ಯುವ ಜನರಲ್ಲಿ ಬೆಳೆಯಬೇಕಿದೆ ಭಾವೈಕ್ಯ-ಸಹೋದರತೆ ಭಾವ


Team Udayavani, Oct 27, 2018, 12:52 PM IST

vij-2.jpg

ವಿಜಯಪುರ: ರಾಷ್ಟ್ರ ನಿರ್ಮಾಣ ಹಾಗೂ ಭಾವೈಕ್ಯತೆ ಭಾವನೆ ಬೆಳೆಸುವುದು ಯುವಕರ ಆದ್ಯ ಕರ್ತವ್ಯ ಎಂದು ಜಾವೇದ್‌ ಜಮಾದಾರ ಹೇಳಿದರು. ವಿಜಯಪುರದ ಅಂಜುಮನ್‌ ಬಿ.ಎಡ್‌ ಕಾಲೇಜು ಸಭಾಭವನದಲ್ಲಿ ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ಎನ್ನೆಸ್ಸೆಸ್‌ ಘಟಕ ಅಂಜುಮನ್‌ ಇಸ್ಲಾಮ ಸಂಸ್ಥೆ ಆಶ್ರಯದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರದಿಂದಲೇ ನಿಸ್ವಾರ್ಥ ಸೇವೆ ಸಲ್ಲಿಸಿದರೆ ರಾಷ್ಟ್ರ ಸೇವೆಯಾಗುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಯುವ ಜನರಲ್ಲಿ ರಾಷ್ಟ್ರೀಯ ಭಾವೈಕ್ಯ ಮತ್ತು ಸಹೋದರತೆ ಭಾವನೆ ಬೆಳೆಸುವುದು ಅವಶ್ಯಕವಾಗಿದೆ. ಯುವಕರು ಸಮಾಜಕ್ಕೆ ಕೈಲಾದಷ್ಟು ಸೇವೆ ಸಲ್ಲಿಸಬೇಕು. ರಾಷ್ಟ್ರೀಯ ಭಾವೈಕ್ಯತೆಗೆ ಪ್ರಮಾಣಿಕವಾಗಿ ಶ್ರಮ ಹಾಗೂ ಸಮರ್ಪಣಾ ಭಾವ ಬೆಳೆಸಿಕೊಳ್ಳಬೇಕು ಎಂದರು.

ಎನ್ನೆಸ್ಸೆಸ್‌ ಜಿಲ್ಲಾ ನೋಡೆಲ್‌ ಅಧಿಕಾರಿ ಡಾ| ಎಚ್‌. ಎಂ. ಸಜ್ಜಾದೆ ಮಾತನಾಡಿ, ಯುವಕರು ಸಮಯ ವ್ಯರ್ಥ ಮಾಡದೆ ಹಿರಿಯರ ಮಾರ್ಗದರ್ಶನದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು. ಆದ್ದರಿಂದ ಯುವಕರು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೇ ಸಮಗ್ರ ಭಾರತದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಮೇಯರ್‌ ಸಜ್ಜಾದೆ ಪೀರಾ ಮುಶ್ರೀಫ್‌ ಮಾತನಾಡಿ, ನೆಹರು ಯುವ ಕೇಂದ್ರ ಯುವಕರನ್ನು ಗುರುತಿಸಿ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಾತ್ಮಕ ಕಾರ್ಯದಲ್ಲಿ ತೊಡಗಿಸುತ್ತಿರುವುದು ಶ್ಲಾಘನೀಯ. ಯುವಕರು ತನು-ಮನದಿಂದ ಸಕ್ರೀಯವಾಗಿ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಂಜುಮನ್‌ ಸಂಸ್ಥೆ ಚೇರಮನ್‌ ಅಲ್‌ಹಜ್‌ ಮಹಾಬೂಬಖಾದ್ರಿ ಮುಶ್ರೀಫ್‌, ಡಾ| ಶಾರದಾಮಣಿ ಹುಣಶ್ಯಾಳ, ಎನ್‌ವೈಕೆ ಜಿಲ್ಲಾ ಸಮನ್ವಯಾಧಿಕಾರಿ ಡಿ. ದಯಾನಂದ ಮಾತನಾಡಿದರು. ಸುನೀಲಕುಮಾರ ಯಾದವ, ಡಾ| ಆರ್‌.ಎಸ್‌. ಮೂಲಿಮನಿ, ಡಾ| ಎಸ್‌.ಎಸ್‌. ಹುಣಶ್ಯಾಳ ನಿರ್ಣಾಯಕರಾಗಿ ಪಾಲ್ಗೊಂಡಿದ್ದರು. ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನಬಾಗೇವಾಡಿ, ವಿಜಯಪುರ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ಪಾಲ್ಗೊಂಡಿದ್ದರು. ಧರೆಪ್ಪ ಪೂಜಾರಿ ಸ್ವಾಗತಿಸಿದರು. ಮಾಳಿಂಗರಾಯ ಕಡ್ಲಿಮಟ್ಟಿ ವಂದಿಸಿದರು.

ಬಹುಮಾನ ವಿತರಣೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎಎಸ್‌ಪಿ ಕಾಲೇಜಿನ ಶ್ವೇತಾ ಜೈನ್‌ ಪ್ರಥಮ ಸ್ಥಾನ ಪಡೆದು 5 ಸಾವಿರ ರೂ. ನಗದು ಸಹಿತ ಬಹುಮಾನ ಪಡೆದರು.  ಗಾರಮ್ಮ ಸಜ್ಜನ ಕಾಲೇಜಿನ ಲಾಲಬಿ ಎಲಗಾರ ದ್ವಿತೀಯ ಸ್ಥಾನ ಪಡೆದು 2 ಸಾವಿರ ರೂ. ನಗದು, ಬಸವನಬಾಗೇವಾಡಿಯ ಮಶಾಕ ಗೌಂಡಿ ತೃತೀಯ ಸ್ಥಾನ ಪಡೆದರು. ಪ್ರಥಮ ಹಾಗೂ ದ್ವಿತೀಯ ವಿಜೇತರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.