ಮೇವಿನೊಂದಿಗೆ ಕಲ್ಲು ಸಾಗಣೆ

ತಹಶೀಲ್ದಾರ್‌ಗೆ ಮಾಹಿತಿ ನೀಡಿದ ರೈತರು•ಪರಿಶೀಲಿಸಲು ವಿಎಗೆ ಸೂಚನೆ

Team Udayavani, Jul 21, 2019, 11:36 AM IST

21-July-17

ಚಳ್ಳಕೆರೆ: ಗೋಶಾಲೆಗೆ ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ್‌ ಭೇಟಿ ನೀಡಿ ಪರಿಶೀಲಿಸಿದರು.

ಚಳ್ಳಕೆರೆ: ಗೋಶಾಲೆಗಳಿಗೆ ಸಾಗಿಸುವ ಟ್ರ್ಯಾಕ್ಟರ್‌ನಲ್ಲಿ ಭಾರವಾದ ಕಲ್ಲುಗಳು ಮತ್ತು ಮೇವಿಗೆ ನೀರು ಹಾಕಿ ಸರಬರಾಜು ಮಾಡುತ್ತಿದ್ದಾರೆ ಎಂಬುದನ್ನು ರೈತರು ಪತ್ತೆ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದ ರೈತ ಮುಖಂಡ ಟಿ.ಮಂಜುನಾಥ ಮತ್ತು ತಂಡ ಶನಿವಾರ ಬೆಳಗ್ಗೆ ಇಲ್ಲಿನ ಎಜಿ ರಸ್ತೆಯಲ್ಲಿನ ಸರ್ಕಾರಿ ಗೋಶಾಲೆಗೆ ಟ್ರ್ಯಾಕ್ಟರ್‌ ಮೂಲಕ ಮೇವು ಸರಬರಾಜು ಆಗುತ್ತಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಇವರು ಟ್ರ್ಯಾಕರ್‌ ನಿಲ್ಲಿಸಿ ತಪಾಸಣೆ ನಡೆಸಿದಾಗ ಮೇವಿನ ಜತೆಯಲ್ಲಿ ಸುಮಾರು ಎರಡು ಟನ್‌ನಷ್ಟು ಕಲ್ಲುಗಳು ಹಾಗೂ ಮೇವಿಗೆ ನೀರು ಹಾಕಿ ಸರಬರಾಜು ಮಾಡುತ್ತಿರುವುದು ಕಂಡು ಬಂದಿದ್ದು, ಕೂಡಲೇ ಟ್ರ್ಯಾಕ್ಟರ್‌ ತಡೆದು ತಹಶೀಲ್ದಾರ್‌ಗೆ ಮಾಹಿತಿ ನೀಡಿದ್ಧಾರೆ.

ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ರೈತರು ಮಾಡಿದ ಆರೋಪದಲ್ಲಿ ಸತ್ಯಾಂಶವಿದ್ದು, ಕೂಡಲೇ ಟ್ರ್ಯಾಕ್ಟರ್‌ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾನುವಾರುಗಳಿಗೆ ನಿತ್ಯ ನಿಗದಿತ ಪ್ರಮಾಣದಲ್ಲೇ ಮೇವು ನೀಡಬೇಕು. ಯಾವುದೇ ಕಾರಣಕ್ಕೂ ಮೇವಿಗೆ ನೀರು ಹಾಕುವುದು. ಕಲ್ಲು ಇಟ್ಟು ಹೆಚ್ಚು ತೂಕ ತೋರಿಸುವುದನ್ನು ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರಲ್ಲದೆ ಪ್ರಕರಣ ದಾಖಲಿಸಿ ಬಂಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರೈತ ಗಾದ್ರಿಪಾಲಯ್ಯ, ಒಬಯ್ಯ, ಪಾಲಯ್ಯ, ಬಸವರಾಜು ಮಾತನಾಡಿ, ಕಳೆದ ಹಲವು ತಿಂಗಳಿಂದ ಗೋಶಾಲೆಗೆ ಮೇವು ಸರಬರಾಜಾಗುತ್ತಿದ್ದು, ಈ ಬಗ್ಗೆ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ವಿತರಿಸಲಾಗುತ್ತಿದೆ ಎಂದು ಹೇಳಲಾಗಿತ್ತಾದರೂ ಕೆಲವೊಮ್ಮೆ ಜಾನುವಾರುಗಳಿಗೆ ಮೇವು ಸಿಗುತ್ತಿರಲಿಲ್ಲ. ಇದದಿಂದ ಅನುಮಾನಗೊಂಡ ನಾವುಗಳು ಶನಿವಾರ ಬೆಳಗ್ಗೆ ರಸ್ತೆಯಲ್ಲೇ ಕಾದಿದ್ದು, ಬಂದ 7 ಲೋಡ್‌ ಮೇವನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದರು.

ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ್‌ ಗೋಶಾಲೆಯ ಮೇಲ್ತುವಾರಿ ಗ್ರಾಮ ಲೆಕ್ಕಿಗ ರಾಘವೇಂದ್ರ ಅವರಿಗೆ ಪ್ರತಿಲೋಡ್‌ ಮೇವನ್ನು ಪರಿಶೀಲಿಸಬೇಕು. ಗುತ್ತಿಗೆದಾರ, ಸರ್ಕಾರಿ ಅಧಿಕಾರಿ ಸಮಕ್ಷಮದಲ್ಲಿ ತೂಕ ಮಾಡಿಸಿ ಲಿಖೀತ ಮೂಲಕ ಬರೆದು ಮೇವಿನಲ್ಲಿ ತೇವಾಂಶ ಅಡಕವಾಗಿದೆ ಎಂಬ ಬಗ್ಗೆ ಪರಿಶೀಲಿಸಬೇಕೆಂದು ಸೂಚಿಸಿದರು.

ತಾಲೂಕಿನ ಯಾವ ಭಾಗದಲ್ಲೂ ಕಳೆದ ಒಂದೆರಡು ವರ್ಷಗಳಿಂದ ಮೇವು ಇಲ್ಲ. ಬರ ಹಿನ್ನೆಲೆಯಲ್ಲಿ ತಾಲೂಕಿನ ಸಾವಿರಾರು ಜಾನುವಾರುಗಳು ನಿತ್ಯ ಮೇವು ಮತ್ತು ನೀರಿಗಾಗಿ ಪರಿತಪಿಸುತ್ತಿದ್ದು, ಸಾರ್ವಜನಿಕರ ಒತ್ತಾಯದ ಮೇರೆಗೆ ತಾಲೂಕಾಡಳಿತ ನಿತ್ಯ ಮೇವು ವಿತರಿಸುತ್ತಿದ್ದು, ಅದರಲ್ಲೂ ಸಹ ಮೇವಿನಲ್ಲಿ ಕಲ್ಲು, ನೀರು ಹಾಕಿ ತೂಕ ಹೆಚ್ಚಿಸುವ ಮೂಲಕ ಸರ್ಕಾರಕ್ಕೆ ಮೋಸಗೊಳಿಸುವ ಯತ್ನ ನಡೆದಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು.
ಸಿ.ಪಿ.ಮಹೇಶ್‌ಕುಮಾರ್‌,
ಸಿದ್ದೇಶ್‌, ಗೋವು ಪಾಲಕರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.