ಆಲಮಟ್ಟಿಗೆ ಕೆಬಿಜೆಎನ್ಎಲ್ ಕಛೇರಿ ವಾಸ್ತವಿಕ ಸ್ಥಳಾಂತರದ ಹೊರತು ವಿರಮಿಸಲ್ಲ: ಯಾಸಿನ್


Team Udayavani, May 14, 2022, 2:55 PM IST

ಆಲಮಟ್ಟಿಗೆ ಕೆಬಿಜೆಎನ್ಎಲ್ ಕಛೇರಿ ವಾಸ್ತವಿಕ ಸ್ಥಳಾಂತರದ ಹೊರತು ವಿರಮಿಸಲ್ಲ: ಯಾಸಿನ್

ವಿಜಯಪುರ: ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಆಲಮಟ್ಟಿಗೆ ವಾಸ್ತವಿಕವಾಗಿ ಹಾಗೂ ಸಂಪೂರ್ಣವಾಗಿ ಸ್ಥಳಾಂತರ ಆಗುವ ವರೆಗೂ ಹೋರಾಟದಿಂದ ವಿರಮಿಸುವುದಿಲ್ಲ ಎಂದು ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘದ ಅಧ್ಯಕ್ಷ ಯಾಸಿನ್ ಜವಳಿ ಹೇಳಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಾಸಿನ್ ಜವಳಿ, 2018 ರಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಉತ್ತರ ಕರ್ನಾಟಕ ಭಾಗಕ್ಕೆ ಕೆಲವು ಕಛೇರಿಗಳ ಸ್ಥಳಾಂತರ ಮಾಡುವ ಆದೇಶ ಹೊರಡಿಸಿದ್ದು ಕಾಗದದಲ್ಲಿ ಮಾತ್ರ ಇತ್ತು. ಅದರಲ್ಲಿ ಆಲಮಟ್ಟಿಗೆ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸ್ಥಳಾಂತರವೂ ಸೇರಿತ್ತು. ಸರ್ಕಾರ ಹೊರಡಿಸಿದ ಆದೇಶ ಪಾಲನೆ ಆಗದ ಕಾರಣ ನಾನು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಸರ್ಕಾರ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವ ಹೆದರಿಕೆಯಿಂದ ವಾರದಲ್ಲಿ ಕಛೇರಿ ಸ್ಥಳಾಂತರಕ್ಕೆ ವಾರದ ಗಡುವು ನೀಡಿ ತುರ್ತು ಆದೇಶ ನೀಡಲಾಗಿದೆ ಎಂದು ಸರ್ಕಾರ ಹಾಗೂ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ತನೆಗೆ ಹರಿಹಾಯ್ದರು.

ಸರ್ಕಾರ ಉತ್ತರ ಕರ್ನಾಟಕಕ್ಕೆ ಕಛೇರಿಗಳ ಸ್ಥಳಾಂತರ ಆದೇಶದಂತೆ ಹಂಪಿ ಪುರಾತತ್ವ, ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ ನಿರ್ದೇಶಕರ ಕಛೇರಿ, ಬೆಳಗಾವಿಗೆ ಸಕ್ಕರೆ ನಿರ್ದೇಶಕರು ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಛೇರಿ ಸೇರಿದಂತೆ ಕೆಲವೇ ಕೆಲ ಕಛೇರಿಗಳು ಮಾತ್ರ ಹಾಗೂ ಭಾಗಶಃ ಸ್ಥಳಾಂತರ ಆಗಿವೆ ಎಂದು ದೂರಿದರು.

ವಕೀಲ ಇನಾಯತ್ ರೋಜೆವಾಲೆ ಮಾತನಾಡಿ, ಕೆಬಿಜೆಎನ್ಎಲ್ ಅಧಿಕಾರಿ ಪ್ರಭಾಕರ ಎಂಬ ಅಧಿಕಾರಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯನ್ನು ಆಲಮಟ್ಟಿಗೆ ಸ್ಥಳಾಂತರ ಮಾಡಿದ್ದಾಗಿ ಹೈಕೋರ್ಟಿಗೆ ಸುಳ್ಳು ಮಾಹಿತಿಯ ಅಫಿಡವಿಡ್ ಸಲ್ಲಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ಆಲಮಟ್ಟಿಗೆ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸ್ಥಳಾಂತರ ಅಗಿದ್ದರೂ ಕಛೇರಿ ಸ್ಥಳಾಂತರ ಆಗಿದೆ ಎಂದು ಸುಳ್ಳು ಮಾಹಿತಿ, ದಾಖಲೆ ನೀಡಲಾಗಿದೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೂ ದಾಖಲೆ ಅವಲೋಕಿಸುವ ಕೆಲಸವನ್ನೂ ಮಾಡಿಲ್ಲ ಎಂದು ದೂರಿದರು.

ಇದೀಗ ನ್ಯಾಯಾಲಯಕ್ಕೆ ವಾಸ್ತವಿಕ ಅಫಿಡವಿಟ್ ಸಲ್ಲಿಸುವ ಅನಿವಾರ್ಯತೆಯ ಭೀತಿಯಿಂದಾಗಿ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಮಂಜುನಾಥ ಎಂಬವರ ಮೂಲಕ ನಾವು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಉಲ್ಲೇಖಿಸಿ  ವಾರದಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸ್ಥಳಾಂತರಕ್ಕೆ ತುರ್ತು ಅದೇಶ ಮಾಡಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.