ಶಿಕ್ಷಣ ಕ್ಷೇತ್ರದಲ್ಲಿನ ತೃಪ್ತಿ ಬೇರೆಲ್ಲೂ ಸಿಗದು

ವಿದ್ಯೆ ಕಲಿಸಿದವರನ್ನು ಎಂದಿಗೂ ಮರೆಯಬಾರದು: ಸಂಪತ್‌ಕುಮಾರ್‌

Team Udayavani, Jun 10, 2019, 5:27 PM IST

10-Juen-40

ಚಳ್ಳಕೆರೆ: ಸೇವಾ ನಿವೃತ್ತಿ ಹೊಂದಿದ ಎಚ್ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಚ್. ರಾಜಣ್ಣ ಅವರನ್ನು ಸನ್ಮಾನಿಸಲಾಯಿತು.

ಚಳ್ಳಕೆರೆ: ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದಾಗ ಸಿಗುವ ತೃಪ್ತಿ ಯಾವುದೇ ಕ್ಷೇತ್ರದಲ್ಲೂ ಸಿಗದು. ಶಿಕ್ಷಣದಿಂದ ಅಭಿವೃದ್ಧಿ ಹೊಂದಿದ ಪ್ರತಿಯೊಬ್ಬರೂ ತಮಗೆ ಶಿಕ್ಷಣ ನೀಡಿದ ಗುರುವಿನ ಬಗ್ಗೆ ಅಪಾರವಾದ ಗೌರವವನ್ನು ಹೊಂದಿರುತ್ತಾರೆ ಎಂದು ಬಿ.ಎಂ. ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಸಂಪತ್‌ಕುಮಾರ್‌ ಹೇಳಿದರು.

ಸೇವಾ ನಿವೃತ್ತಿ ಹೊಂದಿದ ಇಲ್ಲಿನ ಎಚ್ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಚ್. ರಾಜಣ್ಣ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಮಾರು 30 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಎಚ್. ರಾಜಣ್ಣ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಗುರು-ಹಿರಿಯರನ್ನು ಹಾಗೂ ವಿದ್ಯೆ ಕಲಿಸಿದವರನ್ನು ಎಂದಿಗೂ ಮರೆಯಬಾರದು ಎಂದರು.

ಆದರ್ಶ ಶಾಲೆ ಮುಖ್ಯಾಧ್ಯಾಪಕ ಶ್ರೀನಿವಾಸ್‌ ಮಾತನಾಡಿ, ಇಂದಿನ ಶಿಕ್ಷಣದಲ್ಲಿ ಹಲವಾರು ನೂತನ ಆವಿಷ್ಕಾರಗಳನ್ನು ಜಾರಿಗೆ ತರಲಾಗಿದೆ. ಅವು ಶಿಕ್ಷಣ ಇಲಾಖೆಗೆ ಹೆಚ್ಚು ಮೆರಗು ನೀಡಿವೆ. ಈ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಾಗಿರುತ್ತಿತ್ತು. ಇಂದಿಗೂ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ ಹಿಂದೆ ಬಿದಿಲ್ಲ. ಕೆಲವೊಂದು ಮಾಹಿತಿಯನ್ನು ಗಣಕಯಂತ್ರದ ಮೂಲಕ ಪಡೆಯುತ್ತಿದ್ದು, ಇದು ಸಹ ಶಿಕ್ಷಣದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಮುಖ್ಯಾಧ್ಯಾಪಕ ಎಚ್. ರಾಜಣ್ಣ, ನಾನು ರಾಜ್ಯದ ಹಲವಾರು ಶಾಲೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ನನ್ನ ಸೇವೆಯ ಕಡೆಯ ಎರಡು ವರ್ಷ ಈ ಶಾಲೆಯಲ್ಲಿ ಸೇವೆ ಮಾಡಲು ಸರ್ಕಾರ ಅವಕಾಶ ಮಾಡಿಕೊಟ್ಟಿತು. ಹೆಣ್ಣುಮಕ್ಕಳೇ ಇರುವ ಈ ಶಾಲೆಯಲ್ಲಿ ನನಗೆ ಎಲ್ಲಾ ರೀತಿಯ ಸಹಕಾರ ದೊರಕಿದೆ. ಹಾಗಾಗಿ ಪ್ರಸ್ತುತ ವರ್ಷದ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಉತ್ತಮ ಪಡಿಸಲು ಸಾಧ್ಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಎದುರಾಗುವ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವ ಕೌಶಲ್ಯ ಮುಖ್ಯಶಿಕ್ಷಕರಿಗೆ ಇರಬೇಕು ಎಂದರು.

ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ರೆಡ್ಡಿ, ತಾಲೂಕು ಅಧ್ಯಕ್ಷ ಜಿ.ಟಿ. ವೀರಭದ್ರ ನಾಯಕ, ಶಿಕ್ಷಕರಾದ ಸೋಮಶೇಖರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಆರ್‌. ಮಾರುತೇಶ್‌, ಪಾಲಯ್ಯ, ಶಿಕ್ಷಕರಾದ ರಾಜಣ್ಣ, ಪ್ರಾಣೇಶ್‌, ರೆಹನಾ, ಉಮಾ, ಪೂರ್ಣಿಮಾ, ಶ್ರೀನಿವಾಸ್‌, ಬಿ. ರಾಜಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.