ಅಗ್ನಿ ಆಕಸ್ಮಿಕ ತಡೆಗೆ ಮುಂಜಾಗ್ರತೆ ವಹಿಸಿ

ರಹೀಂ ನಗರ ಗುಡಿಸಲುಗಳಿಗೆ ಶೀಟ್ ಹಾಕಿಸುವ ವ್ಯವಸ್ಥೆ ಮಾಡಿ: ರಘುಮೂರ್ತಿ

Team Udayavani, Sep 16, 2019, 4:06 PM IST

Sepctember-22

ಚಳ್ಳಕೆರೆ: ರಹೀಂನಗರದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಸ್ಥಳಕ್ಕೆ ಶಾಸಕ ಟಿ. ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಳ್ಳಕೆರೆ: ಅಗ್ನಿ ಆಕಸ್ಮಿಕ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ವಿಶೇಷವಾಗಿ ರಹೀಂನಗರ ವ್ಯಾಪ್ತಿಯಲ್ಲಿ ತೆಂಗಿನ ಗರಿಯ ಗುಡಿಸಲುಗಳ ಸಂಖ್ಯೆ ಹೆಚ್ಚಿದ್ದು, ಗರಿಗಳನ್ನು ತೆರವುಗೊಳಿಸಿ ಶೀಟ್ ಹಾಕುವ ವ್ಯವಸ್ಥೆ ಆಗಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ರಹೀಂ ನಗರದ ನಾಗವೇಣಿ ಶ್ರೀನಿವಾಸ್‌ ಎಂಬುವವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಬಟ್ಟೆ, ಆಹಾರ ಪದಾರ್ಥ ಅಗ್ನಿಗೆ ಆಹುತಿಯಾಗಿತ್ತು. ಭಾನುವಾರ ಸ್ಥಳ ಪರಿಶೀಲನೆ ನಡೆಸಿದ ಶಾಸಕರು, ಈ ಭಾಗದ ಗುಡಿಸಲು ನಿವಾಸಿಗಳು ಶೆಡ್‌ ನಿರ್ಮಿಸಿಕೊಳ್ಳುವಂತೆ ಸೂಚಿಸಬೇಕೆಂದು ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಅವರಿಗೆ ತಿಳಿಸಿದರು. ಅಗ್ನಿ ಅನಾಹುತದಲ್ಲಿ ಸಂತ್ರಸ್ತರಾದ ನಾಗವೇಣಿ ಶ್ರೀನಿವಾಸ್‌ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರಲ್ಲದೆ ಸರ್ಕಾರದಿಂದ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದರು.

ನಗರಸಭೆ ಸದಸ್ಯೆ ಸುಜಾತಾ ಪಾಲಯ್ಯ ಮಾತನಾಡಿ, ರಹೀಂನಗರ ವ್ಯಾಪ್ತಿಯಲ್ಲಿರುವ ಗುಡಿಸಲು ವ್ಯಾಪ್ತಿಯ ಜನರಿಗೆ ಈಗಾಗಲೇ ಹಲವಾರು ಬಾರಿ ಮನವಿ ಮಾಡಲಾಗಿದೆ. ಈ ಹಿಂದೆ ಒಂದೇ ಹಂತದಲ್ಲಿ 5 ರಿಂದ 10 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ. ಶಾಸಕರ ಅನುದಾನದಲ್ಲಿ ಇಲ್ಲಿರುವ ಗುಡಿಸಲು ವಾಸಿಗಳಿಗೆ ಶೆಡ್‌ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಸಕ ಟಿ. ರಘುಮೂರ್ತಿ, ಈ ಭಾಗದ ರಸ್ತೆ ಅಗಲೀಕರಣಕ್ಕೆ ಸೂಚನೆ ನೀಡಿದರು. ಕೇವಲ 7 ಮೀಟರ್‌ನಷ್ಟು ರಸ್ತೆ ಅಗಲೀಕರಣಗೊಳಿಸಲಾಗುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದರು.

ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಸೋಮವಾರವೇ ಈ ರಸ್ತೆಯ ಎರಡೂ ಬದಿಗಳಲ್ಲಿ ಮತ್ತೂಮ್ಮೆ ಮಾರ್ಕಿಂಗ್‌ ಮಾಡಿ ರಸ್ತೆ ಅಗಲೀಕರಣ ಆರಂಭಿಸಲಾಗುವುದು. ಈಗಾಗಲೇ ರಸ್ತೆ ಬದಿಯ ಎರಡೂ ಬದಿಯ ನಿವಾಸಿಗಳಿಗೆ ಅಗಲೀಕರಣದ ಬಗ್ಗೆ ಮಾಹಿತಿ ನೀಡಲಾಗಿದೆ. 9 ಮೀಟರ್‌ ಅಗಲೀಕರಣ ಮಾಡಬೇಕಿತ್ತು. ಆದರೆ ಸಾರ್ವಜನಿಕರ ಮನವಿ ಮೇರೆಗೆ ಶಾಸಕರು 7 ಮೀಟರ್‌ ಮಾಡುವಂತೆ ನಿರ್ದೇಶನ ನೀಡಿದ್ದು, ಅದನ್ನು ಪಾಲಿಸುವುದಾಗಿ ತಿಳಿಸಿದರು.

ಜಿಪಂ ಮಾಜಿ ಸದಸ್ಯ ಬಾಬು ರೆಡ್ಡಿ, ನಗರಸಭಾ ಸದಸ್ಯರಾದ ಬಿ.ಟಿ. ರಮೇಶ್‌ ಗೌಡ, ಟಿ. ಮಲ್ಲಿಕಾರ್ಜುನ, ವೈ. ಪ್ರಕಾಶ್‌, ವಿರೂಪಾಕ್ಷಿ, ಮಾಜಿ ಸದಸ್ಯ ಎಸ್‌. ಮುಜೀಬುಲ್ಲಾ, ಕಾಂಗ್ರೆಸ್‌ ಮುಖಂಡ ಪಾಲಯ್ಯ, ಗ್ರಾಮಲೆಕ್ಕಿಗ ರಾಜೇಶ್‌, ನಗರಸಭೆ ಸಮನ್ವಯಾಧಿಕಾರಿ ಪಿ. ಪಾಲಯ್ಯ, ಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.