ದಿವ್ಯಾಂಗರ ಯೋಜನೆಗಳಿಗೆ ಶೇ.5ರಷ್ಟು ಅನುದಾನ ಕಡ್ಡಾಯ
Team Udayavani, Mar 9, 2020, 3:00 AM IST
ಚಾಮರಾಜನಗರ: ಪ್ರತಿ ಇಲಾಖೆಗಳು ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ದಿವ್ಯಾಂಗರ ಕಲ್ಯಾಣ ಯೋಜನೆ ಕಾರ್ಯಕ್ರಮಗಳಿಗೆ ಮೀಸಲಿಟ್ಟು ವಿನಿಯೋಗಿಸಬೇಕಿದೆ ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತ ವಿ.ಎಸ್. ಬಸವರಾಜು ತಿಳಿಸಿದರು.
ನಗರದ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವ್ಯಾಂಗರ ಯೋಜನೆಗಳಿಗೆ ಎಲ್ಲ ಇಲಾಖೆಗಳು ಶೇ.5ರಷ್ಟು ಹಣವನ್ನು ವೆಚ್ಚ ಮಾಡಬೇಕಿದೆ. ಜಿಲ್ಲೆಗಳಗೂ ಭೇಟಿ ನೀಡಿ ದಿವ್ಯಾಂಗರ ಯೋಜನೆಗಳ ಅನುಷ್ಠಾನಕ್ಕೆ ತಿಳಿಸಲಾಗಿದೆ ಎಂದರು.
ಅಗತ್ಯ ಸೌಲಭ್ಯ ಕಲ್ಪಿಸಿ: ದಿವ್ಯಾಂಗರನ್ನು ನೋಡಿಕೊಳ್ಳುವ ಸಲುವಾಗಿ ಹಗಲು ಯೋಗಕ್ಷೇಮ (ಡೇ ಕೇರ್ ಸೆಂಟರ್) ಅನುಕೂಲವಾಗಿದೆ. ದಿವ್ಯಾಂಗರ ನೋಡಿಕೊಳ್ಳುವ ಆರೈಕೆದಾರರ ಪರಿಸ್ಥಿತಿಯನ್ನು ಸುಧಾರಿಸಬೇಕಿದೆ. ಈ ನಿಟ್ಟಿನಲ್ಲಿ ಆರೈಕೆದಾರರ ಕುಟುಂಬಗಳಿಗೆ ಆರ್ಥಿಕ ನೆರವು ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಅವರಿಗೂ ಉತ್ತಮ ಬದುಕು ಸಾಗಿಸಲು ಸಹ ಮುಂದಾಗಿದ್ದೇವೆ ಎಂದು ತಿಳಿಸಿದರು.
ದಿವ್ಯಾಂಗರ ಆರೋಗ್ಯ, ಆರೈಕೆ, ಸೌಲಭ್ಯಗಳಿಗಾಗಿ ಜಿಲ್ಲೆಯಲ್ಲೂ ಸಹ ವಿವಿಧ ಕೇಂದ್ರಗಳನ್ನು ತೆರೆಯಲಾಗುವುದು. ಈ ನಿಟ್ಟಿನಲ್ಲಿ ಆಗಬೇಕಿರುವ ಪ್ರಕ್ರಿಯೆಗೆ ಗಮನ ಹರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಾಗೃತಿ ಮೂಡಿಸಿ: ದಿವ್ಯಾಂಗರಿಗೆ ಒದಗಿಸಬೇಕಿರುವ ಸೇವೆ ನೆರವಿಗೆ ಹಾಗೂ ಯೋಜನೆ ಅನುಷ್ಠಾನಗಳಿಗೆ ಇಲಾಖೆಗಳ ನಡುವೆ ಸಮನ್ವಯವು ಮುಖ್ಯವಾಗಿದೆ. ಯೋಜನೆ ಪರಿಣಾಮಕಾರಿ ಜಾರಿ ಆಗಬೇಕಿದೆ. ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಯ ಬ್ಲಾಕ್ ಹಂತದಲ್ಲಿಯೂ ಜಾರಿಗೆ ಬರಲಿದೆ. ಮಾಧ್ಯಮಗಳು ಸಹ ಆಗಬೇಕಿರುವ ಕಾರ್ಯಕ್ರಮಗಳ ಸಂಬಂಧ ಜಾಗೃತಿ ಮೂಡಿಸಿ ಗಮನ ಸೆಳೆಯಬೇಕಿದೆ ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೇರರ್ ವರ್ಲ್ಡ್ ವೈಡ್ ಸಂಸ್ಥೆಯ ಸಂಸ್ಥಾಪಕ ಡಾ.ಅನಿಲ್ ಕೆ.ಪಾಟೀಲ್, ಡಾ.ನಟೇಶ್, ಅಂಗವಿಕಲರ ಅಧಿನಿಯಮದ ಮಾಜಿ ಆಯುಕ್ತ ರಾಜಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಬಸವರಾಜು, ಅಂಗವಿಕಲರ ಕಲ್ಯಾಣಾಧಿಕಾರಿ ಸೋಮಶೇಖರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?