ಹಣ ಕೊಟ್ಟರೆ ಸಿಗದ ಸರಕು ರಕ್ತ

ಸ್ವಾಮಿ ನರೇಂದ್ರಾಚಾರ್ಯಜಿ ಮಹಾರಾಜರ ಜನ್ಮೋ ತ್ಸವ-ರಕ್ತದಾನ ಶಿಬಿರ

Team Udayavani, Oct 13, 2019, 3:37 PM IST

13-October-13

ಭಾಲ್ಕಿ: ಇತ್ತೀಚೆಗೆ ಎಲ್ಲ ಭಾಗದಲ್ಲಿ ರಕ್ತದ ಅಭಾವ ಕಂಡು ಬರುತ್ತಿದೆ. ಬೇಡಿಕೆಗನುಗುಣವಾಗಿ ರಕ್ತ ಪೂರೈಕೆಯಾಗಬೇಕಾದರೆ ನವಯುವಕರು ರಕ್ತದಾನ ಮಾಡಲು ಉತ್ಸಾಹ ತೋರಬೇಕು ಎಂದು ಮುಖಂಡ ಕಿಶನರಾವ್‌ ಪಾಟೀಲ ಇಂಚೂರಕರ್‌ ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಾರಾಷ್ಟ್ರದ ನಾಣಿಜಧಾಮ ಪೀಠದ ಸ್ವಾಮಿ ನರೇಂದ್ರಾಚಾರ್ಯಜೀ ಮಹಾರಾಜರ ಜನ್ಮೋತ್ಸವ ಅಂಗವಾಗಿ ಶ್ರೀ ಸಂಪ್ರದಾಯ ಸೇವಾ ಸಮಿತಿ ಮತ್ತು ಕನ್ನಡಪರ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಣ ಕೊಟ್ಟರೆ ಬೇರೆಲ್ಲ ಸರಕುಗಳು ತುರ್ತಾಗಿ ಸಿಗಬಹುದು. ಆದರೆ ಬೇರೆ ಬೇರೆ ಗುಂಪಿನ ರಕ್ತ ಲಭ್ಯವಾಗುವುದು ಕಷ್ಟದ ಕೆಲಸ. ಕಾರಣ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವ ಮಹಾತ್ಕಾರ್ಯಕ್ಕೆ ಎಲ್ಲ ಧರ್ಮದವರು ಕೈ ಜೋಡಿಸಬೇಕು ಎಂದು ಹೇಳಿದರು.

ಕನ್ನಡಪರ ಒಕ್ಕೂಟದ ಅಧ್ಯಕ್ಷ ಜೈರಾಜ ಕೊಳ್ಳಾ ಮಾತನಾಡಿ, ಸ್ವಾಮಿ ನರೇಂದ್ರಾಚಾರ್ಯಜೀ ಮಹಾರಾಜರ 112 ಜನ ಅಭಿಮಾನಿ ಭಕ್ತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದು ವಿಶೇಷವಾಗಿದೆ. ಪೂಜ್ಯರ ಆಶೀರ್ವಾದ ಅವರಿಗೆ ಲಭಿಸಲಿದೆ ಎಂದರು.

ಶ್ರೀ ಸಂಪ್ರದಾಯ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಾಲಾಜಿ ಕೋಠಾರೆ ಮಾತನಾಡಿ, ಸ್ವಾಮಿ ನರೇಂದ್ರಾಚಾರ್ಯಜೀ ಅವರ ಜನ್ಮದಿನೋತ್ಸವ ಅ.21ಕ್ಕೆ ನೆರವೇರುತ್ತದೆ. ಆ ನಿಮಿತ್ತ ಅಕ್ಟೋಬರ್‌ 2ರಿಂದ 15ರ ವರೆಗೆ ಜಿಲ್ಲಾದಾದ್ಯಂತ 7 ಕಡೆ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರಾಚಾರ್ಯ ಅಶೋಕ ರಾಜೋಳೆ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ನಗರ ಠಾಣೆಯ ಸಿಪಿಐ ಬಿ.ಅಮರೇಶ, ಕಲ್ಯಾಣ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಶೆಟೆಪ್ಪ ಲಂಜವಾಡೆ, ವೈಜಿನಾಥ ತಗಾರೆ, ವಿಠಲರಾವ್‌ ಮೇತ್ರೆ, ಟಿಎಚ್‌ಒ ಡಾ| ಜ್ಞಾನೇಶ್ವರ ನಿರಗೂಡೆ, ಸಿಎಂಒ ಡಾ|ರವಿ ಕಲಶೆಟ್ಟೆ, ರೋಟರಿ ಅಧ್ಯಕ್ಷ ಡಾ|ನಿತೀನ ಪಾಟೀಲ, ಪ್ರಾಚಾರ್ಯ ಎಸ್‌. ಎಸ್‌.ರಾಮಪೂರೆ, ಸತ್ಯವಾನ ವೈರಾಗೆ, ಬಮಶೆಟ್ಟಿ ಬಿರಾದಾರ, ಶ್ರೀ ಸಂಪ್ರದಾಯ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಶ್ರೀಧರ ಬಗದೂರೆ, ಓಂ ಪಾಟೀಲ, ಸಂಗಮೇಶ ಗುಮ್ಮೆ, ಮಾಳಸಕಾಂತ ವಾಘೆ , ಪ್ರಭು ಡಿಗ್ಗೆ, ಪಾಂಡುರಂಗ ಪಾಟೀಲ, ನಾಗನಾಥ ಪಾಟೀಲ, ದತ್ತಾತ್ರಯ ಧನುರೆ, ಲಕ್ಷ್ಮಣ ಪಾಟೀಲ, ಸಂಜೀವಕುಮಾರ ಬಿರಾದಾರ, ಅಯೋಧ್ಯತಾಯಿ ಸೂರ್ಯವಂಶಿ, ಮಂಗಳಾ ಸೋನಕಾಂಬಳೆ, ವಾಮನರಾವ್‌ ಮಾನೆ ಉಪಸ್ಥಿತರಿದ್ದರು. ತಾನಾಜಿ ಪಾಟೀಲ ಸ್ವಾಗತಿಸಿದರು. ಸಂಪ್ರದಾಯ ಸಮಿತಿ ಜಿಲ್ಲಾ ಸಚಿವ ಸತ್ಯವಾನ ಸೋಮವಂಶಿ ನಿರೂಪಿಸಿದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.