ಮಳೆಯಿಂದಾಗಿ ಕಪ್ಪಾಗಿ ಹೋಯ್ತು ಶೇಂಗಾ!

ತಾಡಪಾಲ್‌ ಹಾಕಿ ಮುಚ್ಚಿದ್ದರಿಂದ ಈ ಸ್ಥಿತಿ ನಿರ್ಮಾಣಮಳೆ ಮುಂದುವರಿದಲ್ಲಿ ಬೆಳೆ ಕೈ ತಪ್ಪುವ ಆತಂಕ

Team Udayavani, Dec 2, 2019, 3:22 PM IST

2-December-19

ಕೆ.ಎಸ್‌. ರಾಘವೇಂದ್ರ

ಚಳ್ಳಕೆರೆ: ಕಳೆದ 8-10 ವರ್ಷಗಳಿಂದ ಬರದ ಬೇಗುದಿಗೆ ಸಿಲುಕಿ ನಲುಗಿದ್ದ ಈ ಭಾಗದ ರೈತರಲ್ಲಿ ಕಳೆದ ಎರಡು ತಿಂಗಳ ಹಿಂದೆ ಸುರಿದ ಮಳೆ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು. ಆದರೆ ಕಳೆದ ಮೂರು ದಿನಗಳಿಂದ ಬರುತ್ತಿರುವ ಜಿಟಿ ಜಿಟಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣ ಶೇಂಗಾಕ್ಕೆ ಕುತ್ತು ತಂದಿಡುವ ಲಕ್ಷಣ ಕಂಡುಬರುತ್ತಿದೆ.

ಚಳ್ಳಕೆರೆ ತಾಲೂಕಿನಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿರುವುದು ವಿಶೇಷವಾಗಿ ಶೇಂಗಾ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ತಾಲೂಕಿನಾದ್ಯಂತ ಸುಮಾರು ಶೇ. 30 ರಷ್ಟು ಮಾತ್ರ ಶೇಂಗಾ ಬಿತ್ತನೆಯಾಗಿದೆ. ಕಳೆದ ತಿಂಗಳ ಮಳೆಯಿಂದ ಉತ್ತಮ ಫಸಲು ಕೈ ಸೇರಬಹುದು ಎಂಬ ಆಸೆ ಇಟ್ಟುಕೊಂಡಿದ್ದ ರೈತರಿಗೆ ಮೋಡ ಮುಸುಕಿದ ವಾತಾವರಣ ಹಾಗೂ ಜಿಟಿ ಜಿಟಿ ಮಳೆ ನಿರಾಸೆ ಮೂಡಿಸಿದೆ.

ಭೂಮಿಯಿಂದ ಶೇಂಗಾವನ್ನು ಕಿತ್ತ ಕೆಲವು ರೈತರು ನಿರಂತರ ಮಳೆಯಿಂದ ಬೀಜ, ಮೇವು ಕಪ್ಪು ಬಣ್ಣಕ್ಕೆ ತಿರುಗುವ ಆತಂಕದಲ್ಲಿದ್ದಾರೆ. ಬಣವೆಗಳಲ್ಲಿ ಹಾಕಿದ ಶೇಂಗಾಕ್ಕೆ ತಾಡಪಾಲು ಮುಚ್ಚಿ ಮಳೆಯಿಂದ ರಕ್ಷಣೆ ಮಾಡಬಹುದು. ಆದರೆ ಉಷ್ಣಾಂಶ ಹೆಚ್ಚಿ ಶೇಂಗಾ ಬೂದು ಮತ್ತು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕಪ್ಪು ಬಣ್ಣಕ್ಕೆ ತಿರುಗಿದ ಶೇಂಗಾ ಬಳ್ಳಿಯನ್ನು ದನ ಕರುಗಳು ತಿನ್ನುವುದಿಲ್ಲ. ಶೇಂಗಾದ ಬೀಜಗಳು ಕಪ್ಪಾಗುವುದರಿಂದ ಶೇಂಗಾ ಬೀಜದ ಧಾರಣೆಯಲ್ಲೂ ಕುಸಿತವಾಗುತ್ತದೆ. ಮಳೆಯ ಅವಾಂತರದಿಂದ ಅಲ್ಪಸ್ವಲ್ಪ ಬೆಳೆಯೂ ಕೈಸೇರುವುದಿಲ್ಲ ಎಂಬ ಆತಂಕ ಒಂದು ಕಡೆಯಾದರೆ, ಮತ್ತೂಂದು ಕಡೆ ಅಕಾಲಿಕ ಮಳೆಯಿಂದ ಬೀಜಗಳು ಮೊಳಕೆ ಒಡೆಯುತ್ತಿವೆ. ಅತ್ತ ಭೂಮಿಯಿಂದ ಕಿತ್ತರೂ ಕಷ್ಟ, ಭೂಮಿಯಲ್ಲೇ ಬಿಟ್ಟರೂ ಕಷ್ಟವಾಗಿದೆ ಎನ್ನುವ ಅತಂತ್ರ ಸ್ಥಿತಿಯಲ್ಲಿ ರೈತರಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ನೋವು ತೋಡಿಕೊಂಡ ಚನ್ನಮ್ಮನಾಗತಿಹಳ್ಳಿ ಗ್ರಾಮದ ರೈತ ಜಿ.ಕೆ. ರಾಘವೇಂದ್ರ, ಕಳೆದ ಐದು ವರ್ಷಗಳಿಂದ ಮಳೆ ವೈಫಲ್ಯದಿಂದ ಭೂಮಿಗೆ ಯಾವುದೇ ಫಸಲು ಹಾಕಲಿಲ್ಲ. ಈ ಬಾರಿ ಬಂದ ಮಳೆಯಿಂದ ಐದು ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದೇವೆ. ಅದರಲ್ಲೂ ಗಿಡಕ್ಕೆ ನಾಲ್ಕೈದು ಕಾಯಿ ಹಿಡಿದಿದೆ. ಅದನ್ನಾದರೂ ಉಳಿಸಿಕೊಂಡು ಹಾಕಿದ ಬಂಡವಾಳವಾದರೂ ತೆಗೆದುಕೊಳ್ಳುವ ನಿರೀಕ್ಷೆಯಲ್ಲಿದ್ದ ನಮಗೆ ಕಳೆದ ಮೂರು ದಿನಗಳಿಂದ ಬರುತ್ತಿರುವ ಮಳೆ ನಿರಾಸೆಯನ್ನುಂಟು ಮಾಡಿದೆ. ಇನ್ನೂ ಎರಡು ದಿನ ಇದೇ ರೀತಿ ಮಳೆಯಾದಲ್ಲಿ ಬೆಳೆಯೂ ಕೈಸೇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ ಶೇಂಗಾ ಬೆಳೆಯಿಂದ ಕೃಷಿಗಾಗಿ ಮಾಡಿರುವ ಸಾಲ ತೀರಿಸಬಹುದು ಎಂಬ ಉತ್ಸಾಹದಲ್ಲಿದ್ದ ರೈತರಿಗೆ ಜಿಟಿ ಜಿಟಿ ಮಳೆ ಶಾಪವಾಗಿ ಪರಿಣಮಿಸಿದ್ದು ಸುಳ್ಳಲ್ಲ.

ಮಳೆಯಿಂದ ರಕ್ಷಣೆ ಪಡೆಯಲು ಬಣವೆಯಲ್ಲಿ ತಾಡಪಾಲ್‌ ಹಾಕಿ ಶೇಂಗಾ ಬಳ್ಳಿಯನ್ನು ಮುಚ್ಚಲಾಗಿದೆ. ಅದರಿಂದ ಶೇಂಗಾ ಗಿಡಗಳು ಕಪ್ಪುಬಣ್ಣಕ್ಕೆ ತಿರುಗಿವೆ. ಇದೇ ರೀತಿ ಎರಡ್ಮೂರು ದಿನ ಮಳೆ ಬಂದಲ್ಲಿ ಶೇಂಗಾ ಮತ್ತು ಮೇವು ಇಲ್ಲದಂತಾಗುತ್ತದೆ. ಪ್ರತಿನಿತ್ಯ ಮಳೆ ಬಂದ ತಕ್ಷಣ ತಾಡಪಾಲ್‌ ಹಾಕುವುದು, ಮಳೆ ಬಿಟ್ಟ ನಂತರ ತೆಗೆಯುವುದೇ ಕೆಲಸವಾಗಿಬಿಟ್ಟಿದೆ.
.ಕುಮಾರ್‌,
ಸಿದ್ದಾಪುರದ ಶೇಂಗಾ ಬೆಳೆಗಾರ.

ಟಾಪ್ ನ್ಯೂಸ್

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.