ದೇವರ ಎತ್ತುಗಳಿಗೆ 350 ಟನ್‌ ಮೇವು ವಿತರಣೆ

ಜಾನುವಾರುಗಳ ಮೇವು ಪೂರೈಕೆ ವೆಚ್ಚ ರಾಮಕೃಷ್ಣಾಶ್ರಮದ ಜವಾಬ್ದಾರಿ: ಜಪಾನಂದಜೀ ಮಹಾರಾಜ್‌

Team Udayavani, May 8, 2019, 4:34 PM IST

8-May-30

ಚಳ್ಳಕೆರೆ: ನಗರದ ಪ್ರವಾಸಿಮಂದಿರದಲ್ಲಿ ಸ್ವಾಮಿ ಜಪಾನಂದಜೀ ಮಹಾರಾಜ್‌ ಅವರು ತಹಶೀಲ್ದಾರರೊಂದಿಗೆ ಚರ್ಚೆ ನಡೆಸಿದರು.

ಚಳ್ಳಕೆರೆ: ಕಳೆದ ಹಲವಾರು ದಶಕಗಳಿಂದ ಗ್ರಾಮೀಣ ಪ್ರದೇಶದ ದೇವರ ಎತ್ತುಗಳು ಸೇರಿದಂತೆ ಎಲ್ಲಾ ಜಾನುವಾರುಗಳಿಗೆ ಮೇವು, ಹಿಂಡಿ ಹಾಗೂ ಬೂಸಾ ವಿತರಿಸಲಾಗುತ್ತಿದೆ. ನಮ್ಮ ಈ ಕಾರ್ಯಕ್ಕೆ ಬೆಂಗಳೂರಿನ ಇನ್ಫೋಸಿಸ್‌ ಅಧ್ಯಕ್ಷರು ಸಹಕಾರ ನೀಡುತ್ತಿದ್ದಾರೆ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದಜೀ ಮಹಾರಾಜ್‌ ಹೇಳಿದರು.

ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೊಮ್ಮದೇವರಹಟ್ಟಿಯ ದೇವರ ಎತ್ತುಗಳಿಗೆ ಮೇವು ಪೂರೈಕೆ ಹಾಗೂ ಅವುಗಳ ಆರೋಗ್ಯದ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ತಾಲೂಕು ಆಡಳಿತದೊಂದಿಗೆ ಚರ್ಚಿಸಿದ ಬಳಿಕ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ದೇವರ ಎತ್ತುಗಳಿಗೆ ಮೇವು ಪೂರೈಕೆ ಸ್ಥಗಿತಗೊಳಿಸದಂತೆ ಮನವಿ ಮಾಡಿದರು.

ಜಾನುವಾರುಗಳ ಮೇವು ಪೂರೈಕೆಗೆ ತಗಲುವ ವೆಚ್ಚವನ್ನು ಆಶ್ರಮವತಿಯಿಂದ ನೀಡಲಾಗುವುದು. ಅವಶ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳೊಂದಿಗೂ ಚರ್ಚಿಸಿ ಯಾವುದೇ ಕಾರಣಕ್ಕೂ ಕ್ಷೇತ್ರ ವ್ಯಾಪ್ತಿಯ ದೇವರ ಎತ್ತುಗಳು ಸೇರಿದಂತೆ ಯಾವುದೇ ಜಾನುವಾರುಗಳು ಮೇವಿಲ್ಲದೆ ಸಾಯುವ ಸ್ಥಿತಿ ಉಂಟಾಗದಂತೆ ಸಹಕಾರ ನೀಡಬೇಕೆಂದರು.

ಈಗಾಗಲೇ ಪಾವಗಡ, ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲೂಕಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಿಗೆ ಅಂದಾಜು 350ಕ್ಕೂ ಹೆಚ್ಚು ಟನ್‌ ಮೇವು ವಿತರಿಸಲಾಗಿದೆ. ಅಲ್ಲದೆ ಹಿಂಡಿ ಮತ್ತು ಬೂಸಾವನ್ನು ಸಹ ವಿತರಣೆ ಮಾಡಲಾಗುತ್ತಿದೆ. ಪಾವಗಡ ತಾಲೂಕಿನ ಸುಮಾರು 5 ಗ್ರಾಮಗಳಲ್ಲಿ ಚಳ್ಳಕೆರೆ ತಾಲೂಕಿನ 8 ಗ್ರಾಮಗಳಲ್ಲಿ, ಮೊಳಕಾಲ್ಮೂರು ತಾಲೂಕಿನ 6 ಗ್ರಾಮಗಳಲ್ಲಿ ಈಗಾಗಲೇ ಉಚಿತವಾಗಿ ಮೇವು, ಹಿಂಡಿ, ಬೂಸಾ ನೀಡಲಾಗುತ್ತಿದೆ ಎಂದರು.

ದೇವರ ಎತ್ತುಗಳಿಗೆ ಕೇವಲ ಮೇವು, ಹಿಂಡಿ ನೀಡುವುದಷ್ಟೇ ಅಲ್ಲ, ಅವುಗಳ ಆರೋಗ್ಯದ ಕಡೆಗೂ ಸಹ ಗಮನ ನೀಡಬೇಕಿದೆ. ದೇವರ ಎತ್ತುಗಳು ವಾಸಿಸುವ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ಕಡೇ ಪಕ್ಷ ಜಾನುವಾರುಗಳು ನೆರಳಿನಲ್ಲಾದರೂ ಬದುಕುವಂತಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ನಮಗೆ ಹೆಚ್ಚಿನ ಸಹಕಾರ ನೀಡುತ್ತದೆ ಎಂಬ ಆಶಾಭಾವ ನಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರ್‌ ಮಾತನಾಡಿ, ನನ್ನಿವಾಳದ ದೇವರ ಎತ್ತುಗಳು ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಮೇವಿನ ಅಭಾವದಿಂದ ಯಾವುದೇ ಜಾನುವಾರುಗಳು ಸಾವನ್ನಪ್ಪದಂತೆ ಎಚ್ಚರಿಕೆ ವಹಿಸಲಾಗುವುದು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೆಲವೊಂದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇವರ ಎತ್ತುಗಳ ಕಿಲಾರಿಗಳು ನಿಶ್ಯಕ್ತವಾದ ಹಸುಗಳನ್ನು ಹೊರಗೆ ಸಂರಕ್ಷಣೆಗೆ ಬಿಡುವುದಿಲ್ಲ. ಹಾಗಾಗಿ ಆಶ್ರಮದಲ್ಲಿಯೇ ಚಿಕಿತ್ಸೆ ನೀಡುವ ಅನಿವಾರ್ಯತೆ ಉಂಟಾಗಿದೆ. ಪಶುವೈದ್ಯ ಇಲಾಖೆಯ ಡಾ| ಬಿ. ಹನುಮಪ್ಪ ಮತ್ತು ಅವರ ಸಿಬ್ಬಂದಿ ಅಲ್ಲಿರುವ ಎಲ್ಲಾ ಜಾನುವಾರುಗಳ ಆರೋಗ್ಯ ತಪಾಸಣೆ ಮಾಡಿದ್ದಾರೆ. ಯಾವುದೇ ತೊಂದರೆ ಎದುರಾದಲ್ಲಿ ಕೂಡಲೇ ತಾಲೂಕು ಕಚೇರಿಯನ್ನು ಸಂಪರ್ಕಿಸುವಂತೆ ಕೋರಿದರು.

ಪಶು ವೈದ್ಯಾಧಿಕಾರಿ ಡಾ| ಹನುಮಪ್ಪ ಮಾತನಾಡಿ, ಕಿಲಾರಿಗಳು ದೇವರ ಎತ್ತುಗಳನ್ನು ಹೊರಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅಲ್ಲಿರುವ ಕೆಲವು ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇದ್ದರೂ ಅವಕಾಶ ಮಾಡಿಕೊಡಲಾಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಜಾನುವಾರುಗಳು ನಿತ್ರಾಣದ ಸ್ಥಿತಿಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿವೆ. ಮನವರಿಕೆ ಮಾಡಿದ ನಂತರ ಜಾನುವಾರುಗಳ ಚಿಕಿತ್ಸೆಗೆ ಕಿಲಾರಿಗಳು ಒಪ್ಪಿಗೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ನಿತ್ರಾಣ ಸ್ಥಿತಿಯಲ್ಲಿದ್ದ ಎರಡು ಜಾನುವಾರುಗಳನ್ನು ರಕ್ಷಿಸಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮೇವು ಸರಬರಾಜು ವ್ಯವಸ್ಥಾಪಕ ವರುಣ್‌, ಸಿ.ಪಿ. ಮಹೇಶ್‌ಕುಮಾರ್‌, ಸಿದ್ದೇಶ್‌, ರಾಜಣ್ಣ, ತಿಪ್ಪೇಸ್ವಾಮಿ, ಶ್ರೀನಿವಾಸ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.