ಕೇಂದ್ರದ ವಿರುದ್ಧ ಕಾರ್ಮಿಕರ ಆಕ್ರೋಶ


Team Udayavani, Nov 27, 2020, 5:36 PM IST

vp-tdy-1

ವಿಜಯಪುರ: ಕೇಂದ್ರ ಸರ್ಕಾರ ರೈತ-ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿ ಕಾರ್ಮಿಕರ ವಿವಿಧ ಸಂಘಟನೆಗಳನೇತೃತ್ವದಲ್ಲಿ ಗುರುವಾರ ನಗರದಲ್ಲಿ ಬೃಹತ್‌ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಮುಷ್ಕರ ನಡೆಸಲಾಯಿತು.

ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದವು. ಮೆರವಣಿಗೆಯಲ್ಲಿ ಕೇಂದ್ರ ಸರಕಾರದ ಕಾರ್ಮಿಕ, ರೈತ, ಜನ ವಿರೋಧಿ  ನೀತಿಗಳ ವಿರುದ್ಧ ಧಿಕ್ಕಾರ ಕೂಗಿ, ಕಾರ್ಮಿಕ ಕಾನೂನು ತಿದ್ದುಪಡಿ ನಿಲ್ಲಿಸಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಾಪಸ್‌ ಪಡೆಯಿರಿ ಎಂದು ಆಗ್ರಹ ಮಾಡಲಾಯಿತು.

ಈ ವೇಳೆ ಮಾತನಾಡಿದ ಕಾರ್ಮಿಕ ಸಂಘಟನೆಗಳ ಮುಖಂಡರು, ಕೋವಿಡ್‌-19 ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ,ಪರಿಸ್ಥಿತಿಯ ದುರುಪಯೋಗ ಮಾಡಿಕೊಳ್ಳಲುಮುಂದಾಗಿದೆ. ಇದಕ್ಕಾಗಿ ದೇಶದ ರೈತರು, ಕಾರ್ಮಿಕರು, ನೌಕರರು ಹಾಗೂ ಸಾರ್ವಜನಿಕ ಹಿತಕ್ಕೆ ಧಕ್ಕೆ ಆಗುವಂಥ ನಿರ್ಧಾರಗಳ ಮೂಲಕ ವಿವಿಧ ಕಾನೂನುಗಳಿಗೆ ತಿದ್ದುಪಡಿ ತಂದಿದೆ. ಇದರಿಂದ ದೇಶದ ಜನರ ಹಕ್ಕುಗಳ ದಮನ ಮಾಡುವ ಕೆಲಸ ನಡೆಸಿದೆ ಎಂದು ಹರಿಹಾಯ್ದರು.

ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಬಂಡವಾಳಿಗರ ಪರ ನಿರ್ಧಾರಕ್ಕೆ ಮುಂದಾಗಿ, ದೇಶದ ಸಂಪತ್ತನ್ನು ಮಾರಾಟಕ್ಕಿಟ್ಟಿದೆ. ಇದರಿಂದ ಭವಿಷ್ಯದಲ್ಲಿ ದೇಶದ ಕಾರ್ಮಿಕರ ಬದುಕು ದುರ್ಬರಗೊಳ್ಳಲಿದೆ. ದೇಶ ಕಟ್ಟುವ ಕೆಲಸ ಮಾಡುವ ಕಾರ್ಮಿಕರನ್ನು ಬೀದಿಪಾಲು ಮಾಡುವ ಹುನ್ನಾರ ನಡೆಸಿದೆ. ಸಂಪತ್ತು ಸೃಷ್ಟಿಯಲ್ಲಿ ಭಾರತದ ಕಾರ್ಮಿಕರು ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಕಾರ್ಮಿಕ ವಿರೋಧಿ ನಡೆಯಿಂದ ಹಿಂದೆ ಸರಿದು, ದೇಶದ ಹಿತದೃಷ್ಟಿಯಿಂದ ಕಾರ್ಮಿಕ ಪರ ನೀತಿಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ದೇಶದ ಬಡಜನತೆಯ ಸಾರಿಗೆ ವ್ಯವಸ್ಥೆಯಾದ ರೈಲ್ವೆ, ಬ್ಯಾಂಕ್‌ ವಿಮೆಯಂತಹ ಸಾರ್ವಜನಿಕ ಸೇವೆಗಳನ್ನು ಖಾಸಗೀಕರಣ ಮಾಡಿ ಉದ್ಯೋಗ ಕಸಿಯವ ಕೆಲಸ ನಡೆಯುತ್ತಿದೆ. ಇಂಥ ಕರಾಳ ನೀತಿಗಳ ವಿರುದ್ಧ ಹೋರಾಟ ನಡೆಸುವ ಕಾರ್ಮಿಕರ ಪ್ರತಿಭಟನಾ ಹಕ್ಕನ್ನು ದಮನ ಮಾಡಲಾಗಿದೆ. ತಮ್ಮ ದುರಾಡಳಿತ ಮುಚ್ಚಿಕೊಳ್ಳಲು ದೇಶದ ಆಸ್ತಿ ಮಾರಾಟಕ್ಕೆ ಮುಂದಾಗಿದ್ದಲ್ಲದೇ ಭಾರತವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ. ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅಗತ್ಯಶುಲ್ಕ ವಿ ಧಿಸುವ ಮೂಲಕ ಹಣ ಮಾಡುವ ಕೆಲಸದಲ್ಲಿ ತೊಡಗಿದ್ದಲ್ಲದೇ ದೇಶದ ಜನರ ಮೇಲೆ ಆರ್ಥಿಕ ಹೊರೆ ಹೇರಲು ಮುಂದಾಗಿದೆ.

ಕೃಷಿ ಕ್ಷೇತ್ರದ ಕಾರ್ಪೊರೇಟೀಕರಣಕ್ಕೆ ಮುಕ್ತ ಅವಕಾಶ ನೀಡುತ್ತವೆ. ಕೃಷಿ ಉತ್ಪನ್ನಗಳಿಗೆ ಯಾವುದೇ ಕನಿಷ್ಠ ಬೆಂಬಲ ಬೆಲೆಯ ಖಚಿತತೆ ನೀಡದೇ ಅಗತ್ಯ ವಸ್ತುಗಳ ಕಾಯ್ದೆ ಸಹ ಮಂಡಿಸಲಾಗಿದೆ. ಮತ್ತೂಂದೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಸಾರ್ವಜನಿಕರೂ ಪರದಾಡುವಂತೆ ಮಾಡಿದೆ ಎಂದು ವಾಗ್ಧಾಳಿ ನಡೆಸಿದರು. ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಭೀಮಶಿ ಕಲಾದಗಿ, ಗ್ರಾಮೀಣ ಬ್ಯಾಂಕ್‌ ಯೂನಿಯನ್‌ ರಾಷ್ಟ್ರೀಯ ಕಾರ್ಯದರ್ಶಿ ಜಿ.ಜಿ. ಗಾಂಧಿ , ಸಿಐಟಿಯು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಹಂದ್ರಾಳ, ಆರ್‌.ಕೆ.ಎಸ್‌. ಜಿಲ್ಲಾ ಸಂಚಾಲಕ ಬಾಳುಜೇವೂರ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಅಂಗನವಾಡಿ ನೌಕರರ ಜಿಲ್ಲಾಧ್ಯಕ್ಷೆ ಸುನಂದಾ ನಾಯಕ, ಆಶಾ ಸಂಘಟನೆಯ ಜಯಶ್ರೀ ಕಂಬಾರ, ಬಿಸಿಯೂಟ ಸಂಘಟನೆಯಿಂದ ಸುಮಂಗಲಾ ಆನಂದಶೆಟ್ಟಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ ಗಂಟೆಪ್ಪಗೋಳ. ಎಸ್‌.ಆರ್‌. ನಾಯಕ, ಭಾರತಿ ದೇವಕತೆ, ಅಂಬಿಕಾ ಒಳಸಂಗ, ಲೈಲಾ ಪಠಾಣ, ಸುರೇಖಾ ರಜಪೂತ, ಈರಣ್ಣ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.