ಶಾಲೆಗೆ ಹೋಗಲು ನಿತ್ಯ 10 ಕಿ.ಮೀ. ನಡೆಯಲೇಬೇಕು!


Team Udayavani, Feb 6, 2020, 3:00 AM IST

SHALEGE

ಹನೂರು: ಶಾಲೆಗೆ ಹೋಗಬೇಕಾದರೆ ಪ್ರತಿದಿನ 10 ಕಿ.ಮೀ. ನಡೆಯಲೇಬೇಕು, ಅದು ಕೂಡ ಕಲ್ಲು, ಮುಳ್ಳು, ಗುಂಡಿಗಳಿರುವ ಕಡಿದಾದ ಹಾದಿಯಲ್ಲಿ ಸಂಚರಿಸಬೇಕು, ಇದರ ಮಧ್ಯೆ ಕಾಡುಪ್ರಾಣಿಗಳ ಭೀತಿ ಕೂಡ ಇದೆ, ಕನಿಷ್ಠ ಏನಿಲ್ಲವೆಂದರೂ ಎರಡೂವರೆ ಗಂಟೆ ಸಮಯವನ್ನು ನಡೆಯಲು ಮೀಸಲಿಡಬೇಕಿದೆ, ನಿತ್ಯ 10 ಕಿ.ಮೀ. ನಡೆದು ದಣಿದು ಮೈ ಕೈ ನೋಯಿಸಿಕೊಂಡು ವಿದ್ಯಾರ್ಥಿಗಳು ಬಸವಳಿದಿರುತ್ತಾರೆ…

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿರುವ ಸುರೇಶ್‌ ಕುಮಾರ್‌ ಉಸ್ತುವಾರಿ ಹೊಣೆ ಹೊತ್ತಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಕಂಡು ಬರುವ ದಾರುಣ ದೃಶ್ಯಗಳು ಇವು. ಆಧುಕಿನ ಯುಗದಲ್ಲಿ ಇಂತಹ ಪರಿಸ್ಥಿತಿ ಇರುವುದು ಶೋಚನೀಯ.

ಶಿಕ್ಷಣಕ್ಕಾಗಿ ಇಲ್ಲಿನ ಮಕ್ಕಳು ಪಡಬಾರದ ಕಷ್ಟು ಅನುಭವಿಸುತ್ತಿರುವುದನ್ನು ನೋಡಿದರೆ ಕಣ್ಣಾಲಿಗಳು ತುಂಬಿಕೊಳ್ಳುತ್ತವೆ. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರತಿ ವರ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿದ್ದರೂ ಇಲ್ಲಿನ ಮಕ್ಕಳಿಗೆ ಮಾತ್ರ ಹಿಂಸೆ ತಪ್ಪಿಲ್ಲ.

5ನೇ ತರಗತಿಗೆ ಸೀಮಿತ: ಹನೂರು ತಾಲೂಕಿನ ಪಚ್ಚೆದೊಡ್ಡಿ ಕಾಡಂಚಿನ ಗ್ರಾಮವಾಗಿದ್ದು, ಇಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, 200ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಮಾತ್ರ ಶಿಕ್ಷಣ ನೀಡುತ್ತಿದ್ದು, 5ನೇ ತರಗತಿ ಮುಗಿದ ಬಳಿಕ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ಸುಮಾರು 5 ಕಿ.ಮೀ. ದೂರವಿರುವ ಅಜ್ಜೀಪುರ ಗ್ರಾಮಕ್ಕೆ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿ ಇದೆ.

ನಿತ್ಯ 10 ಕಿ.ಮೀ. ಸಂಚಾರ: ಪಚ್ಚೆದೊಡ್ಡಿ ಗ್ರಾಮದಿಂದ ಅಜ್ಜೀಪುರ ಗ್ರಾಮದ ಪ್ರೌಢಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ಪ್ರತಿದಿನ 10 ಕಿ.ಮೀ. ನಡೆದುಕೊಂಡು ಬರಬೇಕಿದೆ. ಬೆಳಗ್ಗೆ ಮನೆಯಿಂದ ಹೊರಟು ಶಾಲೆ ತಲುಪುವ ವೇಳೆಗೆ ನಡೆದು ದಣಿದು ಮೈ ಕೈ ನೋಯಿಸಿಕೊಂಡು ವಿದ್ಯಾರ್ಥಿಗಳು ಬಸವಳಿದಿರುತ್ತಾರೆ.

ಇನ್ನು ಸಂಜೆ ಮನೆಗೆ ಹಿಂದಿರುಗುವಾಗಲು 5 ಕಿ.ಮೀ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಿರುವಾಗ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಆಯಾಸಪಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇನ್ನುಳಿದ ಸಮಯವನ್ನು ಓದಲು ಮೀಸಲಿಡಬೇಕಾಗಿದೆ. ಈ ಯಾತನ ತಾಳಲಾದರೇ ಕೆಲವರು ಶಿಕ್ಷಣವನ್ನೇ ಮೊಟುಕುಗೊಳಿಸಿದ್ದಾರೆ.

ಸಂಜೆ ಕಾಡುಪ್ರಾಣಿಗಳ ಕಾಟ: ಪಚ್ಚೆದೊಡ್ಡಿ ಅರಣ್ಯದಂಚಿನ ಗ್ರಾಮವಾಗಿದ್ದು, ಈ ಮಾರ್ಗದಲ್ಲಿ ಕಾಡಾನೆ, ಕಾಡುಹಂದಿಯಂತಹ ಪ್ರಾಣಿಗಳು ಹೆಚ್ಚಾಗಿ ಓಡಾಡುತ್ತಲೇ ಇರುತ್ತವೆ. ಅಲ್ಲದೇ ಸಂಜೆ ವೇಳೆ ಕಾಡಾನೆಗಳು ರಸ್ತೆಯ ಬದಿಯಲ್ಲಿಯೇ ಓಡಾಡುತ್ತಿದ್ದು, ಒಮ್ಮೆ ರೈತನೋರ್ವನನ್ನು ಸಂಜೆ 6 ಗಂಟೆ ವೇಳೆಗೆ ದಾಳಿ ನಡೆಸಿ ಕೊಂದಿರುವ ನಿದರ್ಶನಗಳು ಕೂಡ ಇವೆ.

ಇಂತಹ ರಸ್ತೆಯಲ್ಲಿ ವಿದ್ಯಾರ್ಥಿಗಳು ಸಂಜೆ ಮನೆಗಳಿಗೆ ಹಿಂದಿರುಗುವಾಗ ಪ್ರಾಣಭಯದಿಂದಲೇ ಸಂಚರಿಸಬೇಕಾದಂತಹ ಪರಿಸ್ಥಿತಿಯಿದೆ. ಅಲ್ಲದೇ ಕಾಡುಹಂದಿಗಳು ಈ ರಸ್ತೆಯಲ್ಲಿ ಹಿಂಡು ಹಿಂಡಾಗಿ ಸಂಚರಿಸುವುದು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಕೈಯಲ್ಲಿ ಪ್ರಾಣವನ್ನಿಟ್ಟುಕೊಂಡು ಕಡಿದಾದ ರಸ್ತೆಯಲ್ಲೇ ಶಾಲೆ ಹಾಗೂ ಮನೆಯನ್ನು ತಲುಪಬೇಕಾಗಿದೆ.

ಕಲ್ಲು-ಮುಳ್ಳುಗಳ ಹಾದಿ: ಇನ್ನು ಪಚ್ಚೆದೊಡ್ಡಿ ಅಜ್ಜೀಪುರ ಮಾರ್ಗದ ರಸ್ತೆಯು ತೀರಾ ಹದಗೆಟ್ಟಿದ್ದು, ಕಲ್ಲು-ಮುಳ್ಳುಗಳಿಂದ ಕೂಡಿರುವ ಕಡಿದಾದ ಹಾದಿಯಾಗಿದೆ. ಈ ಗ್ರಾಮವು ಅರಣ್ಯ ವ್ಯಾಪಿಗೆ ಒಳಪಟ್ಟಿರುವುದರಿಂದ ಸುಸಜ್ಜಿತ ಡಾಂಬರು ರಸ್ತೆಯನ್ನೂ ಸಹ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಮಾರ್ಗದಲ್ಲಿ ನಿರ್ಮಿಸಿರುವ ಮಣ್ಣಿನ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದಿದ್ದು, ಕಲ್ಲಿನ ರಾಶಿ ಬಿದ್ದಿವೆ. ಇದರಿಂದ ವಿದ್ಯಾರ್ಥಿಗಳು ಕಲ್ಲು ಮುಳ್ಳುನ ಹಾದಿಯಲ್ಲಿಯೇ ನಡೆದು ಸಾಗಬೇಕಾದ ಪರಿಸ್ಥಿತಿಯಿದೆ.

ನಿತ್ಯ 10 ಕಿ.ಮೀ. ಸಂಚಾರಕ್ಕೆ 3 ಗಂಟೆ ಬೇಕು: ಪಚ್ಚೆದೊಡ್ಡಿಯಿಂದ ವಿದ್ಯಾರ್ಥಿಗಳು ಅಜ್ಜೀಪುರ ಗ್ರಾಮದ ಶಾಲೆ ತಲುಪಲು 5 ಕಿ.ಮಿ. ಬೇಕಾಗುತ್ತದೆ. ಹೋಗಿ ಬರಲು ಸೇರಿ 10 ಕಿ.ಮೀ. ಸಂಚರಿಸಬೇಕಾಗಿದೆ. ಅದು ಕೂಡ ಕಡಿದಾದ ಹಾದಿಯಲ್ಲಿ ಸಂಚರಿಸಬೇಕಾಗಿದೆ. ಇಂತಹ ರಸ್ತೆಯಲ್ಲಿ 1 ಕಿ.ಮೀ. ಸಂಚರಿಸಲು ಕನಿಷ್ಠ 15 ನಿಮಿಷ ಬೇಕಾಗಲಿದೆ.

ಅಂದರೆ 10 ಕಿ.ಮೀ. ನಡೆಯಲು ಏನಿಲ್ಲವೆಂದರೂ 2.30 ರಿಂದ 3 ಗಂಟೆ ಸಮಯ ಹಿಡಿಯಲಿದೆ. ಕಲ್ಲು ಮುಳ್ಳುಗಳ ಹಾದಿಯಲ್ಲಿ ಓಡಾಡುವುದರಿಂದ ಭಾರೀ ಆಯಾಸ ಪಡೆಯಬೇಕಾಗುತ್ತದೆ. ಅದ ಕೂಡ ಕಾಡುಪ್ರಾಣಿಗಳ ಹಾವಳಿ ಇರುವುದರಿಂದ ಭಯಭೀತಿ ಕೂಡ ಇರುತ್ತದೆ ಎಂದು ವಿದ್ಯಾರ್ಥಿಗಳು ಅಲವತ್ತುಕೊಂಡಿದ್ದಾರೆ.

ಇದಕ್ಕೆ ಪರಿಹಾರ ಏನು?: ಪಚ್ಚೆದೊಡ್ಡಿ-ಅಜ್ಜೀಪುರ ಮಾರ್ಗವು ಕಲ್ಲು-ಮುಳ್ಳುಗಳಿಂದ ಕೂಡಿರುವ ಕಡಿದಾದ ಹಾದಿಯಾಗಿದೆ. ಈ ಗ್ರಾಮವು ಅರಣ್ಯ ವ್ಯಾಪಿಗೆ ಒಳಪಟ್ಟಿರುವುದರಿಂದ ಡಾಂಬರು ರಸ್ತೆಯನ್ನೂ ನಿರ್ಮಿಸಲು ಸಾಧ್ಯವಿಲ್ಲ ಎನ್ನಲಾಗುತ್ತದೆ. ಇದರ ಸಾಧಕ ಬಾಧಕಗಳನ್ನು ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿದೆ.

ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಗ್ರಾಮ ಹಾಗೂ ಶಾಲೆಯನ್ನು ತಲುಪಲು ಒಂದು ವಾಹನ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಇದೀಗ ಪರೀಕ್ಷಾ ಸಮಯ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಸಮಯಬೇಕಾಗಿರುವುದರಿಂದ ವಾಹನ ವ್ಯವಸ್ಥೆ ಒದಗಿಸಲು ಕ್ಷೇತ್ರದ ಶಾಸಕರು ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತುರ್ತಾಗಿ ಗಮನ ಹರಿಸಬೇಕಾಗಿದೆ.

* ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.