ಮೈತ್ರಿ ಸರ್ಕಾರಕ್ಕೆ ತಕ್ಕ ಪಾಠ: ವಿರೂಪಾಕ್ಷಪ್ಪ

•14 ತಿಂಗಳ ದುರಾಡಳಿತಕ್ಕೆ ಕೊನೆ •ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Team Udayavani, Jul 25, 2019, 1:03 PM IST

25-JUly-26

ಬ್ಯಾಡಗಿ: ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಹಿನ್ನೆಲೆಯಲ್ಲಿ ಸ್ಥಳೀಯ ತಾಲೂಕು ಘಟಕದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು

ಬ್ಯಾಡಗಿ: ಬಿಜೆಪಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಹಿನ್ನೆಲೆಯಲ್ಲಿ ಸ್ಥಳೀಯ ತಾಲೂಕು ಘಟಕದ ಬಿಜೆಪಿ ಕಾರ್ಯಕರ್ತರು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ಪಟ್ಟಣದ ಹಳೇ ಪುರಸಭೆ ಎದುರು ವಿಜಯೋತ್ಸವ ಆಚರಿಸಿದರು.

ಬಳಿಕ ಮಾತನಾಡಿದ ಶಾಸಕ ವಿರೂಪಾಕ್ಷಪ್ಪ, ಕಳೆದ 14 ತಿಂಗಳಿಂದ ನಡೆಯುತ್ತಿದ್ದ ದುರಾಡಳಿತಕ್ಕೆ ತೆರೆ ಎಳೆದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಯಾರಿಗೂ ಶಾಶ್ವತವಲ್ಲ ಸರ್ಕಾರ ತಮ್ಮ ಸ್ವಂತ ಆಸ್ತಿ ಎಂಬಂತೆ ನಡೆದುಕೊಂಡ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಅದೇ ಪಕ್ಷದ ವಿಧಾನಸಭೆ ಸದಸ್ಯರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಜೆಡಿಎಸ್‌ ಜೊತೆ ಕೈಜೋಡಿಸಬೇಕೋ ಬೇಡವೋ ಎಂಬುದರ ಬಗ್ಗೆ ಸೋತ ಅಭ್ಯರ್ಥಿಗಳ ಹಾಗೂ ಗೆದ್ದ ಶಾಸಕರ ಅಭಿಪ್ರಾಯವನ್ನು ಸೌಜನ್ಯಕ್ಕೂ ಪಡೆದುಕೊಳ್ಳದ ಕಾಂಗ್ರೆಸ್‌ ಹೈಕಮಾಂಡ್‌ ತಮ್ಮ ಪಕ್ಷದ ವಿರುದ್ಧವೇ ಗೆಲುವು ಸೋಲುಗಳನ್ನು ಕಂಡಿದ್ದ ಜೆಡಿಎಸ್‌ ಜೊತೆ ಕೈಜೋಡಿಸಿದ್ದು ಎಷ್ಟರಮಟ್ಟಿಗೆ ಸರಿ? ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ತನ್ನ ನಿರ್ಧಾರವನ್ನು ಪ್ರಕಟಿಸಿದ್ದರ ಪರಿಣಾಮ ಮೈತ್ರಿ ಸರ್ಕಾರ ಪೂರ್ಣಾವಧಿ ಮುಗಿಸಲು ಸಾಧ್ಯವಾಗಲಿಲ್ಲ ಎಂದ ಅವರು, ಅದಕ್ಕಾಗಿಯೇ ಬಿಜೆಪಿ ಇದೊಂದು ಅಪವಿತ್ರ ಮೈತ್ರಿ ಎಂದು ಬಿಂಬಿಸಲು ಕಾರಣ ಎಂದರು.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಸಮರ್ಪಕ ಮಳೆಯಿಂದ ಕೃಷಿ ವೈಫಲ್ಯವಾಗಿದ್ದು, ಕಳೆದಾರು ವರ್ಷಗಳಿಂದ ಮೇಲೆ ಏಳದಂತಹ ಸ್ಥಿತಿ ತಲುಪಿದೆ. ಅಷ್ಟಕ್ಕೂ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಶರಣಾಗಿದ್ದು, ನೋವಿನ ಸಂಗತಿ ಆಣೂರು ಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡದೇ ದಿನಕ್ಕೊಂದು ಸುಳ್ಳು ಹೇಳಿಕೊಂಡು ತಿರುಗಾಡಿದ್ದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ವರ್ತನೆಯನ್ನು ಜಿಲ್ಲೆಯ ಯಾವೊಬ್ಬ ರೈತನು ಮರೆಯಲು ಸಾಧ್ಯವಿಲ್ಲ, ವಿಧಾನಸೌಧದಲ್ಲೇ ಕುಳಿತು ಇವರು ನಡೆಸಿದ ಕಳ್ಳಾಟಗಳಿಗೆ ಇದೀಗ ಉತ್ತರ ಸಿಕ್ಕಿದೆ ಎಂದರು.

ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ ಮಾತನಾಡಿ, ಸರ್ಕಾರ ಪತನಗೊಳ್ಳಲು ಕಾಂಗ್ರೆಸ್‌ ಶಾಸಕರ ರಾಜೀನಾಮೆ ಅಥವಾ ಬಿಜೆಪಿ ಆಪರೇಶನ್‌ ಕಮಲ ಎಂದೆಲ್ಲಾ ಕಾಂಗ್ರೆಸ್‌ ಹೈಕಮಾಂಡ್‌ ವ್ಯಾಖ್ಯಾಯಿನಿಸುತ್ತಿದೆ. ಶಾಸಕರ ನಿರ್ಧಾರಕ್ಕೆ ವಿರುದ್ಧವಾಗಿ ತಾನು ತೆಗೆದುಕೊಂಡ ನಿರ್ಣಯಕ್ಕೆ ಇಂದಿನ ಸ್ಥಿತಿ ಉದ್ಭವವಾಗಿದೆ. ಮೈತ್ರಿ ಸರ್ಕಾರ ರಚಿಸುವ ಸಮಯದಲ್ಲಿ ಅದಕ್ಕಿದ್ದ ಉತ್ಸಾಹವನ್ನು ಸರ್ಕಾರ ಬೀಳುವ ಸಂದರ್ಭದಲ್ಲಿ ಪ್ರದರ್ಶಿಸದೇ ಸುಮ್ಮನಿದ್ದುದೇ ಇದಕ್ಕೆ ಸಾಕ್ಷಿ ಎಂದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶಂಕ್ರಣ್ಣ ಮಾತನವರ, ಕಾರ್ಯದರ್ಶಿ ವಿರೇಂದ್ರ ಶೆಟ್ಟರ, ಪುರಸಭೆ ಸದಸ್ಯರಾದ ಬಿ.ಎಂ.ಛತ್ರದ, ಬಾಲಚಂದ್ರ ಪಾಟೀಲ, ಶಿವರಾಜ ಅಂಗಡಿ, ಮೆಹಬೂಬ್‌ ಅಗಸನಹಳ್ಳಿ, ಫಕ್ಕೀರಮ್ಮ ಛಲವಾದಿ, ಸುಭಾಸ್‌ ಮಾಳಗಿ, ಈರಣ್ಣ ಬಣಕಾರ, ಮಂಜಪ್ಪ ಬಾರ್ಕಿ, ಹನುಮಂತ ಮ್ಯಾಗೇರಿ, ಕಲಾವತಿ ಬಡಿಗೇರ, ಮುಖಂಡರಾದ ಮುರಿಗೆಪ್ಪ ಶೆಟ್ಟರ, ವಿ.ವಿ.ಹಿರೇಮಠ, ಚಂದ್ರಣ್ಣ ಮುಚ್ಚಟ್ಟಿ, ಜಯಣ್ಣ ಮಲ್ಲಿಗಾರ, ಚನ್ನವೀರಗೌಡ, ಜೆ.ಸಿ,ಚಿಲ್ಲೂರಮಠ, ಗಿರೀಶ್‌ ಇಂಡಿಮಠ, ಸುರೇಶ ಅಸಾದಿ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.