ಕಲೆಗಿಲ್ಲ ಜಾತಿ-ಭಾಷೆ ಭೇದ

ಸಂಸ್ಕಾರವಂತರಾಗಿ ಬಾಳಬೇಕಾದರೆ ಸಂಸ್ಕೃತಿ ರಕ್ಷಿಸಿ: ನಂದಿನಿ

Team Udayavani, Jul 29, 2019, 4:16 PM IST

29-July-39

ಚಳ್ಳಕೆರೆ: ಚಿತ್ರದುರ್ಗದ ನೃತ್ಯಪಟು ವಿದೂಷಿ ನಂದಿನಿ ಶಿವಪ್ರಕಾಶ್‌ ಕಾರ್ಯಕ್ರಮ ಉದ್ಘಾಟಿಸಿದರು.

ಚಳ್ಳಕೆರೆ: ಭಾರತೀಯ ಕಲೆ-ಸಂಸ್ಕೃತಿ ರಕ್ಷಣೆಗೆ ಸಂಸ್ಕಾರ ಭಾರತಿ ಸಂಸ್ಥೆ ಕಾರ್ಯನಿರ್ವಹಿಸು ತ್ತಿರುವುದು ಶ್ಲಾಘನೀಯ ಎಂದು ಚಿತ್ರದುರ್ಗದ ನೃತ್ಯಪಟು ವಿದೂಷಿ ನಂದಿನಿ ಶಿವಪ್ರಕಾಶ್‌ ಹೇಳಿದರು.

ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಸಂಸ್ಕಾರ ಭಾರತಿಯ ತಾಲೂಕು ಘಟಕದ ಉದ್ಘಾಟನೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಭಾರತದ ಕಲಾ ಪರಂಪರೆ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ನಮ್ಮ ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ಈ ಕಲೆಯನ್ನು ಮುಂದಿನ ಪೀಳಿಗೆಯವರೂ ಸಂರಕ್ಷಿಸಿ ಬೆಳೆಸಬೇಕಿದೆ. ಕಲೆಗೆ ಯಾವುದೇ ಜಾತಿ-ಭಾಷೆಯ ಭೇದ ಭಾವ ಇಲ್ಲ. ನಾವೆಲ್ಲರೂ ಉತ್ತಮ ಸಂಸ್ಕಾರವಂತರಾಗಿ ಬಾಳಬೇಕಾದರೆ ನಮಗೆ ಕಲೆಯೇ ಮೂಲ ಸ್ಫೂರ್ತಿ. ಆದ್ದರಿಂದ ಪಾಶ್ಚಾತ್ಯ ಸಂಸ್ಕೃತಿಯಿಂದ ಭಾರತೀಯ ಕಲೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದರು.

ಸಂಸ್ಕಾರ ಭಾರತಿಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಆನಂದ ಕುಲಕರ್ಣಿ ಮಾತನಾಡಿ, ನಾವು ಹಲವಾರು ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ವೀಕ್ಷಣೆ ಮಾಡುತ್ತೇವೆ. ಆದರೆ ಸಂಸ್ಕಾರ ಭಾರತಿ ಸರ್ವ ಕಲೆಯನ್ನು ಒಂದುಗೂಡಿಸಿ ಅವುಗಳನ್ನು ವ್ಯವಸ್ಥಿತವಾಗಿ ರಕ್ಷಿಸಿ ಬೆಳೆಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ರಾಜ್ಯದ ಹಲವಾರು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಂಸ್ಕಾರ ಭಾರತಿ ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಅಧ್ಯಕ್ಷ ಪಿಲ್ಲಹಳ್ಳಿ ಸಿ. ಚಿತ್ರಲಿಂಗಪ್ಪ ಮಾತನಾಡಿ, ನಗರದ ಹಿರಿಯ ಕಲಾವಿದರು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಕಲಾವಿದರನ್ನು ಸನ್ಮಾನಿಸುವ ಮೂಲಕ ಸಂಸ್ಕಾರ ಭಾರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಕಾರ ಭಾರತಿ ಕಾರ್ಯಕ್ರಮಗಳನ್ನು ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎಂ.ಎಸ್‌. ಜಯರಾಂ, ಕಾರ್ಯದರ್ಶಿ ಲಕ್ಷ್ಮೀ ಶ್ರೀವತ್ಸ, ವಾಣಿಜ್ಯೋದ್ಯಮಿ ರಾಮದಾಸ್‌, ಡಾ| ಜಯಕುಮಾರ್‌, ರೋಟರಿ ಅಧ್ಯಕ್ಷ ಕೆ.ಎ. ಮೂರ್ತಪ್ಪ, ಜಯಪ್ರಕಾಶ್‌, ಆರ್‌.ಎ. ದಯಾನಂದಮೂರ್ತಿ, ಉಪಾಧ್ಯಕ್ಷೆ ಎಂ.ವಿ. ಸೀತಾಲಕ್ಷ್ಮೀ, ಸುನೀತಾ ಬಸವರಾಜು, ಮಂಜುಳಾ ರಾಜ್‌, ಗೀತಾಂಜಲಿ, ಉಮೇಶ್‌, ಪ್ರಧಾನ ಕಾರ್ಯದರ್ಶಿ ಟಿ.ಆರ್‌. ಮಧುಮತಿ, ಕಾರ್ಯದರ್ಶಿ ಗಂಗಾಧರ, ಸಹ ಕಾರ್ಯದರ್ಶಿ ಎಸ್‌. ವೆಂಕಟೇಶ ಗುಪ್ತ, ಕೆ.ಎಂ. ಯತೀಶ್‌, ಖಜಾಂಚಿ ಎ.ಎಸ್‌. ಕುಮಾರ್‌, ನಿರ್ದೇಶಕರಾದ ದೊಡ್ಡಜ್ಜಯ್ಯ, ಶುಭಾ ಸೋಮಶೇಖರ್‌, ಬಸವರಾಜೇಶ್ವರಿ, ಪ್ರೇಮಾ ಮಂಜುನಾಥ, ಜೆ.ಪಿ. ಇಂದುಮತಿ, ಬಸವರಾಜು ಭಾಗವಹಿಸಿದ್ದರು. ನಿವೃತ್ತ ಶಿಕ್ಷಕ ಎ. ಅನಂತಪ್ರಸಾದ್‌, ರಂಗ ಕಲಾವಿದ ಕಾಟಪ್ಪನಹಟ್ಟಿ ಎಸ್‌.ಕೆ. ಸೂರಯ್ಯ,ಪೌರಾಣಿಕೆ ನಾಟಕ ಶಿಕ್ಷಕ ಚೆಟ್ಟೇಕಂಬ ಎಚ್. ದೊಡ್ಡವೀರಪ್ಪ, ಸಂಗೀತ ವಿದ್ವಾನ್‌ ಅಜ್ಜಪ್ಪ, ರಂಗಭೂಮಿ ಕಲಾವಿದ ಶಿರಾದ ಕೆ. ಈರೇಗೌಡ, ಜಾನಪದ ಕಲಾವಿದೆ ಕ್ಯಾತಗೊಂಡನಹಳ್ಳಿಯ ಕೆಂಚಮ್ಮ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.