ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ
Team Udayavani, May 6, 2019, 10:07 AM IST
ಸೇಡಂ: ಮುಖ್ಯ ರಸ್ತೆ ಕಾಮಗಾರಿ ವೇಳೆ ಸರಿಯಾದ ಮಾರ್ಗಸೂಚಿ ಇಲ್ಲದ ಪರಿಣಾಮ ಟ್ರಾಫಿಕ್ ಜಾಮ್ ಆಗಿತ್ತು.
ಸೇಡಂ: ಪಟ್ಟಣದ ಮುಖ್ಯ ರಸ್ತೆ ಮತ್ತು ಸಿನಿಮಾ ರಸ್ತೆಗಳ ಕಾಮಗಾರಿಗಳು ಅವೈಜ್ಞಾನಿಕತೆಯಿಂದ ಕೂಡಿದ್ದು, ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ನಿರ್ಮಿಸಲಾಗುತ್ತಿದೆ.
ಕೋಟ್ಯಂತರ ರೂ. ವ್ಯಯಿಸಿ ಮುಖ್ಯ ರಸ್ತೆ ನಿರ್ಮಿಸಲಾಗುತ್ತಿದೆ. ಪೊಲೀಸ್ ಠಾಣೆಯಿಂದ ಪ್ರವಾಸಿ ಮಂದಿರ ಮತ್ತು ರೈಲ್ವೆ ನಿಲ್ದಾಣದಿಂದ ಚೌರಸ್ತಾ, ತ್ರಿವೇಣಿ ಲಾಡ್ಜ್ದಿಂದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ವರೆಗೆ ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವ ಜನರ ಬೇಡಿಕೆಗೆ ಕೆಲ ತಿಂಗಳ ಹಿಂದೆ ಚಾಲನೆ ದೊರೆತಿತ್ತು.
ಗುತ್ತಿಗೆದಾರರ ಅಚಾತುರ್ಯವೋ ಅಥವಾ ಅಧಿಕಾರಿಗಳ ಜಾಣ ಕುರುಡುತನವೋ ಗೊತ್ತಿಲ್ಲ. ಇಡೀ ಕಾಮಗಾರಿ ಅವೈಜ್ಞಾನಿಕತೆಯಿಂದ ಕೂಡಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪಟ್ಟಣದ ಪ್ರಮುಖ ರಸ್ತೆ ಇದಾಗಿದ್ದು, ಕೋಟ್ಯಂತರ ರೂ. ವ್ಯಯಿಸಲಾಗುತ್ತಿದೆ. ಆದರೆ ರಸ್ತೆ ಮಧ್ಯೆ ಬರುವ ವಿದ್ಯುತ್ ಕಂಬ, ಬಿಡಿ ಟೆಂಟ್ಗೆ ಹಾಕುವ ಹಗ್ಗವನ್ನು ತೆರವುಗೊಳಿಸಿಲ್ಲ.
ಬಿರು ಬೇಸಿಗೆಯಾಗಿದ್ದರಿಂದ ಸಿಮೆಂಟ್ಗೆ ಸರಿಯಾಗಿ ನೀರುಣಿಸದೇ ಇದ್ದಲ್ಲಿ ಭವಿಷ್ಯದಲ್ಲಿ ಬಿರುಕು ಬಿಡುವ ಸಂಭವವಿದ್ದರೂ ನೀರುಣಿಸುವ ಕಾರ್ಯ ಅಸಮರ್ಪಕವಾಗಿದೆ ಎನ್ನುವುದು ಸಾರ್ವಜನಿಕರ ದೂರಾಗಿದೆ. ಸರಸ್ವತಿ ಟಾಕೀಸ್ ರಸ್ತೆಯೂ ಕಳಪೆ ಮಟ್ಟದಿಂದ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ ಮಧ್ಯದ ಕಂಬಗಳನ್ನು ತೆರವುಗೊಳಿಸುತ್ತಿಲ್ಲ.
ಪ್ರತಿನಿತ್ಯ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಕಾಮಗಾರಿ ಜೊತೆ ಜೊತೆಗೆ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಎಚ್ಚರಿಕೆವಹಿಸಬೇಕಾದ ಗುತ್ತಿಗೆದಾರರು ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ. ಕಾಮಗಾರಿ ಪ್ರಗತಿಯಲ್ಲಿರುವ ಕುರಿತು ಎಚ್ಚರಿಕೆ ಫಲಕ ಅಥವಾ ಪರ್ಯಾಯ ಮಾರ್ಗದ ಸೂಚಿಯನ್ನು ಬಳಸಿಲ್ಲ.
ಟ್ರಾಫಿಕ್ ಕಿರಿಕಿರಿ: ಅಧಿಕಾರಿಗಳು ಮತ್ತು ಗುತ್ತಿಗೆದಾರರ ಅಚಾತುರ್ಯಕ್ಕೆ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ ಅನೇಕ ವಾಹನಗಳು, ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಪರ್ಯಾಯ ಮಾರ್ಗದ ಸೂಚಿ ಇಲ್ಲದ ಪರಿಣಾಮ ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ