ಶಾಸಕರಿಂದ ಕಾಮಗಾರಿ ವೀಕ್ಷಣೆ
Team Udayavani, Oct 29, 2019, 1:36 PM IST
ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಮುಳವಾಡ ಏತ ನೀರಾವರಿ ಯೋಜನೆಯ ಹಂತ-3ರಲ್ಲಿ ವಿಜಯಪುರ ಮುಖ್ಯ ಕಾಲುವೆ ಕೂಡಗಿ ಬಳಿ ಶಾಸಕ ಶಿವಾನಂದ ಪಾಟೀಲ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.
ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಚೇಂಬರ್ ನಿಂದ 500 ಮೀ. ಅಂತರದಲ್ಲಿರುವ ಕೂಡಗಿ ಬಳಿ ರೈಲ್ವೆ ಹಳಿ ದಾಟಿಸುವ ಕಾಮಗಾರಿ ಮಂದಗತಿಯಲ್ಲಿ ಈಗ ಸ್ಥಗಿತಗೊಂಡಿತ್ತು. ನೀರು ನಿಲುಗಡೆಯಾಗಿದ್ದನ್ನು ಗಮನಿಸಿದ ಶಾಸಕರು, ಈಗ ಮಳೆಯಾಗಿದೆ. ಹೇಗೊ ಕೆಲ ದಿನಗಳು ನಡೆಯುತ್ತದೆ, ಇನ್ನುಳಿದಂತೆ ಬೇಸಿಗೆಯಲ್ಲಿ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತದೆ ಎಂಬುದನ್ನು ತಿಳಿದುಕೊಂಡರು.
ನಂತರ ಕೃಷ್ಣಾ ಭಾಗ್ಯಜಲ ನಿಗಮದ ಆಲಮಟ್ಟಿ ವಲಯ ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಅವರಿಗೆ ದೂರವಾಣಿ ಕರೆ ಮಾಹಿತಿ ಪಡೆದ ಶಿವಾನಂದ ಪಾಟೀಲ, ಈಗ ರೈಲ್ವೆ ಇಲಾಖೆಯಿಂದ ಕಾಮಗಾರಿ ವಿಳಂಬವಾಗಿದೆ ಎನ್ನುವುದು ಸರಿಯಷ್ಟೇ. ಆದರೆ ಬೇಸಿಗೆಯಲ್ಲಿ ಜನರಿಗೆ ತೊಂದರೆಯಾಗಲಿದ್ದು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿ ಸಿ ಕಾಮಗಾರಿ ಬೇಗನೆ ಮುಗಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ