ಗುರುವಿನ ಕಾರ್ಯ ಸ್ಮರಣೀಯ


Team Udayavani, Jan 6, 2020, 4:47 PM IST

6-Jnauary-23

ಚಡಚಣ: ಮಕ್ಕಳು ಮೂಲ ಸೌಕರ್ಯಗಳನ್ನು ದಿನಂಪ್ರತಿ ಮೆಲುಕು ಹಾಕುತ್ತ ಚೆನ್ನಾಗಿ ಓದಬೇಕು. ಶಾಲೆಯನ್ನು, ಗುರುಗಳನ್ನು ಪ್ರೀತಿಸಬೇಕು. ಕಲಿತ ಶಾಲೆ ಬಗ್ಗೆ ಅಭಿಮಾನವಿದ್ದರೆ, ನಿಮಗೆ ಜೀವನದಲ್ಲಿ ಒಳ್ಳೆಯ ಫಲ ನೀಡುವುದು ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.

ದೇಗಿನಾಳ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಅಜ್ಞಾನದಿಂದ ಸುಜ್ಞಾನದೆಡೆಗೆ ಒಯ್ಯುವುದು ಗುರುವಿನ ಕಾರ್ಯ ಪವಿತ್ರ. 50 ವರ್ಷ ಜ್ಞಾನದ ದೀಪ ಬೆಳಗಿಸಿ ಮಕ್ಕಳನ್ನು ಉದ್ಧರಿಸಿದ ಜ್ಞಾನ ದೇಗುಲವಿದು. ಇಲ್ಲಿ ಶಿಕ್ಷಕರ ಪರಿಶ್ರಮ ಸಫಲವಾಗಿದೆ. ಒಂದು ಮಾವಿನ ಗಿಡವು ಎಲ್ಲರಿಗೂ ಸಿಹಿ ಹಣ್ಣು ಕೊಡುವಂತೆ ಶಾಲೆ ಜ್ಞಾನದ ವೃಕ್ಷವಾಗಿದೆ. ಜ್ಞಾನದ ಉತ್ತಮ ಫಲಗಳು ಇನ್ನೂ ಹೆಚ್ಚಿನ ಮಕ್ಕಳಿಗೆ ನೀಡಲಿ ಎಂದರು.

ಮಕ್ಕಳ ಕನಸು ನನಸಾಗಬೇಕಾದರೆ ಪ್ರಾಥಮಿಕ ಶಾಲೆ ಶಿಕ್ಷಣವೇ ಅಡಿಪಾಯ.
ಪ್ರಾಥಮಿಕ ಶಾಲೆಗಳು ಮುಚ್ಚಿದರೆ ಜಗವೆಲ್ಲ ಕತ್ತಲೆಯಾಗುತ್ತದೆ. ನಿಮ್ಮ ಮಕ್ಕಳು ಜಗತ್ತನ್ನು ಬೆಳಗಬೇಕಾದರೆ ಪ್ರಾಥಮಿಕ ಶಾಲೆಗಳು ಅವಶ್ಯಕ. ಹೀಗೆ ಇನ್ನೂ ಹೆಚ್ಚಿನ
ಜಾಣ ವಿದ್ಯಾರ್ಥಿಗಳನ್ನು ಈ ಪ್ರಪಂಚಕ್ಕೆ ಕೊಡುವಂತಾಗಲಿ ಎಂದು ಹಾರೈಸಿದರು.

ಅತಿಥಿಯಾಗಿ ಆಗಮಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ
ಮಾತನಾಡಿ, ಈ ಶಾಲೆ ನಿಸರ್ಗದ ಮಡಿಲಲ್ಲಿದ್ದು ಉತ್ತಮ ಶಿಕ್ಷಣ ನೀಡಿ ಜಾಣ
ವಿದ್ಯಾರ್ಥಿಗಳನ್ನು ತಯಾರಿಸುವ ಶಕ್ತಿ ಕೇಂದ್ರವಾಗಿದೆ ಎಂದು ಹೇಳಿದರು.

ತಿಕೋಟಾ ವಿರಕ್ತ ಮಠದ ಶಾಂತಲಿಂಗೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿ, ಬಾ ಮರಳಿ ಶಾಲೆಗೆ ಕಂದಾ ಎಂಬ ನುಡಿಯಲ್ಲಿ ಪಾಲಕರು ಎಲ್ಲ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದೇ ಸರಕಾರಿ ಶಾಲೆಗಳಿಗೆ ಕಳುಹಿಸಿದರೆ ನಿಮ್ಮ ಆಸೆಗಳನ್ನು ಈಡೇರಿಸುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ಪ ಹಾದಿಮನಿ, ಜಿಪಂ ಸದಸ್ಯ ಮಹಾದೇವ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರೋಬಾ ಬಿರಾದಾರ, ಸಂಭಾಜಿರಾವ್‌ ಮಿಸಾಳೆ, ದಯಾಸಾಗರ ಪಾಟೀಲ, ಶ್ರೀಮಂತ ಇಂಡಿ, ಅರ್ಜುನ ಬಿರಾದಾರ, ರಮೇಶ ಜಾಧವ, ಬಸವರಾಜ ಸಾಹುಕಾರ, ಎಸ್‌.ಬಿ. ಬೊಳೇಗಾಂವ, ಶಿಕ್ಷಕರಾದ ಎಂ.ಎಸ್‌. ಹಿರೇಮಾಳ, ಎಸ್‌.ಡಿ. ಪಾಟೀಲ, ವೈ.ಡಿ. ಬಸನಾಳ, ಆರ್‌.ಸಿ. ಚವ್ಹಾಣ, ಪಿ.ಎನ್‌. ಗೋಕಾವಿ, ಅನುಪಮಾ ಕೆ.ಎಂ, ಎನ್‌.ಡಿ. ಮಸಳಿ, ರಮೇಶಗೌಡ ಬಿರಾದಾರ, ರವಿ ಹಿರೇಮಠ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.