ಕಾಡ್ಗಿಚ್ಚು ಹತೋಟಿಗೆ 2 ಹೆಲಿಕಾಪ್ಟರ್‌ ಬಳಕೆ


Team Udayavani, Feb 27, 2019, 6:56 AM IST

kadgichu.jpg

ಗುಂಡ್ಲುಪೇಟೆ: ಮೂಲೆಹೊಳೆ ಮತ್ತು ಚಮ್ಮನಹಳ್ಳದ ಎತ್ತರದ ಪ್ರದೇಶಗಳಲ್ಲಿ ಎರಡು ಹೆಲಿಕಾಪ್ಟರ್‌ ಬಳಸಿ ಕಾರ್ಯಾಚರಣೆ ಮಾಡುವುದರೊಂದಿಗೆ ಮಂಗಳವಾರ ಕಾಡ್ಗಿಚ್ಚನ್ನು ಹತೋಟಿಗೆ ತರಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ಪ್ರಭಾರ ನಿರ್ದೇಶಕ ಅಂಬಾಡಿ ಮಾಧವ್‌ ತಿಳಿಸಿದ್ದಾರೆ.

ಕರ್ನಾಟಕ-ತಮಿಳುನಾಡು-ಕೇರಳ ಗಡಿಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿರುವುದರಿಂದ ಅದನ್ನು ನಂದಿಸಲಾಗಿದ್ದು, ಮುಂದಿನ ಎರಡು ದಿನಗಳ ಕಾಲ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹೆಲಿಕಾಪ್ಟರ್‌ಗಳನ್ನು ಬಂಡೀಪುರದಲ್ಲಿ ಇರಿಸಿಕೊಳ್ಳಲಾಗುವುದು ಮತ್ತು ಬುಧವಾರ ಪರಿಸ್ಥಿತಿಯನ್ನು ನೋಡಿಕೊಂಡು ಸಫಾರಿ ಆರಂಭಿಸಲಾಗುವುದು ಎಂದರು.

ಈಗಾಗಲೇ ನೂರಾರು ಸ್ವಯಂ ಸೇವಕರು ಮತ್ತು ಎರಡು ದಿನಗಳ ಹೆಲಿಕಾಪ್ಟರ್‌ ಕಾರ್ಯಾಚರಣೆ ಮತ್ತು ಅರಣ್ಯ ಮತ್ತು ಅಗ್ನಿಶಾಮಕ  ಸಿಬ½ಂದಿ ಸತತ ಶ್ರಮದಿಂದ ಬೆಂಕಿಯು ತಹಬದಿಗೆ ಬಂದಿದ್ದು, ಅವರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮತ್ತೆರಡು ದಿನಗಳು ಬೆಂಕಿಯ ಕೆಂಡಗಳು ಸಂಪೂರ್ಣವಾಗಿ ನಂದಿಹೋಗುವ ವರೆಗೂ ನಿಗಾ ಇಡಲಾಗುವುದು ಎಂದರು.

ಒಟ್ಟಾರೆಯಾಗಿ ಮೂರು ಸಾವಿರ ಎಕರೆಗಳಷ್ಟು ವನ್ಯ ಸಂಪತ್ತು ನಾಶವಾಗಿದ್ದು, ವನ್ಯಜೀವಿಗಳಿಗೆ ಅಪಾಯವಾಗಿಲ್ಲ. ಕಳೆದ ಡಿಸೆಂಬರ್‌ ನಿಂದಲೇ ಹುಲಿ, ಚಿರತೆ, ಆನೆ, ಜಿಂಕೆ ಮತ್ತಿತರೆ ದೊಡ್ಡಪ್ರಾಣಿಗಳು ಪಕ್ಕದ ಮಧುಮಲೆ, ವೈನಾಡು, ಕಬಿನಿ ಹಿನ್ನೀರಿನ ಕಡೆ ವಲಸೆ ಹೋಗಿರುವುದರಿಂದ ವನ್ಯಪ್ರಾಣಿಗಳಿಗೆ ಜೀವಕ್ಕೆ ಹಾನಿಯಾಗಿಲ್ಲ. ಸಣ್ಣಪುಟ್ಟ ಹಾವು, ಪಕ್ಷಿ, ಕಾಡುಕೋಳಿ ಇತರೆ ಸಣ್ಣ ಪ್ರಮಾಣದ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿರುವ ಸಾಧ್ಯತೆ ಇದೆ ಎಂದರು.

ಒಣಗಿ ನಿಂತ ಬಂಡೀಪುರ: ಹಸಿರ ಸಿರಿಯನ್ನು ಹೊದ್ದು ಕಂಗೊಳಿಸುತ್ತಿರದ್ದ ಬಂಡೀಪುರದಲ್ಲಿ ಈಗ ಕೇವಲ ಬೂದಿ, ಒಣಗಿದ ಮರಗಳು ಮತ್ತು ಸುಟ್ಟು ಕರಕಲಾಗಿ ನಿಂತಿರುವ ಮರಗಳು ಮತ್ತು ಹಸಿರಾಗಿದ್ದರೂ ಬೆಂಕಿಯ ಬಲೆಗೆ ಮುದುಡಿಹೋಗಿರುವ ಎಲೆಗಳನ್ನು ಹೊತ್ತ ಮರಗಳು ಕಾಣಸಿಗುತ್ತಿದೆ. ಅಲ್ಲಲ್ಲಿ ಜಿಂಕೆ, ಕೋತಿ ಮತ್ತು ಪಕ್ಷಿಗಳು ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿವೆ. 

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.