ಬಾಕಿಯುಳಿದ ಬೆಳೆ ವಿಮೆ ಪಾವತಿಗೆ ಆಗ್ರಹ

ತಾಲೂಕು-ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಎಚ್ಚರಿಕೆ

Team Udayavani, Jun 1, 2019, 12:15 PM IST

1-June-12

ಚಳ್ಳಕೆರೆ: ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ರೈತರ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಮಾತನಾಡಿದರು.

ಚಳ್ಳಕೆರೆ: 2017-18 ಮತ್ತು 2018-19ನೇ ಸಾಲಿನ ಬೆಳೆ ವಿಮೆ ಪರಿಹಾರದ ಹಣ ಇದುವರೆಗೂ ರೈತರಿಗೆ ದೊರಕಿಲ್ಲ. ಕೂಡಲೇ ಬಾಕಿ ನಿಂತಿರುವ ಬೆಳೆ ವಿಮೆ ಹಣ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯ ಸೂಚನೆಯಂತೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆ ಪಾವತಿಸಿದ್ದಾರೆ. ಕೇವಲ ಕೆಲವೇ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ರೈತರಿಗೆ ಹಣ ಪಾವತಿಯಾಗಿದ್ದು ಬಿಟ್ಟರೆ ಬಹುತೇಕ ರೈತರ ಖಾತೆಗೆ ಕೇಂದ್ರ ಸರ್ಕಾರದ ಹಣ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಹತ್ತಾರು ವರ್ಷಗಳ ನಿರಂತರ ಬರಗಾಲದಿಂದ ತಾಲ್ಲೂಕಿನ ರೈತರು ಬದುಕಿನ ಹೋರಾಟ ನಡೆಸುತ್ತಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುವಲ್ಲಿ ನಿರಾಸಕ್ತರಾಗಿದ್ದಾರೆ. ಪ್ರತಿವರ್ಷವೂ ಮಳೆ, ಬೆಳೆ ಇಲ್ಲದೆ ಕಂಗಾಲಾಗಿರುವ ಸ್ಥಿತಿಯಲ್ಲಿ ಸರ್ಕಾರ ಎರಡು ವರ್ಷಗಳ ಬೆಳೆ ವಿಮೆ ಪರಿಹಾರ ನೀಡದೆ ರೈತ ಸಮುದಾಯವನ್ನು ಸಂಕಷ್ಟಕೀಡು ಮಾಡಿದ್ದು, ಬೆಳೆ ವಿಮೆ ಪರಿಹಾರದ ಹಣ ಕೂಡಲೇ ಬಿಡುಗಡೆ ಮಾಡದೇ ಇದ್ದಲ್ಲಿ ತಾಲ್ಲೂಕು ಕಚೇರಿ ಮತ್ತು ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.

ಇನ್ನು ಕೆಲವೇ ದಿನಗಳಲ್ಲಿ ರೈತರು ಮುಂಗಾರು ಬಿತ್ತನೆ ಮಾಡಬೇಕಿದ್ದು, ಬೀಜ, ಗೊಬ್ಬರ, ಕ್ರಿಮಿನಾಶಕ ಕೊಳ್ಳಲು ರೈತರಲ್ಲಿ ಹಣವಿಲ್ಲ. ರೈತರ ಸಾಲ ಮನ್ನಾ ಬಗ್ಗೆಯೂ ಸಹ ಸರ್ಕಾರ ಅಸ್ಪಷ್ಟ ನೀತಿ ತಾಳಿದೆ. ಯಾವುದೇ ಬ್ಯಾಂಕ್‌ನಲ್ಲೂ ಸಹ ರೈತರಿಗೆ ಸಾಲ ನೀಡಲು ಹಿಂಜರಿಯುತ್ತಿದ್ದಾರೆ. ಕನಿಷ್ಟ ಪಕ್ಷ ರೈತರ ಬೆಳೆ ವಿಮೆ ಹಣವಾದರೂ ಅವರ ಖಾತೆಗೆ ಜಮಾವಾದಲ್ಲಿ ರೈತರು ಬಿತ್ತನೆ ಮಾಡಲು ಅನುಕೂಲವಾಗುತ್ತದೆ. ಒಂದು ವಾರದೊಳಗೆ ತಾಲೂಕು ಆಡಳಿತ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಬೆಳೆ ವಿಮೆ ಪಾವತಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾಲೂಕು ಹಾಗೂ ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿಯಲು ರೈತರು ಹಿಂಜರಿಯುವುದಿಲ್ಲ ಎಂದರು.

ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರ್‌ ಮಾತನಾಡಿ, ರೈತರು ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಒತ್ತಾಯಪಡಿಸಿದ ಹಿನ್ನೆಲೆಯಲ್ಲಿ ಮೇ 30 ರೊಳಗೆ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಿಸುವ ಭರವಸೆಯನ್ನು ಸರ್ಕಾರದ ನೀಡಿತ್ತು. ಆದರೆ, ಇದುವರೆಗೂ ಸರ್ಕಾರದಿಂದ ಈ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಆದ್ದರಿಂದ 10ದಿನದೊಳಗೆ ಹಣ ಜಮಾವಾಗುವ ಸಾಧ್ಯತೆ ಇದ್ದು, ಅಲ್ಲಿಯ ತನಕ ರೈತರು ಸಹಕಾರ ನೀಡಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಎನ್‌. ಮಾರುತಿ ಮಾತನಾಡಿ, ತಾಲೂಕಿನ 40 ಗ್ರಾಪಂ ವ್ಯಾಪ್ತಿಯಲ್ಲಿ 5 ಗ್ರಾಪಂ ವ್ಯಾಪ್ತಿಯ 7,309 ಜನರಿಗೆ 12.06 ಕೋಟಿ ರೂ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈಗಾಗಲೇ ಜಮಾವಾಗಿದೆ. ಹಂತ ಹಂತವಾಗಿ ರೈತರ ಬೆಳೆ ವಿಮೆ ಹಣವನ್ನು ಸರ್ಕಾರ ಪಾವತಿ ಮಾಡುತ್ತಾ ಬಂದಿದೆ. ಪ್ರಸ್ತುತ ಬಾಕಿ ಉಳಿದ ಎಲ್ಲಾ ರೈತರಿಗೂ ಬೆಳೆ ಪರಿಹಾರದ ಹಣ ದೊರಕಲಿದೆ ಎಂದು ಭರವಸೆ ನೀಡಿದರು.

ಪ್ರಗತಿಪರ ಆರ್‌.ಎ. ದಯಾನಂದಮೂರ್ತಿ, ಎಸ್‌. ನಾಗರಾಜು ಇತರರು ಮಾತನಾಡಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ಎಚ್. ತಿಪ್ಪೇಸ್ವಾಮಿ, ಜಿ.ಟಿ. ಮಂಜುನಾಥ, ಎಚ್. ರಾಮಚಂದ್ರಪ್ಪ, ಆರ್‌. ರಾಜಣ್ಣ, ಜಯಶೀಲರಾವ್‌ ಇತರರು ಇದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.