ಕಾರ್ಗಿಲ್ ಗೆಲುವು ಸ್ಮರಣೀಯ
ವೀರ ಯೋಧರ ಕಾರ್ಯ ಗೌರವಿಸುವುದು ಎಲ್ಲರ ಕರ್ತವ್ಯ: ಶಿವಮೂರ್ತಿ
Team Udayavani, Jul 28, 2019, 11:20 AM IST
ಚಳ್ಳಕೆರೆ: ನಗರದ ಹೊಂಗಿರಣ ಇಂಟರ್ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾರ್ಗಿಲ್ ರೂಪಕ ಪ್ರದರ್ಶಿಸಲಾಯಿತು.
ಚಳ್ಳಕೆರೆ: ರಾಷ್ಟ್ರದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ದೇಶಪ್ರೇಮಿಯಾಗಬೇಕು. ವಿಶ್ವದಲ್ಲಿಯೇ ವಿಶೇಷತೆಗಳನ್ನು ಹೊಂದಿರುವ ರಾಷ್ಟ್ರ ಭಾರತವಾಗಿದೆ. ಇಂತಹ ಪುಣ್ಯ ನಾಡಿನಲ್ಲಿ ಜನ್ಮ ಪಡೆಯುವುದೇ ಸಂತಸದ ವಿಷಯ ಎಂದು ನಿವೃತ್ತ ಸೈನಿಕ ಶಿವಮೂರ್ತಿ ಹೇಳಿದರು.
ಇಲ್ಲಿನ ಹೊಂಗಿರಣ ಇಂಟರ್ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ಭದ್ರತೆಗಾಗಿ ದಿನದ 24 ಗಂಟೆಗಳ ಕಾಲ ಸೈನಿಕರು ಹೋರಾಡುತ್ತಿರುತ್ತಾರೆ. ಅದರಲ್ಲೂ ಭಯೋತ್ಪಾದನೆ, ಉಗ್ರ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸುವ ನಮ್ಮ ಸೈನಿಕರು ರಾಷ್ಟ್ರದ ಹೆಮ್ಮೆಯ ವೀರ ಪುರುಷರು ಎಂದು ಬಣ್ಣಿಸಿದರು.
ಕಳೆದ 20 ವರ್ಷಗಳ ಹಿಂದೆ ಭಾರತದ ಸೈನಿಕರು ಹೋರಾಟ ನಡೆಸಿ ಜಯ ದಾಖಲಿಸಿದ ಕಾರ್ಗಿಲ್ ವಿಜಯ ರಾಷ್ಟ್ರದ ಪ್ರತಿಯೊಬ್ಬರೂ ಹೆಮ್ಮೆ ಪಡುವ ವಿಷಯವಾಗಿದೆ. ಸೈನಿಕರ ಬಗ್ಗೆ ವಿಶೇಷ ಗೌರವವನ್ನು ತಂದುಕೊಟ್ಟ ಜಯ ಇದಾಗಿದೆ. ಅಂದು ಸೈನಿಕರಿಗೆ ಸ್ಫೂರ್ತಿ ತುಂಬಿ ಕಾರ್ಯಚರಣೆಗೆ ಸಹಕರಿಸಿದ ಕೇಂದ್ರ ಸರ್ಕಾರದ ಸಹಕಾರವನ್ನು ಮರೆಯುವಂತಿಲ್ಲ ಎಂದರು.
ಹೊಂಗಿರಣ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾಗಪ್ಪ ಮಾತನಾಡಿ, ಪ್ರಸ್ತುತ ವರ್ಷದಿಂದ ನಮ್ಮ ವಿದ್ಯಾಸಂಸ್ಥೆ ಪ್ರಾರಂಭವಾಗಿದೆ. ಪೋಷಕರ ಸಹಕಾರದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ಹೆಚ್ಚು ಗಮನ ಹರಿಸಲು ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ. ಕಾರ್ಗಿಲ್ ವಿಜಯದ ಬಗ್ಗೆ ಮಕ್ಕಳಿಗೆ ಸಂಪೂರ್ಣ ಮಾಹಿತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ನಿವೃತ್ತ ಸೈನಿಕ ಶರಣಪ್ಪ, ಹರೀಶ್ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಡಿ. ದಯಾನಂದ, ಶಿವಪ್ರಸಾದ್, ಮುಖ್ಯ ಶಿಕ್ಷಕಿ ವೀಣಾ ರಮೇಶ್, ಎಸ್. ಉಜ್ಜಿನಪ್ಪ, ಎಂ. ವಿಜಯಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೋಷಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಗಿಲ್ ವಿಜಯೋತ್ಸವದ ಸಂತಸದ ಕ್ಷಣಗಳನ್ನು ಮೆಲುಕು ಹಾಕಿದರು. ವಿದ್ಯಾರ್ಥಿಗಳು ಸೈನಿಕರ ಪೋಷಾಕು ಧರಿಸಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’