ಬಸ್ಪಾಸ್ ದರ ಹೆಚ್ಚಳ ಕೈಬಿಡಿ: ಭಾನುಪ್ರಸಾದ್
Team Udayavani, Jun 19, 2019, 4:05 PM IST
ಚಳ್ಳಕೆರೆ: ವಿದ್ಯಾರ್ಥಿ ಬಸ್ ಪಾಸ್ ದರ ಹೆಚ್ಚಳ ಖಂಡಿಸಿ ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಚಳ್ಳಕೆರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳ ನಡುವೆ ಶಾಲಾ- ಕಾಲೇಜುಗಳಿಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಾಸ್ತವ ಸ್ಥಿತಿಯನ್ನು ಅರಿಯದೆ ಏಕಾಏಕಿ ಬಸ್ ಪಾಸ್ ಶುಲ್ಕವನ್ನು ಹೆಚ್ಚಳ ಮಾಡಿರುವುದನ್ನು ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ ಎಂದು ಎಬಿವಿಪಿ ತಾಲೂಕು ಸಂಚಾಲಕ ಭಾನುಪ್ರಸಾದ್ ಹೇಳಿದರು.
ಬಸ್ ಪಾಸ್ ದರ ಏರಿಕೆ ವಿರುದ್ಧ ತಾಲೂಕು ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದ ಸರ್ಕಾರ ವಿದ್ಯಾರ್ಥಿಗಳ ಪಾಸ್ ದರವನ್ನು ಹೆಚ್ಚಿಸದೆ ಸಹಕರಿಸಿತ್ತು. ಬಹುತೇಕ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್ಗಳನ್ನೇ ಅವಲಂಬಿಸಿದ್ದಾರೆ. ಪಾಸ್ ಪಡೆದು ನಿತ್ಯ ಶಾಲಾ-ಕಾಲೇಜುಗಳಿಗೆ ಓಡಾಡುತ್ತಾರೆ. ಆದರೆ ರಾಜ್ಯ ಸರ್ಕಾರ ಯಾವುದೇ ಸೂಚನೆ ನೀಡದೆ ವಿದ್ಯಾರ್ಥಿಗಳ ಪಾಸ್ ದರವನ್ನು ಸಹ ಹೆಚ್ಚಿಸಿರುವುದು ಖಂಡನೀಯ. ಕೂಡಲೇ ಹೆಚ್ಚಿಸಿದ ದರವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಎಬಿವಿಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಚ್ಪಿಪಿಸಿ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಜಗಜೀವನರಾಮ್ ವೃತ್ತ, ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ನೆಹರೂ ವೃತ್ತಕ್ಕೆ ಆಗಮಿಸಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ವೈಭವ ಬಾದ್ವಿ, ನಗರ ಘಟಕದ ಸಂಚಾಲಕ ಲವಕುಮಾರ್, ತೇಜು, ವೆಂಕಟೇಶ್, ಅಮರ್, ಶಿವು ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Puttur ಎಲೆಕ್ಷನ್ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ