ರಾಷ್ಟ್ರಧ್ವಜ ಹಿಡಿದು ಕುಣಿದಾಡಿದ ಶಾಸಕ ಯತ್ನಾಳ


Team Udayavani, Aug 6, 2019, 3:32 PM IST

vp-tdy-2

ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಎದುರು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.

ವಿಜಯಪುರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಕಲಂ 370 ಹಾಗೂ 35-ಎ ಕಲಂ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಲು ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರಾಷ್ಟ್ರಧ್ವಜ ಹಿಡಿದು ಕುಣಿದುಕುಪ್ಪಳಿಸಿ ಸಂಭ್ರಮಿಸಿದರು.

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಎದುರು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ರಾಷ್ಟ್ರಧ್ವಜ ಹಾಗೂ ಪಕ್ಷದ ಧ್ವಜ ಹಿಡಿದು ಬಂದಿದ್ದ ಕಾರ್ಯಕರ್ತರು ಜಯಘೋಷ ಕೂಗಲು ಆರಂಭಿಸಿದ್ದರು. ಈ ಹಂತದಲ್ಲಿ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತ ಜೊತೆ ಬೆರೆತು ರಾಷ್ಟ್ರ ಧ್ವಜ ಹಿಡಿದ ಶಾಸಕ ಯತ್ನಾಳ, ಕುಣಿದು ಕುಪ್ಪಳಿಸಿದರು.

ಈ ವೇಳೆ ಮಾತನಾಡಿದ ಶಾಸಕ ಯತ್ನಾಳ, ದೇಶದಲ್ಲಿ ಈಗಾಗಲೇ ತಲಾಖ್‌ಗೆ ತಿದ್ದುಪಡಿ ತರಲಾಗಿದೆ. ಈಗ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದಾಗಿದೆ. ಭವಿಷ್ಯದಲ್ಲಿ ದೇಶದಲ್ಲಿ ಏಕರೂಪದ ಕಾನೂನು ಜಾರಿ ಹಾಗೂ ದೇಶದಲ್ಲಿರುವ ಎಲ್ಲರಿಗೂ ಒಂದೇ ಮದುವೆ, ಎರಡೇ ಮಕ್ಕಳು ಕಾನೂನು ಜಾರಿಗೆ ತರುವುದು ಬಾಕಿ ಇದೆ ಎಂದರು.

ನಾವು ಐದವರು, ನಮಗೆ ಇಪ್ಪತ್ತೆದು ಎಂಬ ಮಾತು ಇನ್ನು ನಡೆಯುವುದಿಲ್ಲ. ದೇಶದಲ್ಲಿ ಇರಬೇಕಾದ್ರೆ ಭಾರತ ಮಾತಾಕೀ ಜೈ ಅನ್ನಬೇಕು, ವಂದೇ ಮಾತರಂ ಹೇಳಬೇಕು. ಇಲ್ಲವಾದರೆ ನೆಹರು ಮಾಡಿಕೊಟ್ಟಿರುವ ಪಾಕಿಸ್ತಾನಕ್ಕೆ ಹೋಗಬೇಕು. ರಾಜ್ಯಸಭೆಯ ಕಾಂಗ್ರೆಸ್‌ ನಾಯಕ ಗುಲಾಮ ನಬಿ ಅಜಾದ್‌ ಕರಾಳ ದಿನ ಎಂದು ಅಬ್ಬರಿಸಿದ ಕ್ರಮ ಖಂಡನಾರ್ಹ, ಇದು ಅವರ ಕುಟುಂಬಕ್ಕೆ ಕರಾಳ ದಿನವೇ ಹೊರತು ದೇಶದ ಜನತೆಗೆ ಐತಿಹಾಸಿಕ ಸುವರ್ಣ ದಿನ ಎಂದು ಬಣ್ಣಿಸಿದರು.

ಜಮ್ಮು-ಕಾಶ್ಮೀರದ 370ನೇ ಕಲಂ ಹಾಗೂ 35 (ಎ) ವಿಧಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಪ್ರಯುಕ್ತ ಪಟ್ಟಣದ ಹಿಂದೂ ಯುವ ಸಮಿತಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಶ್ರೀಧರ ಕ್ಷತ್ರಿ, ಮಲ್ಲು ಹಾವಿನಾಳಮಠ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಕೈಗೊಂಡಿರುವ ಕ್ರಮ ಸೂಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ನಮ್ಮ ಸೇನೆಯನ್ನು ಅತೀ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿತ್ತು. ನಮ್ಮ ದೇಶದಲ್ಲೇ ಇದ್ದರೂ ನಮಗೆ ಸಂಬಂಧವಿರದೇ ಇರುವ ತರಹ ಅಲ್ಲಿ ಕಾನೂನು ಇತ್ತು. ಈಗ ಎಲ್ಲದಕ್ಕೂ ಮುಕ್ತಿ ದೊರೆತಿದೆ ಎಂದರು.

ರಾಜಗುರು ದೇವರ, ಶಂಕರಸಿಂಗ್‌ ಹಲವಾಯಿ ಮಾತನಾಡಿದರು. ವಿನೋದ ಹದಗಲ್, ಪ್ರವೀಣ ಮಠ, ರಾಘು ಗಡಗಲಿ, ವಿಶ್ವನಾಥ ದೇಸಾಯಿ, ವಿಶಾಲ ಮಾಜನಶೆಟ್ಟಿ, ಪ್ರಫುಲ್ ಲಾಳಸಂಗಿ, ರಮೇಶ ಮೇತ್ರಿ, ನಾಗೇಶ ಸಿಂದೆ, ಸುಧೀರ ಕರಿಕಟ್ಟಿ, ಸಿದ್ದು ಗೊರನಾಳ, ಅಖೀಲ್ ಬಂಕೂರ, ಶುಭಂ ಗಿರಣಿವಡ್ಡರ, ಅಕ್ಷಯ ಪಾಟೀಲ, ಪ್ರವೀಣ ಕೆಣಗಿ ಇದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.