗೆ ಚರ್ಚಿಸಬೇಕು. ಅದರಂತೆ ಇಂತಹ ಪ್ರಕರಣಗಳಲ್ಲಿ ಶೀಘ್ರ ಪರಿಹಾರ ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲಾ ಸಮನ್ವಯ ಮತ್ತು ಪರಿಶೀಲನಾ ಸಭೆ ನಡೆಸಿದ ಅವರು, 2019-20 ಹಾಗೂ 2020-21ನೇ ಸಾಲಿನ ಪ್ರಕರಣ ದಾಖಲು ಇತ್ಯರ್ಥ ಸೇರಿದಂತೆ ಸೂಕ್ತ ಮಾಹಿತಿಗಳೊಂದಿಗೆ ವರದಿ ಸಿದ್ಧಪಡಿಸಿ ಮಂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾನೂನಿನ ಕುರಿತಂತೆ ಪ್ರತಿ ಗ್ರಾಮವಾರು ಗ್ರಾಮಸ್ಥರಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ತಿಳಿಹೇಳುವ ಜೊತೆಗೆ ಈವರೆಗೆ ಬಾಲ್ಯವಿವಾಹದಿಂದ ರಕ್ಷಿಸಿದ ಮಕ್ಕಳ ಬಗ್ಗೆಯೂ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.
ಜಿಪಂ ಸಿಇಒ ಗೋವಿಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆಲಗೂರ, ಸಿಡಿಪಿಒ ಚವ್ಹಾಣ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ