ಕೊಳ್ಳೇಗಾಲ-ಹನೂರು ಕ್ಷೇತ್ರದಲ್ಲಿ 500 ಮತಗಟ್ಟೆ


Team Udayavani, Apr 18, 2019, 3:00 AM IST

kollegala

ಕೊಳ್ಳೇಗಾಲ: ಹನೂರು ಮತ್ತು ಕೊಳ್ಳೇಗಾಲ ತಾಲೂಕು ಕೇಂದ್ರಗಳಿಗೆ ಏ.18ರಂದು ಮೊದಲನೇ ಹಂತದ ಚುನಾವಣೆ ನಡೆಯಲಿದ್ದು, ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮತಯಂತ್ರಗಳೊಂದಿಗೆ ನೇಮಕಗೊಂಡಿರುವ ಮತಗಟ್ಟೆಗಳಿಗೆ ತೆರಳಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌, ಬಿಜೆಪಿ, ಬಿಎಸ್ಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಚುನಾವಣಾ ಪ್ರಚಾರ ನಡೆಸಿ ಪ್ರಚಾರ ಧೂಳೆಬ್ಬಿಸಿದ್ದರು. ಬಹಿರಂಗ ಮತಯಾಚನೆಗೆ ಮಂಗಳವಾರ ತೆರೆ ಬಿದ್ದಿತ್ತು.

ನಂತರ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ವಿವಿಧ ಸಮಾಜದ ಮುಖಂಡರ ಮನೆ ಬಾಗಿಲಿಗೆ ತೆರಳುತ್ತಿದ್ದಂತೆ ಚುನಾವಣೆಗೆ ನೇಮಕಗೊಂಡಿರುವ ಸಿಬ್ಬಂದಿ ಅಭ್ಯರ್ಥಿಗಳ ಹಣೆಬರಹ ಪರೀಕ್ಷೆಗೆ ಮತಯಂತ್ರವನ್ನು ಚುನಾವಣಾಧಿಕಾರಿಗಳಿಂದ ಪಡೆದು ಮತಗಟ್ಟೆಗಳಿಗೆ ಬುಧವಾರ ತೆರಳಿದರು.

ಮತಯಂತ್ರಗಳ ರವಾನೆ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 243 ಮತಗಟ್ಟೆಗಳಿಗೆ 973 ಸಿಬ್ಬಂದಿ ತಮ್ಮ ಮತಗಟ್ಟೆಗಳಿಗೆ ತೆರಳಿದರು. ಮತಗಟ್ಟೆಗಳಲ್ಲಿ ನೇಮಕಗೊಂಡಿರುವ ಸಿಬ್ಬಂದಿಯಿಂದ ಅಡಚಣೆ ಉಂಟಾದ ಪಕ್ಷದಲ್ಲಿ ನ್ಯೂನತೆಯನ್ನು ಸರಿಪಡಿಸಲು ಮುಂಗಡವಾಗಿ 100 ಜನರನ್ನು ನಿಯೋಜನೆ ಮಾಡಲಾಗಿದೆ.

ಗುರುವಾರ ನಡೆಯುವ ಲೋಕಸಭಾ ಚುನಾವಣೆ ಬಳಿಕ ಮತಯಂತ್ರಗಳನ್ನು ಸರ್ಕಾರಿ ಪ್ರಥಮ ದರ್ಜೆ ಮಹದೇಶ್ವರ ಕಾಲೇಜಿನಲ್ಲಿ ಸಂಗ್ರಹಿಸಿ ಬಳಿಕ ಜಿಲ್ಲಾ ಕೇಂದ್ರಕ್ಕೆ ಬಿಗಿ ಭದ್ರತೆಯೊಂದಿಗೆ ಮತಯಂತ್ರಗಳನ್ನು ರವಾನೆ ಮಾಡಲಾಗುವುದೆಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ನಿಖೀತ ಚಿನ್ನಸ್ವಾಮಿ ತಿಳಿಸಿದ್ದಾರೆ.

ಬಿಗಿ ಪೊಲೀಸ್‌ ಬಂದೋಬಸ್ತ್: ಶಾಂತಿಯುತ ಮತದಾನ ನಡೆಸುವ ಸಲುವಾಗಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓರ್ವ ಡಿವೈಎಸ್ಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌ 3, ಎಸೈ 4, ಸಹಾಯಕ ಎಸೈ 17, ಪೊಲೀಸ್‌ ಮತ್ತು ಗೃಹ ರಕ್ಷಕದಳ, 250 ಸಿಬ್ಬಂದಿ, ಡಿಎಆರ್‌ 3 ತುಕ್ಕಡಿ, ಕೆಎಸ್‌ಆರ್‌ಪಿ 2 ತುಕ್ಕಡಿ, ಪ್ಯಾರ ಮಿಲಿಟರಿಗೆ 8 ಸೆಕ್ಷನ್‌ಗೆ 40 ಜನರನ್ನು ನಿಯೋಜನೆ ಮಾಡಿರುವುದಾಗಿ ಡಿವೈಎಸ್ಪಿ ಪುಟ್ಟಮಾದಯ್ಯ ತಿಳಿಸಿದ್ದಾರೆ.

ಹನೂರು ತಾಲೂಕು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ 247 ಬೂತ್‌ಗಳಿಗೆ 1080 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮುಂಗಡ ಸಿಬ್ಬಂದಿಯಾಗಿ 92 ಜನರನ್ನು ನಿಯೋಜನೆ ಮಾಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 8 ಮತಗಟ್ಟೆಗಳು ಅರಣ್ಯದಲ್ಲಿದ್ದು, ಅಲ್ಲಿಗೆ ಅರಣ್ಯ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಪ್ರಕಾಶ್‌ ಮಾಹಿತಿ ನೀಡಿದ್ದಾರೆ.

ಏ.18 ರಂದು ನಡೆಯುವ ಲೋಕಸಭಾ ಚುನಾವಣೆ ಮತದಾನದ ಬಳಿಕ ಮತಯಂತ್ರಗಳನ್ನು ನಗರದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಭದ್ರತಾ ಕೊಠಡಿಯಲ್ಲಿ ಶೇಖರಣೆ ಮಾಡಿ ನಂತರ ಎಲ್ಲಾ ಮತಯಂತ್ರಗಳನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಚುನಾವಣೆ ಶಾಂತಿಯುತವಾಗಿ ನಡೆಸುವ ಸಲುವಾಗಿ ಡಿವೈಎಸ್ಪಿ 1, ಸರ್ಕಲ್‌ ಇನ್ಸ್‌ಪೆಕ್ಟರ್‌ 4, ಎಸೈ 5, ಸಹಾಯಕ ಎಸೈ 14, ಪೊಲೀಸ್‌ ಮತ್ತು ಗೃಹ ರಕ್ಷಕದಳ 250, ಡಿಎಆರ್‌ 3 ತುಕ್ಕಡಿ, ಕೆಎಸ್‌ಆರ್‌ಪಿ 2, ಪ್ಯಾರ ಮಿಲಿಟರಿ 8 ಸಕ್ಷೆನ್‌ಗೆ 40 ಜನ ನಿಯೋಜನೆಗೊಂಡಿದ್ದಾರೆ.

ಟಾಪ್ ನ್ಯೂಸ್

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.