ನಗರಸಭೆಯಿಂದ ಶಿಥಿಲ ಮಳಿಗೆಗಳಿಗೆ ಬೀಗಮುದ್ರೆ


Team Udayavani, Nov 10, 2019, 4:55 PM IST

10-November-29

ಚಳ್ಳಕೆರೆ: ನಗರದ ಚಿತ್ರದುರ್ಗ ರಸ್ತೆ ಮತ್ತು ಖಾಸಗಿ ಬಸ್‌ ನಿಲ್ದಾಣದ ಬಳಿ ನಗರಸಭೆಯ ಒಟ್ಟು ಏಳು ಮಳಿಗೆಗಳು ಶಿಥಿಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಸ್ಥಿತಿಯಲ್ಲಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಶಿಫಾರಸು ಪರಿಗಣಿಸಿ ಶನಿವಾರ ಮಳಿಗೆಗಳ ಮಾಲೀಕರಿಗೆ ಮಾಹಿತಿ ನೀಡಿ ಮಳಿಗೆಗಳನ್ನು ಖಾಲಿ ಮಾಡಿಸಿ ಬೀಗ ಹಾಕಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ತಿಳಿಸಿದರು.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳ ಹಿಂದೆಯೇ ಸಂಬಂಧಪಟ್ಟ ಮಳಿಗೆಗಳ ಮಾಲೀಕರಿಗೆ ಮಾಹಿತಿ ನೀಡಿದ್ದರೂ ಮಳಿಗೆಗಳನ್ನು ತೆರವುಗೊಳಿಸಲಿಲ್ಲ. ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ರವರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸ್ಪಷ್ಟವಾಗಿ ವರದಿ ನೀಡಿದ್ದು, ಏಳು ಮಳಿಗೆಗಳು ಯಾವ ಸಮಯದಲ್ಲಾದರೂ ಕುಸಿಯುವ ಸಂದರ್ಭವಿದೆ ಎಂದಿದ್ದಾರೆ. ಚಳ್ಳಕೆರೆ ನಗರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕೆಲವೆಡೆ ಗುಡಿಸಲುಗಳಿಗೆ ನೀರು ನುಗ್ಗಿದ್ದರೆ, ಕೆಲವೆಡೆ ಮಳಿಗೆಗಳು ಕುಸಿಯುವ ಹಂತ ತಲುಪಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಕಂದಾಯಾಧಿಕಾರಿ ವಿ. ಈರಮ್ಮ, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ ಮತ್ತು ಸಿಬ್ಬಂದಿ ವರ್ಗ ಸ್ಥಳಕ್ಕೆ ತೆರಳಿ ಮಳಿಗೆಯಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿ ಬೀಗ ಹಾಕಿಸಿದ್ದಾರೆ ಎಂದರು.

ಮಳಿಗೆಗಳಿರುವ ರಸ್ತೆಯಲ್ಲಿ ಸದಾ ಕಾಲ ಸಾರ್ವಜನಿಕರು ಹಾಗೂ ವಾಹನಗಳು ನಿರಂತರವಾಗಿ ಓಡಾಡುತ್ತಿದ್ದು, ಮಳಿಗೆ ಕುಸಿದು ಬಿದ್ದರೆ ಪ್ರಾಣಾಪಾಯವಾಗುವ ಸಂದರ್ಭವಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಗದಲ್ಲಿ ನಾಮಫಲಕವನ್ನೂ ಹಾಕಲಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಹಲವಾರು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದೆ. ಸಾರ್ವಜನಿಕರು ನಗರಸಭೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ಮಳಿಗೆ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಅವರು ನ್ಯಾಯಾಲಯದ ಮೆಟ್ಟಿಲೇರಿ ಕಟ್ಟಡವನ್ನು ಕೆಡವದಂತೆ ಆದೇಶ ತಂದಿದ್ದಾರೆ. ಹಾಗಾಗಿ ಸಾರ್ವಜನಿಕರ ಪ್ರಾಣ ರಕ್ಷಣೆಗೋಸ್ಕರ ನಗರಸಭೆ ಆಡಳಿತ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಕಟ್ಟಡವನ್ನು ಕೆಡವದೆ ಮಳಿಗೆಯಲ್ಲಿರುವ ವಸ್ತುಗಳನ್ನು ಹೊರಗಿಟ್ಟು ಮಳಿಗೆಗೆ ಬೀಗ ಹಾಕಿಸಿದೆ.

ಮಳಿಗೆ ಬಳಿ ಯಾರೂ ಓಡಾಡದಂತೆ ನಾಮಫಲಕವನ್ನೂ ಹಾಕಲಾಗಿದೆ ಎಂದರು. ಕಳೆದ ಕೆಲವು ವರ್ಷಗಳಿಂದ ಮಳಿಗೆ ಬಾಡಿಗೆದಾರರು ಹಾಗೂ ನಗರಸಭೆ ಮಧ್ಯೆ ಕಟ್ಟಡ ತೆರವುಗೊಳಿಸುವ ಬಗ್ಗೆ ತಿಕ್ಕಾಟ ನಡೆಯುತ್ತಿತ್ತು. ನಗರಸಭೆಯ ಆಡಳಿತ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಕೆಲವು ವರ್ಷಗಳ ಕಾಲ ಬಾಡಿಗೆದಾರರಿಗೆ ಅವಕಾಶ ಕಲ್ಪಿಸಿತ್ತು. ಆದರೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ರವರು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡ ಬಗ್ಗೆ ವರದಿ ನೀಡಿದ್ದರು. ಆ ವರದಿ ಅನ್ವಯ ನಗರಸಭೆ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.