ಜಿಲ್ಲೆಯಲ್ಲಿ 41 ಶುದ್ಧ ನೀರಿನ ಘಟಕ ಸ್ಥಗಿತ


Team Udayavani, Dec 28, 2019, 3:00 AM IST

jilleyalli

ಚಾಮರಾಜನಗರ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ ಯೋಜನೆಯಲ್ಲಿ ಜಿಲ್ಲೆಯಲ್ಲಿ 211 ಘಟಕಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 149 ಕಾರ್ಯಾರಂಭವಾಗಿ 108 ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಪೂರೈಕೆ ಮಾಡುವ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುವ ಯೋಜನೆಯನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿತು. ಸರ್ಕಾರದ ಉದ್ದೇಶಿತ ಆಶಯ ಇನ್ನೂ ಸಾಕಾರಗೊಂಡಿಲ್ಲ. ಜಿಲ್ಲೆಯ ಹಲವೆಡೆ ಈ ಘಟಕಗಳೇ ಇಲ್ಲ. ಇರುವ ಹಲವು ಕಡೆ ಘಟಕಗಳು ಕೆಟ್ಟು ನಿಂತಿವೆ. ಇನ್ನೂ ಕೆಲವು ಕಡೆ ಕುಂಟುತ್ತಾ ನಿರ್ಮಾಣ ಕಾಮಗಾರಿ ನಡೆದಿದೆ. ಹಲವೆಡೆ ಸಿದ್ಧಗೊಂಡು ಉದ್ಘಾಟನೆಯಾಗಿಲ್ಲ.

ನಿರ್ಮಾಣದ ಹಂತದಲ್ಲಿವೆ 62 ಘಟಕ: ಜಿಲ್ಲೆಗೆ ಒಟ್ಟು 211 ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ. ಇದರಲ್ಲಿ 62 ಘಟಕಗಳು ನಿರ್ಮಾಣದ ವಿವಿಧ ಹಂತದಲ್ಲಿವೆ. 149 ಘಟಕಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಇವುಗಳಲ್ಲಿ ಸುಸ್ಥಿತಿಯಲ್ಲಿದ್ದು, ಕಾರ್ಯನಿರ್ವಹಿಸುತ್ತಿರುವುದು 108 ಘಟಕಗಳು ಮಾತ್ರ. ಇನ್ನು 41 ಘಟಕಗಳು ಕೆಟ್ಟು ನಿಂತಿವೆ.

ವಿವಿಧೆಡೆ ಉದ್ಘಾಟನೆಗೆ ಸಿದ್ಧ: ಚಾಮರಾಜನಗರ ತಾಲೂಕಿನಲ್ಲಿ 110 ಘಟಕಗಳು ಮಂಜೂರಾಗಿದ್ದು, ಇದರಲ್ಲಿ 7 ಕಾಮಗಾರಿ ಹಂತದಲ್ಲಿವೆ. 20 ಉದ್ಘಾಟನೆಗೆ ಸಿದ್ಧವಾಗಿವೆ. 70 ಕಾರ್ಯಾರಂಭ ಮಾಡಿವೆ. ಇವುಗಳಲ್ಲಿ 41 ಕೆಲಸ ನಿರ್ವಹಿಸುತ್ತಿದ್ದು, 29 ರಿಪೇರಿಗೆ ಬಂದಿವೆ. ಗುಂಡ್ಲುಪೇಟೆ ತಾಲೂಕಿನಲ್ಲಿ 33 ಘಟಕಗಳು ಮಂಜೂರಾಗಿದ್ದು, 31 ಕಾರ್ಯಾರಂಭಿಸಿವೆ. 28 ಸುಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, 03 ಕೆಟ್ಟು ಹೋಗಿವೆ.

ಕೊಳ್ಳೇಗಾಲ ತಾಲೂಕಿನಲ್ಲಿ 47 ಘಟಕಗಳು ಮಂಜೂರಾಗಿದ್ದು, ಇದರಲ್ಲಿ 05ರ ಕಾಮಗಾರಿ ಪ್ರಗತಿಯಲ್ಲಿದೆ. 05 ಉದ್ಘಾಟನೆಗೆ ಸಿದ್ಧವಾಗಿವೆ. 33 ಕಾರ್ಯಾರಂಭಿಸಿದ್ದು, 28 ಸುಸ್ಥಿತಿಯಲ್ಲಿವೆ. 05 ಕೆಟ್ಟು ಹೋಗಿವೆ. ಯಳಂದೂರು ತಾಲೂಕಿನಲ್ಲಿ 21 ಘಟಕಗಳು ಮಂಜೂರಾಗಿದ್ದು, 02 ಕಾಮಗಾರಿ ಹಂತದಲ್ಲಿವೆ. 03 ಉದ್ಘಾಟನೆಗೆ ಸಿದ್ಧವಾಗಿವೆ. 15 ಕಾರ್ಯಾರಂಭಿಸಿದ್ದು, ಇದರಲ್ಲಿ 11 ಕೆಲಸ ನಿರ್ವಹಿಸುತ್ತಿವೆ. ಇನ್ನು 04 ಕೆಟ್ಟು ನಿಂತಿವೆ.

60 ಘಟಕ ನಿರ್ಮಿಸುವ ಗುರಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌) 60 ಘಟಕಗಳನ್ನು ನಿರ್ಮಿಸುವ ಗುರಿ ಹೊಂದಿತ್ತು. ಇದರಲ್ಲಿ 56 ನ್ನು ನಿರ್ಮಿಸಿ ನಿರ್ವಹಣೆ ಮಾಡಿದೆ. ಇದರಲ್ಲಿ 27 ಕೆಲಸ ನಿರ್ವಹಿಸುತ್ತಿದ್ದು, 29 ಕೆಟ್ಟು ಹೋಗಿವೆ. ಗ್ರಾಮೀಣ ನೀರು ಸರಬರಾಜು ವ್ಯಾಪ್ತಿಗೆ 91 ಘಟಕಗಳನ್ನು ನೀಡಲಾಗಿದೆ.

ಇದರಲ್ಲಿ 14 ಘಟಕಗಳ ಕಾಮಗಾರಿ ಪ್ರಗತಿಯಲ್ಲಿದೆ. 23 ಉದ್ಘಾಟನೆಗೆ ಸಿದ್ಧವಾಗಿವೆ. 34 ಕಾರ್ಯಾರಂಭ ಮಾಡಿದ್ದು, 25 ಕೆಲಸ ನಿರ್ವಹಿಸುತ್ತಿವೆ. 09 ಕೆಟ್ಟು ಹೋಗಿವೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌) ನಿರ್ವಹಿಸುತ್ತಿದ್ದ 56 ಘಟಕಗಳನ್ನು ಇದೀಗ ಗ್ರಾಮೀಣ ನೀರು ಸರಬರಾಜು ಯೋಜನೆಯ ವ್ಯಾಪ್ತಿಗೆ ವಹಿಸಲಾಗಿದೆ.

ಸಹಕಾರ ಸಂಘಗಳ ನಿರ್ವಹಣೆ: ವಿಶೇಷವೆಂದರೆ ಜಿಲ್ಲೆಯಲ್ಲಿ ಸಹಕಾರ ಸಂಘಗಳು 59 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುತ್ತಿವೆ. ಇವುಗಳಲ್ಲಿ 59 ಸಹ ಸುಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿವೆ! ಖಾಸಗಿ ಸಹಕಾರ ಸಂಘಗಳ ನಿರ್ವಹಣೆಯ ಎಲ್ಲ ಘಟಕಗಳು ಸುಸ್ಥಿತಿಯಲ್ಲಿವೆ. ಸರ್ಕಾರಿ ನಿರ್ವಹಣೆಯಲ್ಲಿ ಅನೇಕ ಘಟಕಗಳು ಕೆಟ್ಟು ನಿಂತಿವೆ.

ಸೌಲಭ್ಯ ಇದ್ದರೂ ಜನರಿಗೆ ಪ್ರಯೋಜನವಾಗಿಲ್ಲ: ಜನ ಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಅನೇಕ ಘಟಕಗಳು ಕೆಟ್ಟು ನಿಂತಿರುವುದರಿಂದ ಸೌಲಭ್ಯ ಇದ್ದರೂ ಜನರು ಅದರ ಪ್ರಯೋಜನ ಪಡೆಯಲು ಸಾಧ್ಯವಾಗದಂತಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಶುದ್ಧ ನೀರು ಇನ್ನೂ ಮರೀಚಿಕೆಯಾಗಿದೆ. ಯಳಂದೂರು ತಾಲೂಕಿನ ಹೊನ್ನೂರು, ಯರಿಯೂರು, ಮದ್ದೂರು, ಮಾಂಬಳ್ಳಿ, ಯರಗಂಬಳ್ಳಿ, ಅಂಬಳೆ-2 ಗ್ರಾಮಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಕಾಮಗಾರಿಯು 2018ರ ನವೆಂಬರ್‌ ತಿಂಗಳಲ್ಲಿ ಪ್ರಾರಂಭವಾಗಿತ್ತು.

ಇದರಲ್ಲಿ ಹೊನ್ನೂರಿನಲ್ಲಿ 3 ಮಾಂಬಳ್ಳಿ 1 ಕೆಸ್ತೂರು 1, ಮದ್ದೂರಿನಲ್ಲಿ 2, ಅಗರ ಗ್ರಾಮದಲ್ಲಿ ಒಂದು ಘಟಕಗಳ ಉದ್ಘಾಟನೆಯೂ ಆಗಿದೆ. ಯರಿಯೂರು ಗ್ರಾಮದಲ್ಲೂ 2 ಘಟಕಗಳು ನಿರ್ಮಾಣವಾಗಿವೆ ಆದರೆ ಕೆಲವೇ ದಿನಗಳಲ್ಲಿ ಇದು ಕೆಟ್ಟು ನಿಂತಿವೆ. ಇದನ್ನು ದುರಸ್ತಿ ಪಡಿಸಿದ್ದರೂ, ಮತ್ತೆ ಇದು ಕೆಟ್ಟು ಹೋಗುತ್ತಿದ್ದು ಸಾರ್ವಜನಿಕರು ಪರಿಪಾಟಲು ಪಡುವ ಸ್ಥಿತಿ ಇದೆ.

ಹನೂರು ಪಟ್ಟಣದಲ್ಲಿ 2 ಶುದ್ಧ ನೀರಿನ ಘಟಕಗಳಿವೆ. ಇದರಲ್ಲಿ ಪಟ್ಟಣ ಪಂಚಾಯ್ತಿ ನಿರ್ವಹಣೆಯ ಒಂದು ಕೆಟ್ಟು ನಿಂತಿದ್ದರೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಣೆ ಮಾಡುತ್ತಿರುವ ಇನ್ನೊಂದು ಘಟಕ ಸುಸ್ಥಿತಿಯಲ್ಲಿದೆ. ರಾಮಾಪುರ ಸಮೀಪ ಗೆಜ್ಜಲನತ್ತದಲ್ಲಿ ಕೆಆರ್‌ಐಡಿಲ್‌ನಿಂದ ಆರಂಭಗೊಂಡ ಘಟಕ 2 ತಿಂಗಳಾದ ನಂತರ ಕೆಟ್ಟುನಿಂತಿದೆ.

ಘಟಕ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿಲ್ಲ: ವಿವಿಧೆಡೆ ಹಲವು ತಿಂಗಳ ಹಿಂದೆಯೇ ಕಾಮಗಾರಿಯು ಪ್ರಾರಂಭವಾಗಿದ್ದರೂ. ಇನ್ನೂ ಕೆಲವೆಡೆ ಯಾವ ಘಟಕವು ಕೂಡ ಸಮಪರ್ಕವಾಗಿ ಪೂರ್ಣ ಪ್ರಮಾಣದಲ್ಲಿ ಸಿದ್ದವಾಗಿಲ್ಲ. ಕಾಮಗಾರಿಯು ಅರೆಬರೆಯಾಗಿದೆ. ಇದಕ್ಕೆ ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಇಲಾಖೆಯ ನಿರ್ಲಕ್ಷ್ಯವೇ ಕಾರಣವಾಗಿದೆ. ಆದಷ್ಟು ಬೇಗ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭ ಮಾಡಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.

ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಪೂರೈಕೆಯಾಗುವ ನೀರು ಶುದ್ಧವಾಗಿಲ್ಲ. ಇದರಲ್ಲಿ ಪ್ಲೋರೈಡ್‌ ಅಂಶ ಹೆಚ್ಚಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಂತದಲ್ಲೇ ಇದೆ. ಕೆಲವೆಡೆ ಇದರ ನಿರ್ವಹಣೆ ಸರಿಯಾಗಿಲ್ಲದೆ ಕೆಟ್ಟು ನಿಂತಿದೆ. ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಈ ಬಗ್ಗೆ ಕ್ರಮ ವಹಿಸಬೇಕು.
-ಸಿದ್ಧರಾಜು, ಹೊನ್ನೂರು

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ನಿರ್ವಹಣೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು, ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇನ್ನೊಂದು ತಿಂಗಳೊಳಗೆ ಎಲ್ಲ ಘಟಕಗಳೂ ದುರಸ್ತಿಯಾಗಿ ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ನಾವು ಸಹ ಅದಕ್ಕಾಗಿ ಬೇಕಾದ ಬಜೆಟ್‌ ಸಿದ್ಧಪಡಿಸಿ ಕಳುಹಿಸಿಕೊಡುತ್ತಿದ್ದೇವೆ.
-ಬಿ.ಎಚ್‌. ನಾರಾಯಣರಾವ್‌, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.