ಎಂಬಿಪಿ ಬಿಜೆಪಿಗೆ ಬಂದರೆ ಸಚಿವಗಿರಿ ಬಹಿರಂಗ ಆಹ್ವಾನ ನೀಡಿದ ಯತ್ನಾಳ
Team Udayavani, Sep 7, 2018, 6:55 AM IST
ವಿಜಯಪುರ: “ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಸಂಪುಟ ವಿಸ್ತರಣೆ ವೇಳೆ ಎರಡೂ ಪಕ್ಷಗಳಲ್ಲಿ ಬಿರುಕು ಕಾಣಿಸಿಕೊಳ್ಳಲಿದ್ದು, ಅತೃಪ್ತರು ಸರ್ಕಾರ ಪತನಗೊಳಿಸಲಿದ್ದಾರೆ. ಮೈತ್ರಿ ಸರ್ಕಾರ ಪತನವಾಗುತ್ತಲೇ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಎಂ.ಬಿ. ಪಾಟೀಲ ಬಿಜೆಪಿಗೆ ಬಂದರೆ ನಮ್ಮ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುತ್ತೇವೆ’ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಹಿರಂಗ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಕೃಷಿ ಅಧ್ಯಯನಕ್ಕೆ ತೆರಳಿರುವ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಪ್ರವಾಸದಿಂದ ಮರಳುವ ವೇಳೆಗೆ ಮೈತ್ರಿ ಸರ್ಕಾರ ಪತನವಾಗಿ, ಮಾಜಿ ಸಚಿವರಾಗಿ ತವರಿಗೆ ಬರಲಿದ್ದಾರೆ.ಮೇಲ್ಮನೆ ಚುನಾವಣೆಯಲ್ಲಿ ಎಂ.ಬಿ.ಪಾಟೀಲ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಅವರ ಸೋಲು ಖಚಿತ ಎಂದರು.
ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯಂಥ ಮಹತ್ವದ ಸ್ಥಾನ ನಿಭಾಯಿಸಿದರೂ ಸ್ಥಳೀಯ ಸಂಸ್ಥೆಯ ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡದೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಆ ಮೂಲಕ ತಮ್ಮ ಮತದಾನ ಕರ್ತವ್ಯ ನಿಭಾಯಿಸದೆ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ಸಚಿವ ಎಂ.ಸಿ.ಮನಗೂಳಿ ಅವರೂ ಮತದಾನ ಮಾಡದೆ ತಮ್ಮ ಕರ್ತವ್ಯ ನಿರ್ಲಕ್ಷಿಸಿದ್ದಾರೆ.
– ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು