ಫಸಲ್ ಬಿಮಾ ಯೋಜನೆ ಹಣ ಪಾವತಿಸಲು ಆಗ್ರಹ

ರೈತರ ಸಮಸ್ಯೆ ಆಲಿಸಿದ ಶಾಸಕ ಟಿ. ರಘುಮೂರ್ತಿ, ಸಂಸದ ಚಂದ್ರಪ್ಪ

Team Udayavani, May 18, 2019, 5:52 PM IST

18-May-37

ಚಳ್ಳಕೆರೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿದ್ದ ಮುಷ್ಕರದ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ, ಸಂಸದ ಬಿ.ಎನ್‌.ಚಂದ್ರಪ್ಪ, ಕೃಷಿ ಇಲಾಖೆ ಆಯುಕ್ತ ಶಿವಕುಮಾರ್‌ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.

ಚಳ್ಳಕೆರೆ: ತಾಲೂಕಿನಾದ್ಯಂತ ಪ್ರಧಾನ ಮಂತ್ರಿಗಳ ಫಸಲ್ ಬೀಮಾ ಯೋಜನೆಯ ಹಣ ಇದುವರೆಗೂ ರೈತ ಫಲಾನುಭವಿಗಳಿಗೆ ತಲುಪದೆ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಾಕಿ ನಿಂತ ಎಲ್ಲ ಫಲಾನುಭವಿಗಳಿಗೆ ಹಣ ಪಾವತಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ನೇತೃತ್ವದಲ್ಲಿ ರೈತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಷ್ಕರ ನಡೆಸಿದರು.

ತಾಲೂಕಿನ ಸಾವಿರಾರು ರೈತರಿಗೆ ಇದುವರೆಗೂ ಫಸಲ್ ಬಿಮಾ ಯೋಜನೆಯ ಹಣ ಪಾವತಿಯಾಗದೇ ರೈತರು ಸಂಕಷ್ಟಗಳನ್ನು ಅನುಭವಿಸುತ್ತಿದ್ದು, ಕೂಡಲೇ ಸರ್ಕಾರ ಈ ಹಣ ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಕ್ಷೇತ್ರದ ರೈತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳೆ ವಿಮೆ ಪಾವತಿ ಕುರಿತು ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಲೋಕಸಭಾ ಸದಸ್ಯ ಬಿ.ಎನ್‌. ಚಂದ್ರಪ್ಪ ಕೂಡಲೇ ಸ್ಥಳಕ್ಕೆ ಧಾವಿಸಿ ವಿಮೆ ಹಣ ಪಾವತಿಯಾಗದ ಬಗ್ಗೆ ರೈತರಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ಚಳ್ಳಕೆರೆ ತಾಲ್ಲೂಕು ಬರಗಾಲ ಪೀಡಿತ ಪ್ರದೇಶವಾಗಿದ್ದು, ರೈತರು ಫಸಲ್ ಬಿಮಾ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದು, ಕೂಡಲೇ ಸರ್ಕಾರ ಈ ಹಣವನ್ನು ಬಿಡುಗಡೆಗೊಳಿಸಬೇಕೆಂದು ರೈತರ ಪರವಾಗಿ ಒತ್ತಾಯಿಸಟ‌ಲಾಗುವುದು ಎಂದು ತಿಳಿಸಿದರು.

ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ರೈತರು ತಮಗೆ ನ್ಯಾಯಯುತವಾಗಿ ದೊರಕಬೇಕಾದ ವಿಮೆ ಕಂತು ಹಣ ಇನ್ನೂ ಅವರ ಖಾತೆಗೆ ಜಮಾವಾಗದ ಕಾರಣ ಇಲ್ಲಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದೀರಿ. ರೈತರ ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರವಾಗಿ ಫಸಲ್ ಬಿಮಾ ಯೋಜನೆ ಹಣ ರೈತರ ಖಾತೆಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆ ಆಯುಕ್ತ ಶಿವಕುಮಾರ್‌ ಮಾತನಾಡಿ, ಈಗಾಗಲೇ ಚಳ್ಳಕೆರೆ ತಾಲೂಕಿನ ಕೆಲವು ರೈತರಿಗೆ ಫಸಲ್ ಬಿಮಾ ಯೋಜನೆಯಡಿ ಅವರ ಖಾತೆಗೆ ಹಣ ಪಾವತಿಸಲಾಗಿದೆ. ಇನ್ನೂ ಬಾಕಿ ಉಳಿದ ರೈತರಿಗೆ 8 ದಿನದೊಳಗಾಗಿ ಚುನಾವಣೆಗೆ ನೀತಿ ಸಂಹಿತೆ ಮುಗಿದ ನಂತರ ಹಣ ಪಾವತಿ ಮಾಡಲಾಗುವುದು. ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಹಾಯಕ ಆಯುಕ್ತ ವೈ. ಶ್ರೀನಿವಾಸ್‌, ರೈತರಾದ ಆರ್‌.ಎ. ದಯಾನಂದಮೂರ್ತಿ, ನೇರ‌್ಲಗುಂಟೆ ರಾಮಪ್ಪ, ಚಂದ್ರಣ್ಣರೆಡ್ಡಿ, ಹಂಪಣ್ಣ, ತಿಮ್ಮಣ್ಣ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.