ತೆಲುಗು ಸಾಹಿತ್ಯಕ್ಕೆ ಬೇಡಿಕೆ ಜಾಸ್ತಿ!

ಆಂಧ್ರ ಗಡಿ ಭಾಗದ ಚಳ್ಳಕೆರೆಯಲ್ಲಿ ತೆಲುಗು ಭಾಷಿಕರು ಹೆಚ್ಚು ಗ್ರಂಥಾಲಯ ಸಹಾಯಕರಿಗೆ ಪ್ರಭಾರಿ ಹೊಣೆ ಭಾರ

Team Udayavani, Nov 2, 2019, 6:15 PM IST

2-november-22

ಚಳ್ಳಕೆರೆ: ನಗರದ ಹೃದಯ ಭಾಗದಲ್ಲಿರುವ ಶ್ರೀ ಕೃಷ್ಣ ರಾಜೇಂದ್ರ ಗ್ರಂಥಾಲಯ 1972 ರಿಂದ ಕಾರ್ಯ ನಿರ್ವಹಿಸುತ್ತಿದ್ದು, ಈಗಾಗಲೇ 47 ವರ್ಷ ಪೂರೈಸಿ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಗ್ರಂಥಾಲಯದಲ್ಲಿ ಓದುಗರಿಗೆ ಅವಶ್ಯವಿರುವ ಹಲವಾರು ಕಾದಂಬರಿ, ಪುಸ್ತಕಗಳಿವೆ. ಒಟ್ಟು 673 ಸದಸ್ಯರಿದ್ದು, ಅವರಲ್ಲಿ 142 ಸದಸ್ಯರು ತೆಲುಗು ಭಾಷಿಕರಾಗಿದ್ದಾರೆ. ಆಂಧ್ರ ಗಡಿಗೆ ಹೊಂದಿಕೊಂಡಿರುವ ನಗರದಲ್ಲಿ ತೆಲುಗು ಭಾಷಿಕರು ಸಾಕಷ್ಟಿದ್ದಾರೆ. ಹಾಗಾಗಿ ತೆಲುಗು ಭಾಷೆಗೆ ಸಂಬಂಧಿಸಿದ ಪುಸ್ತಕಗಳನ್ನು ಒದಗಿಸಬೇಕು ಎಂಬ ಬೇಡಿಕೆ ಇದೆ.

ಪ್ರಸ್ತುತ ಗ್ರಂಥಾಲಯದಲ್ಲಿ 43 ಸಾವಿರ ಪುಸ್ತಕಗಳಿವೆ. ಹಿಂದಿ, ಮರಾಠಿ ಭಾಷೆ ಹೊರತುಪಡಿಸಿ ಕನ್ನಡ ಹಾಗೂ ಆಂಗ್ಲ ಭಾಷೆಯ ವೃತ್ತ ಪತ್ರಿಕೆಗಳು ಈ ಗ್ರಂಥಾಲಯದಲ್ಲಿ ಲಭ್ಯವಿವೆ. ಚಿತ್ರದುರ್ಗದ ಇತಿಹಾಸವನ್ನು ಬಿಂಬಿಸುವ ವೀರ ಮದಕರಿ ನಾಯಕರ ಆಳ್ವಿಕೆಗೆ ಸಂಬಂಧಪಟ್ಟ ಪುಸ್ತಕಗಳು, ವಿಶೇಷವಾಗಿ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಪುಸ್ತಕಗಳ ಅಗತ್ಯತೆ ಇದೆ ಎನ್ನುತ್ತಾರೆ ಓದುಗರು.

ಗ್ರಂಥಾಲಯ ವಿಶಾಲವಾದ ಕಟ್ಟಡ ಹೊಂದಿದ್ದು, ಸಾರ್ವಜನಿಕರು ಕುಳಿತು ಓದಲು ಟೇಬಲ್‌, ಕುರ್ಚಿ ವ್ಯವಸ್ಥೆ ಮಾಡಲಾಗಿದೆ. 2014-15ನೇ ಸಾಲಿನ ಶಾಸಕರ ಅನುದಾನದಡಿ 15 ಲಕ್ಷ ರೂ. ಗಳಲ್ಲಿ ಗ್ರಂಥಾಲಯದ ಕೆಳ ಭಾಗದ ಕೊಠಡಿಗಳನ್ನು ಆಧುನೀಕರಣಗೊಳಿಸಲಾಗಿದೆ. ಕಳೆದ 2017-18ನೇ ಸಾಲಿನಲ್ಲಿ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯದ ಮೇಲ್ಮಹಡಿ ನಿರ್ಮಿಸಲಾಗಿದೆ.

ಗ್ರಂಥಾಲಯದ ಕೆಳ ಅಂತಸ್ತಿನ ತುರ್ತು ರಿಪೇರಿ ಹಿನ್ನೆಲೆಯಲ್ಲಿ ಪುಸ್ತಕವನ್ನು ನೆಲದ ಮೇಲೆ ಇಡಲಾಗಿದೆ. ಸರ್ಕಾರದಿಂದ ಇನ್ನೂ ರ್ಯಾಕ್‌ ಗಳು ಬಂದಿಲ್ಲವಾದ್ದರಿಂದ ಪುಸ್ತಕಗಳ ಜೋಡಣೆ ಆಗಿಲ್ಲ. ಪ್ರತಿ ನಿತ್ಯ ಸುಮಾರು 200ಕ್ಕೂ ಹೆಚ್ಚು ಜನ ಪತ್ರಿಕೆಗಳನ್ನು ಓದಲು ಆಗಮಿಸಿದರೆ 100ಕ್ಕೂ ಹೆಚ್ಚು ಜನ ಪುಸ್ತಕಗಳನ್ನು ಪಡೆದುಕೊಳ್ಳುತ್ತಾರೆ.

ಕಳೆದ ಸುಮಾರು 30 ವರ್ಷಗಳಿಂದ ಭೋಜರಾಜ ಎಂಬುವವರು ಸಿಪಾಯಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚಿಗಷ್ಟೇ ಟಿ. ರಾಘವೇಂದ್ರ ಎಂಬುವವರನ್ನು ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ.

ಸಿಬ್ಬಂದಿ ಕೊರತೆ: ಗ್ರಂಥಾಲಯದಲ್ಲಿ ಸಿಬ್ಬಂದಿ ಕೊರತೆ ಇದೆ. ಗ್ರಂಥಪಾಲಕ ಡಿ. ತಿಮ್ಮರಾಯ ಮೂರು ದಿನಗಳಷ್ಟೇ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತೆ ಮೂರು ದಿನಗಳ ಕಾಲ ಮೊಳಕಾಲ್ಮೂರು ಗ್ರಂಥಾಲಯಕ್ಕೆ ಪ್ರಭಾರಿ ಗ್ರಂಥಪಾಲಕರಾಗಿ ನಿಯೋಜಿಸಲಾಗಿದೆ. ಇದರಿಂದ ಓದುಗರಿಗೆ ತೊಂದರೆಯಾಗುತ್ತಿದೆ. ಎರಡು ಅಂತಸ್ತುಗಳ ಈ ಕಟ್ಟಡದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಗ್ರಂಥಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಿದೆ.

ಸ್ನಾತಕೋತ್ತರ ಮತ್ತು ತಾಂತ್ರಿಕ ಪದವಿ ಅಭ್ಯಾಸ ಮಾಡಲು ಅನುಕೂಲವಾಗುವ ಪುಸ್ತಕಗಳ ವ್ಯವಸ್ಥೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.