ಸಿದ್ಧಸಿರಿ ಸಹಕಾರಿಯಿಂದ ರೈತರಿಗೆ ಸೌಲಭ್ಯ : ಶಾಸಕ ಯತ್ನಾಳ್


Team Udayavani, Mar 30, 2021, 8:42 PM IST

ಕಜಹಗ್ದ

ವಿಜಯಪುರ: ನಗರದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಲಂಡನ್‌ ಹಾಗೂ ಟರ್ಕಿ ದೇಶಗಳಿಂದ ಅತ್ಯಂತ ಸುಧಾರಿತ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಸಿದ್ಧಸಿರಿ ಶೀತಲ ಘಟಕ ಸ್ಥಾಪಿಸಲಾಗಿದೆ. ದೇಶದಲ್ಲೇ ಈ ನೂತನ ತಂತ್ರಜ್ಞಾನ ಹೊಂದಿದ ಪ್ರಥಮ ಸೌಲಭ್ಯ ಇಲ್ಲಿ ದೊರೆಯಲಿದೆ ಎಂದು ಶಾಸಕರೂ ಆಗಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸೋಮವಾರ ಐನಾಪುರ ಗ್ರಾಮದಲ್ಲಿ ನಡೆದ ಪೂಜಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅತಿ ಶೀಘ್ರವೇ ಸಿದ್ದೇಶ್ವರ ಶ್ರೀಗಳಿಂದ ಈ ಘಟಕ ಲೋಕಾರ್ಪಣೆಗೊಂಡು ದ್ರಾಕ್ಷಿ ಬೆಳೆಗಾರರ ಸೇವೆಗೆ ಲಭ್ಯವಾಗಲಿದೆ. ದ್ರಾಕಿ ಬೆಳೆಗಾರರಿಗಾಗಿ ಇಂತಹ ಸುಧಾರಿತ ತಂತ್ರಜ್ಞಾನದಲ್ಲಿ ಈ ಸೇವೆ ನೀಡುವ ಭಾರತದ ಪ್ರಪ್ರಥಮ ಅತ್ಯಾಧುನಿಕ ಘಟಕವಾಗಲಿದೆ ಎಂದರು.

ಸದರಿ ಯಂತ್ರ ಸಂಪೂರ್ಣ ಸ್ವಯಂ ಚಾಲಿತವಾಗಿದೆ. ಒಣದ್ರಾಕ್ಷಿಯನ್ನು ಗುಣಮಟ್ಟಕ್ಕೆ ತಕ್ಕಂತೆ ವಿಂಗಡಿಸಿ, ಸ್ವತ್ಛಗೊಳಿಸಿ ಸ್ವಯಂ ತೂಕ ಮಾಡುತ್ತದೆ. ಪ್ಯಾಕಿಂಗ್‌ ಮಾಡಿ ಬಾರ್‌ಕೋಡ್‌ ನಮೂದಿಸುವ ವ್ಯವಸ್ಥೆ ಇದೆ. ಇದರಿಂದ ರೈತರಿಗೆ ಕಡಿಮೆ ಅವ ಧಿ, ವೆಚ್ಚದಲ್ಲಿ ಉತ್ಕೃಷ್ಟ ಸೇವೆ ಸಿಗಲಿದೆ. ನೆಟ್ಟಿಂಗ್‌, ಶಾರ್ಟಿಂಗ್‌ ಮತ್ತು ಗ್ರೈಂಡಿಂಗ್‌ ಪ್ರತಿ ಕೆ.ಜಿ.ಗೆ ಕೇವಲ 5 ರೂ. ವಾಶಿಂಗ್‌ 2 ರೂ. ದರ ನಿಗದಿ ಮಾಡಲಾಗಿದೆ ಎಂದರು. ರೈತರು ಇಡಲಾದ ಪ್ರತಿ ಟನ್‌ ಒಣದ್ರಾಕ್ಷಿ 1 ತಿಂಗಳಿಗೆ 550 ರೂ. ಬಾಡಿಗೆ ನಿಗದಿಪಡಿಸಿದೆ. ಶೀತಲ ಘಟಕದಲ್ಲಿ ದಾಸ್ತಾನಿಗೆ ತಕ್ಕಂತೆ ರೈತರಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಮೂಲಕ ಅಡಮಾನ ಸಾಲ ನೀಡಲಾಗುತ್ತದೆ.

ಗುಣಮಟ್ಟದ ಪ್ರತಿ ಕೆ.ಜಿ.ಗೆ 100 ರೂ. ಮಾರುಕಟ್ಟೆ ಬೆಲೆಯಿಂದ ನಿಗದಿ ಮಾಡಿದ್ದು, ಶೇ. 50 ಸಾಲ ನೀಡಲಾಗುತ್ತದೆ. ರೈತರ ಬೆಳೆ ರಕ್ಷಣೆಗಾಗಿ ಉತ್ತಮ ಗುಣಮಟ್ಟದ ಕೀಟನಾಶಕ, ರಸಗೊಬ್ಬರ ಮಾರಾಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು. ಸಿದ್ಧಸಿರಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂ.ಗು. ಸಜ್ಜನ, ಜಗದೀಶ ಕ್ಷತ್ರಿ, ರಾಮನಗೌಡ ಪಾಟೀಲ ಯತ್ನಾಳ, ಶೈಲಜಾ ಪಾಟೀಲ ಯತ್ನಾಳ, ಸೀಮಾ ಕೋರೆ, ಶಿವಾನಂದ ಅಣ್ಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕ ಜ್ಯೋತಿಬಾ ಖಂಡಾಗಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ್‌ ಅಣ್ಣಿಗೇರಿ ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.