ಪ್ಲಾಸ್ಟಿಕ್‌ ಮುಕ್ತ ನಗರವಾಗಿಸಲು ಸಹಕರಿಸಿ

ಚಳ್ಳಕೆರೆ ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಕಂಡು ಬಂದಲ್ಲಿ ಕಾನೂನು ಕ್ರಮ: ಪೌರಾಯುಕ್ತ

Team Udayavani, Aug 23, 2019, 12:35 PM IST

23-April-19

ಚಳ್ಳಕೆರೆ: ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಅಧ್ಯಕ್ಷತೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತ ಸಭೆ ನಡೆಯಿತು.

ಚಳ್ಳಕೆರೆ: ಜಿಲ್ಲಾಧಿಕಾರಿಗಳ ಸೂಚನೆಯಂತೆ ನಗರಸಭೆ ಪೌರಾಯುಕ್ತರು ಮತ್ತು ಸಿಬ್ಬಂದಿ ಕಳೆದ ಹಲವು ತಿಂಗಳುಗಳಿಂದ ನಗರದ ಎಲ್ಲಾ ಅಂಗಡಿ, ಹೋಟೆಲ್, ಬೇಕರಿ, ಫುಟ್ಪಾತ್‌ ವ್ಯಾಪಾರಿಗಳು, ತರಕಾರಿ, ಹೂವಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡುತ್ತಿದ್ದಾರೆ.

ನಗರದ ಕೆಲವು ತರಕಾರಿ ಮತ್ತು ಇನ್ನಿತರೆ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಕವರ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಕೆಲವರು ದ್ವಿಚಕ್ರ ವಾಹನದಲ್ಲಿ ಆಗಮಿಸಿ ಪ್ಲಾಸ್ಟಿಕ್‌ ಕವರ್‌ ಸರಬರಾಜು ಮಾಡುತ್ತಿರುವ ಮಾಹಿತಿ ಪಡೆದ ಪೌರಾಯುಕ್ತ ಜೆ.ಟಿ. ಹನುಮಂತರಾಜು ಹಾಗೂ ಸಿಬ್ಬಂದಿ, ಗುರುವಾರ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಹೋಟೆಲ್ನಲ್ಲಿ ಪರಿಶೀಲನೆ ನಡೆಸಿದರು. ತಪಾಸಣೆ ಮಾಡಿದಾಗ ವಿವಿಧ ಕಂಪನಿಗಳ ಪ್ಲಾಸ್ಟಿಕ್‌ ಕವರ್‌ಗಳು ಪತ್ತೆಯಾದವು.

ಪ್ಲಾಸ್ಟಿಕ್‌ ಕವರ್‌ ಮಾರಾಟ ಮಾಡುವವರ ಮೇಲೆ ದಾಳಿ ನಡೆಸಲಾಗುತ್ತಿದೆ. ಮತ್ತೂಮ್ಮೆ ಸಿಕ್ಕಿ ಬಿದ್ದಲ್ಲಿ ಮೊಕದ್ದಮೆ ದಾಖಲು ಮಾಡಿ ಹೋಟೆಲ್ ಪರವಾನಗಿ ರದ್ದುಪಡಿಸುವುದಾಗಿ ಪೌರಾಯುಕ್ತರು ಎಚ್ಚರಿಕೆ ನೀಡಿದರು. ಸುಮಾರು 30 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಬೆಂಗಳೂರು ರಸ್ತೆಯಲ್ಲಿರುವ ಮದ್ಯದ ಅಂಗಡಿ, ವಾಲ್ಮೀಕಿ ವೃತ್ತದ ಬಳಿ ಇರುವ ಹೋಟೆಲ್ಗಳ ಮೇಲೆಯೂ ದಾಳಿ ನಡೆಸಲಾಯಿತು. ಅಲ್ಲಿಯೂ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡು ತಾತ್ಕಾಲಿಕವಾಗಿ ಹೋಟೆಲ್ಗಳನ್ನು ಬಂದ್‌ ಮಾಡಿಸಿ ದಂಡ

ವಿಧಿಸಿ ಎಚ್ಚರಿಕೆ ನೀಡಲಾಯಿತು. ಅಂದಾಜು ಒಂದು ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡು ಸುಮಾರು 12 ಸಾವಿರ ರೂ. ದಂಡ ವಿಧಿಸಲಾಗಿದೆ. ಮುಂಬರುವ ದಿನಗಳಲ್ಲಿ ಮತ್ತೆ ಎಲ್ಲಿಯಾದರೂ ಪ್ಲಾಸ್ಟಿಕ್‌ ಕವರ್‌ ಪತ್ತೆಯಾದಲ್ಲಿ ಅಂತಹ ಅಂಗಡಿ, ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲ, ಶಾಶ್ವತವಾಗಿ ಹೋಟೆಲ್ಗಳನ್ನು ಮುಚ್ಚಿಸಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ದಾಳಿ ವೇಳೆ ನಗರದಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ತಿಪ್ಪೇಸ್ವಾಮಿ, ಮಜರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.