ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ

ಹಿಂದೆ ನಟರಾಗಿ ಬೆಳೆಯಲು ಬಹಳಷ್ಟು ಪರಿಶ್ರಮ ಪಡಬೇಕಾಗಿತ್ತು.

Team Udayavani, Dec 2, 2022, 6:21 PM IST

ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ

ಚಾಮರಾಜನಗರ: ಬಿ.ವಿ.ಕಾರಂತರಿಂದ ಆರಂಭ ವಾದ ಮೈಸೂರಿನ ರಂಗಾಯಣದಲ್ಲಿ ಅಂದಿನಿಂದ ಇಂದಿನವರೆಗೆ ಅನೇಕ ನಿರ್ದೇಶಕರು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗುವ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಈಗಿನ ನಿರ್ದೇಶಕರ ಅವಧಿಯಲ್ಲಿ ಅಸಹನೀಯವಾದ ಭಯದ ವಾತಾ ವರಣ ಸೃಷ್ಟಿಯಾಗಿದೆ ಎಂದು ನಗರದ ಶಾಂತಲಾ ಕಲಾವಿದರು ರಂಗತಂಡದ ಅಧ್ಯಕ್ಷ ಎ ಡಿಸಿಲ್ವ ಹೇಳಿದರು.

ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜು ಕ್ಯಾಂಪಸ್‌ನಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ಜೆಎಸ್‌ಎಸ್‌ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾಟಕ ಕಲೆ ಎಂದಾಗ ಅಂತಹ ಪರಿಸರದಲ್ಲಿ ಮನಸ್ಸಿಗೆ ಸಂತಸ ಕೊಡುವ ವಾತಾವರಣ ಉಂಟಾಗಬೇಕು. ಆದರೆ ರಂಗಾಯಣದ ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ ಉಂಟಾಗಿರುವುದು ದುರಂತ ಎಂದು ಅವರು ವಿಷಾದಿಸಿದರು.

ನಮ್ಮ ಶಾಂತಲಾ ಕಲಾವಿದರು ತಂಡ ಮುಂದಿನ ವರ್ಷ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ತಂಡ ಉದಯಿಸಲು ಒಂದು ರೀತಿ ಜೆಎಸ್‌ಎಸ್‌ ಕಾಲೇಜು ಕಾರಣ. ಈ ಕಾಲೇಜು ನಾವು ಯಾವುದೇ ನಾಟಕ ಮಾಡಲು ಅಡ್ಡಿಪಡಿಸಲಿಲ್ಲ. ಇಲ್ಲಿ ಶಾಸಕರು ಮತ್ತು ನಾವು ಸೇರಿ, ಕಂಬಳಿ ನಾಗಿದೇವ, ಅಳಿಯ ದೇವರು ಅಕ್ಕ- ಪಕ್ಕ ನಾಟಕ ಮಾಡಿದ್ದೇವೆ.ಹಿಂದಿನ ಪ್ರಾಂಶುಪಾಲರಾಗಿದ್ದ ಕೆ.ಎಂ. ರೇವಣಸಿದ್ದಯ್ಯ ಹಾಗೂ ಇತರರು ನಾಟಕಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು ಎಂದು ಸ್ಮರಿಸಿದರು.

ಜೆಎಸ್‌ಎಸ್‌ ಸಂಸ್ಥೆ ರಂಗೋತ್ಸವದ ಮೂಲಕ ನಾಟಕ ಕಲೆಗೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆ. ನಾಟಕ ಕಲೆ ವ್ಯಕ್ತಿಯಲ್ಲಿ ಸೃಜನ ಶೀಲತೆಯನ್ನು ಬೆಳೆಸುತ್ತದೆ. ಉಗ್ಗುವಿಕೆ ಹೊಂದಿದ್ದ ಗೆಳೆಯರೊಬ್ಬರು ನಾಟಕದಲ್ಲಿ ಅಭಿನಯಿಸುವ ಮೂಲಕ ಆ ಸಮಸ್ಯೆ ಹೋಗಲಾಡಿಸಿಕೊಂಡರು ಎಂದರು. ಕಿರುತೆರೆ ನಟ ಲೋಕೇಶ್‌ ಬಸವಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸರ್ಕಾರ ಮಾಡಬೇಕಾದ ಕೆಲಸವನ್ನು ಜೆಎಸ್‌ಎಸ್‌ ಸಂಸ್ಥೆ ಮಾಡುತ್ತಿದೆ. ರಂಗ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆಗೆ ಕಾರಣವಾಗಿದೆ. ಜೆಎಸ್‌ಎಸ್‌ ರಂಗಶಿಕ್ಷಣ ವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಲಬೇಕು ಎಂದರು.

ಹಿಂದೆ ನಟರಾಗಿ ಬೆಳೆಯಲು ಬಹಳಷ್ಟು ಪರಿಶ್ರಮ ಪಡಬೇಕಾಗಿತ್ತು. ಇಂದು ಮೊಬೈಲ್‌ ಆಪ್‌ ಗಳ ಮೂಲಕ ಆಡಿಷನ್‌ ನೀಡಲಾಗುತ್ತದೆ. ಇದರಿಂದ ನೈಜ ಪ್ರತಿಭೆ ಬೆಳೆಯಲು ಸಾಧ್ಯವಿಲ್ಲ. ನಟನೆ ಬಹಳಷ್ಟು ವರ್ಷಗಳ ಪರಿಶ್ರಮ, ಪ್ರತಿಭೆ ಬೇಡುತ್ತದೆ. ಹಾಗಾದಾಗ ಮಾತ್ರ ಉತ್ತಮ ಕಲಾವಿದನಾಗಲು ಸಾಧ್ಯ ಎಂದರು.

ಜೆಎಸ್‌ಎಸ್‌ ಮಹಾ ಪೀಠದ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್‌ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್‌. ಎಂ. ಸ್ವಾಮಿ, ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಪ್ರಿನ್ಸಿಪಾಲ್‌ ಸಿದ್ಧರಾಜು, ಸಂಗೀತ ನಿರ್ದೇಶಕ ಚಂದ್ರಶೇಖರಾಚಾರ್‌ ಹೆಗ್ಗೊಠಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದ ಬಳಿಕ ಮಂಜುನಾಥ್‌ ಕಾಚಕ್ಕಿ ನಿರ್ದೇಶನದ ಹಲಗಲಿಯ ಬೇಡರು ನಾಟಕವನ್ನು ಗುಂಡ್ಲುಪೇಟೆ ತಾ. ಬರಗಿ ಜೆಎಸ್‌ಎಸ್‌ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.