ಮನೋಜ್ಞವಾಗಿ ಮೂಡಿಬಂದ ಬದುಕಿ-ಬದುಕಿಸಿ ನಾಟಕ


Team Udayavani, Mar 10, 2020, 3:00 AM IST

manojnavagi

ಚಾಮರಾಜನಗರ: ರಾಜ್ಯ ರಸ್ತೆ ಸಾರಿಗೆ ನಿಗಮವು ವಾಹನಗಳಿಂದ ಸಂಭವಿಸುವ ಅಪಘಾತದಿಂದ ಉಂಟಾಗುವ ಭೀಕರ ಪರಿಣಾಮಗಳು ಮತ್ತು ಅಪಘಾತಕ್ಕೆ ಒಳಗಾದವರಿಗೆ ಲಭಿಸುವ ಪರಿಹಾರ, ಸೌಲಭ್ಯಗಳು, ರಸ್ತೆ ಸುರಕ್ಷತೆ ಕುರಿತು ಜಾಗೃತಿಗಾಗಿ ನಗರದಲ್ಲಿ ಪ್ರದರ್ಶಿಸಿದ ನಾಟಕ ಪ್ರದರ್ಶನ ಮನೋಜ್ಞವಾಗಿ ಮೂಡಿಬಂದಿತು.

ಸಾರಿಗೆ ನಿಗಮದ ಕೇಂದ್ರ ಕಚೇರಿಯ ಸೂಚನೆಯಂತೆ ನಿಗಮದ ಸಾಂಸ್ಕೃತಿಕ ಕೆ.ಎಸ್‌.ಆರ್‌.ಟಿ.ಸಿ ಕಲಾವಿದರು ನಗರದ ಬಸ್‌ ಡಿಪೋ ಹಾಗೂ ಬಸ್‌ ನಿಲ್ದಾಣದಲ್ಲಿ ನಡೆಸಿಕೊಟ್ಟ ಬದುಕಿ-ಬದುಕಿಸಿ ನಾಟಕವು ಕೆ.ಎಸ್‌.ಆರ್‌.ಟಿ.ಸಿ.ಯ ಪ್ರಯಾಣಿಕ ಸುರಕ್ಷತೆ, ಸಂಚಾರ ನಿಯಮಗಳ ಪಾಲಿಸುವಿಕೆ, ವಿದ್ಯಾರ್ಥಿ ಮತ್ತು ದಿವ್ಯಾಂಗರ ಬಸ್‌ ಪಾಸ್‌, ಅಪಘಾತ ಸಂದರ್ಭದಲ್ಲಿ ದೊರೆಯುವ ಪರಿಹಾರ ಹೀಗೆ ನಿಗಮದಿಂದಾಗುವ ಅನುಕೂಲಗಳ ಬಗ್ಗೆ ಹಾಗೂ ಸಂಸ್ಥೆಯು ಸಾರ್ವಜನಿಕರಿಗೆ ನೀಡುತ್ತಿರುವ ಸೇವೆಯ ಬಗ್ಗೆ ಮಾಹಿತಿ ನೀಡುವುದರ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಜನಮನ ಗೆದ್ದರು.

ನಾಟಕ ಯಶಸ್ವಿ: ನೂರಾರು ಮಂದಿ ಪ್ರಯಾಣಿಕರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಮನಮುಟ್ಟುವಲ್ಲಿ ನಾಟಕ ಯಶಸ್ವಿಯಾಯಿತು.

ಸಹಾಯ ಮಾಡಿ: ನಾಟಕ ಉದ್ಘಾಟಿಸಿದ ಪೊಲೀಸ್‌ ಡಿವೈಎಸ್‌ಪಿ ಜೆ. ಮೋಹನ್‌ ಮಾತನಾಡಿ, ವೃತ್ತಿ ಜೀವನದಲ್ಲಿ ಉತ್ತಮ ಸಹಾಯ ಗುಣಗಳನ್ನು ಅಳವಡಿಸಿಕೊಳ್ಳಿ ಎಂದು ಸಲಹೆ ಮಾಡಿದರು.

ಸಾರ್ವಜನಿಕರು ಕೈ ಜೋಡಿಸಿ: ಇಲಾಖೆಯು ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು ಸಾರ್ವಜನಿಕರು ಕೈ ಜೋಡಿಸಿ ಸಹಕರಿಸಬೇಕಾಗಿದೆ. ಚಾಲಕರು ಮತ್ತು ಸಾರ್ವಜನಿಕರ ನಿರ್ಲಕ್ಷ್ಯದ ಬಗ್ಗೆ ನಾಟಕದಲ್ಲಿ ತಿಳಿಸಲಾಗಿದ್ದು ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಬಹಳ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

ಪೋಷಕರು ಸಹಕರಿಸಿ: ವಿಶೇಷವಾಗಿ ಪರೀಕ್ಷೆ ಸಂದರ್ಭಗಳಲ್ಲಿ ಮಕ್ಕಳು ನಿಲುಗಡೆ ಕೋರಿದ ಸ್ಥಳಗಳಲ್ಲಿ ಚಾಲಕರು ವಾಹನವನ್ನು ನಿಲ್ಲಿಸಿ, ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಜೀವನ ನಡೆಸಲು ಸಹಕರಿಸಬೇಕು ಎಂದರು.

ಜವಾಬ್ದಾರಿಯುತ ಸಂದೇಶ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ ರವಿ ಮಾತನಾಡಿ, ಬಸ್‌ನಲ್ಲಿ ಸಂಚಾರಿಸುವಾಗ ಸಾಮಾನ್ಯ ವಾಗಿ ನಡೆಯುವಂಥ ಘಟನೆಗಳನ್ನು ಗಮನಿಸಿ ಅಭಿನಯಿಸಿರುವುದನ್ನು ಕಾಣಬಹುದಾಗಿದ್ದು ಇಲಾಖೆ ತನ್ನ ಸಿಬ್ಬಂದಿಗೆ ಮತ್ತು ಸಾರ್ವಜನಿಕರಿಗೆ ನಾಟಕದ ಮೂಲಕ ಅನೇಕ ಜವಾಬ್ದಾರಿಯುತ ಸಂದೇಶಗಳನ್ನು ನೀಡಿದೆ ಎಂದರು.

ಪ್ರತಿ ಸರ್ಕಾರಿ ಬಸ್ಸಿನಲ್ಲಿರುವ ಪ್ರಥಮ ಚಿಕ್ಸಿತೆಯ ಪೆಟ್ಟಿಗೆಯನ್ನು ಅಪಘಾತದ ಸಂದರ್ಭದಲ್ಲಿ ಉಪಯೋಗಿಸಿಕೊಳ್ಳಿ ಎಂದು ಚಾಲಕ ಮತ್ತು ನಿರ್ವಾಹಕರಿಗೆ ತಿಳಿಸಿದರು. ಕೆ.ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್‌ ಮಾತನಾಡಿ, ಇಲಾಖೆಯು ನೌಕರರಿಗೆ ಯಾವ ರೀತಿ ತಮ್ಮ ಕಾರ್ಯವನ್ನು ನಿರ್ವಹಿಸಬೇಕು ಎಂಬುದರ ಬಗ್ಗೆ ತಿಳಿಸಲಾಗಿದ್ದು, ನೌಕರರಿಗೆ ಮನಮುಟ್ಟುವ ಹಾಗೇ ನಾಟಕದ ಮೂಲಕ ಪಾಲಿಸಬೇಕಿರುವ ನಿಯಮ, ಇನ್ನಿತರ ವಿಷಯಗಳನ್ನು ತಿಳಿಸ‌ಲಾಗಿದೆ ಎಂದರು.

ಪಟ್ಟಣ ಠಾಣೆ ಇನ್ಸ್‌ಪೆಕ್ಟರ್‌ ನಾಗೇಗೌಡ, ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಲೋಹಿತ್‌, ಕೆ.ಎಸ್‌.ಆರ್‌.ಟಿ.ಸಿ ವಿಭಾಗೀಯ ಸಂಚಾಲನ ಅಧಿಕಾರಿ ಪರಮೇಶ್ವರಪ್ಪ, ವಿಭಾಗೀಯ ತಾಂತ್ರಿಕ ಶಿಲ್ಪಿ ಸೂರ್ಯಕಾತ್‌, ಚಾಮರಾಜನಗರ ಘಟಕದ ವ್ಯವಸ್ಥಾಪಕ ಕುಮಾರ್‌ ನಾಯಕ್‌ ಮತ್ತು ಕೆ.ಎಸ್‌.ಆರ್‌.ಟಿ.ಸಿ ಸಾಂಸ್ಕೃತಿಕ ಕಲಾ ತಂಡದ ನಿರ್ದೇಶಕ ಬಾಲಕೃಷ್ಣ ಇದ್ದರು.

ಟಾಪ್ ನ್ಯೂಸ್

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.