ಪ್ಲಾಸ್ಟಿಕ್‌ ಮುಕ್ತ ನಗರಕ್ಕೆ ಶ್ರಮಿಸಿ

ಒಣ-ಹಸಿ ಕಸ ವಿಂಗಡಿಸಿ ತ್ಯಾಜ್ಯ ವಿಲೇವಾರಿ ಮಾಡಿ: ವಿನೋತ್‌ ಪ್ರಿಯಾ

Team Udayavani, Aug 21, 2019, 5:33 PM IST

21-Agust-29

ಚಳ್ಳಕೆರೆ: ನಗರಸಭಾ ಕಾರ್ಯಾಲಯದಲ್ಲಿ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸಭೆ ನಡೆಸಿದರು.

ಚಳ್ಳಕೆರೆ: ಚಳ್ಳಕೆರೆ ನಗರವನ್ನು ಸುಂದರ ನಗರವನ್ನಾಗಿಸಲು ಹಾಗೂ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಎಲ್ಲರೂ ಸಹಕಾರ ನೀಡಬೇಕಿದೆ. ವಿಶೇಷವಾಗಿ ಚಳ್ಳಕೆರೆ ನಗರವನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸುವ ಉದ್ದೇಶಕ್ಕೆ ನಗರಸಭೆಯ ಎಲ್ಲಾ ಸದಸ್ಯರು ಶ್ರಮಿಸಬೇಕು ಎಂದು ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಇಲ್ಲಿನ ನಗರಸಭಾ ಕಾರ್ಯಾಲಯದಲ್ಲಿ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಘನತ್ಯಾಜ್ಯ ವಿಲೇವಾರಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಚಳ್ಳಕೆರೆ ನಗರದಲ್ಲಿ ಪ್ರತಿನಿತ್ಯ ಹೆಚ್ಚಿನ ಪ್ರಮಾಣದ ಕಸ ಹೊರಹೊಮ್ಮುತ್ತಿದೆ. ಒಣ ಮತ್ತು ಹಸಿ ಕಸವನ್ನು ವಿಂಗಡಿಸಿ ನಗರ ಸಭೆಯ ಹಳೇ ಕಾರ್ಯಾಲಯದಲ್ಲಿರುವ ಘನತ್ಯಾಜ್ಯ ಘಟಕಕ್ಕೆ ನೀಡಬೇಕಿದೆ. ಅಲ್ಲಿ ಕಸವನ್ನು ವಿಂಗಡಿಸಲಾಗುವುದು. ಇದಕ್ಕಾಗಿ ಸರ್ಕಾರ 70 ಲಕ್ಷ ರೂ. ವೆಚ್ಚದಲ್ಲಿ ನೂತನ ಅತ್ಯಾಧುನಿಕ ಘಟಕವನ್ನು ಪ್ರಾರಂಭಿಸುತ್ತಿದ್ದು, ನಗರದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲಾಗುತ್ತಿದೆ ಎಂದರು.

ನಗರಸಭಾ ಸದಸ್ಯರಾದ ಎಸ್‌. ಜಯಣ್ಣ, ಸಿ. ಶ್ರೀನಿವಾಸ್‌ ಮಾತನಾಡಿ, ಪ್ರಸ್ತುತ ನಗರಸಭೆಯ ಪೌರಕಾರ್ಮಿಕರ ಮತ್ತು ವಾಹನಗಳ ಸಂಖ್ಯೆ ಕಡಿಮೆ ಇದೆ. ಅದನ್ನು ಹೆಚ್ಚಿಸಿಕೊಡುವಂತೆ ಮನವಿ ಮಾಡಿದರು. ನಗರಸಭಾ ಸದಸ್ಯ ಆರ್‌. ರುದ್ರನಾಯಕ ಮಾತನಾಡಿ, ಚಳ್ಳಕೆರೆ ನಗರದ ಎ.ಜಿ. ರಸ್ತೆಯಲ್ಲಿರುವ ಮಟನ್‌ ಮಾರುಕಟ್ಟೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸಬೇಕು, ನಮ್ಮ ವಾರ್ಡ್‌ ವ್ಯಾಪ್ತಿಯಲ್ಲಿ ಚರಂಡಿ ನಿರ್ಮಾಣ, ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಸದಸ್ಯರಾದ ಎಂ.ಜೆ. ರಾಘವೇಂದ್ರ, ವಿ.ವೈ. ಪ್ರಮೋದ್‌, ವೆಂಕಟೇಶ್‌, ಗೋವಿಂದ ಮಾತನಾಡಿ, ನಗರಸಭೆಗೆ ನೂತನ ಆಧುನಿಕ ತ್ರೀಡಿ ಜೆಸಿಬಿ ಖರೀದಿಸಲು ಅನುಮತಿ ನೀಡಬೇಕೆಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಇನ್ನು ಕೆಲವೇ ದಿನಗಳಲ್ಲಿ ಆಡಳಿತಾಧಿಕಾರಿಗಳ ಅವಧಿ ಮುಗಿಯಲಿದೆ. ಮುಂಬರುವ ದಿನಗಳಲ್ಲಿ ಎಲ್ಲಾ ಸದಸ್ಯರು ನಗರದ ಅಭಿವೃದ್ಧಿ ದೃಷ್ಟಿಯಿಂದ ಹೊಸ ಯೋಜನೆಗಳನ್ನು ರೂಪಿಸಿ ಸರ್ಕಾರದಿಂದ ಹೆಚ್ಚಿನ ಪ್ರಮಾಣದಿಂದ ಹಣ ಪಡೆಯಲು ಅಭಿವೃದ್ಧಿ ಪ್ರೇರಕರಾಗುವಂತೆ ಮನವಿ ಮಾಡಿದರು.

ಸಭೆಯಲ್ಲಿ ನಗರಸಭಾ ಸದಸ್ಯರಾದ ಮಂಜುಳಾ, ಸುಮಾ ಭರಮಣ್ಣ, ಸಾವಿತ್ರಿ, ಸುಜಾತಮ್ಮ, ಕವಿತಾ ಬೋರಣ್ಣ, ಎಇಇ ಶ್ಯಾಮಲಾ, ವಿನಯ್‌, ಜೆಇ ಲೋಕೇಶ್‌, ವ್ಯವಸ್ಥಾಪಕ ನಾಸೀರ್‌ ಭಾಷ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.