ಚಲಿಸುತ್ತಿದ್ದ ಒಮ್ನಿ ಮೇಲೆ ಮರ ಬಿದ್ದು ತಂದೆ ಮಗ ದುರ್ಮರಣ
Team Udayavani, Aug 5, 2022, 7:45 PM IST
ಯಳಂದೂರು: ಸಮೀಪದ ಸಂತೇಮರಹಳ್ಳಿ ಕುದೇರು ರಸ್ತೆಯಲ್ಲಿ ಆಲದ ಮರವೊಂದು ಚಲಿಸುತ್ತಿದ್ದ ಓಮ್ನಿ ಮೇಲೆ ಬಿದ್ದ ಪರಿಣಾಮ ತಂದೆ ಮಗ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಹೊನ್ನೂರು ಗ್ರಾಮದ ರಾಜು(48) ಹಾಗೂ ಇವರ ಮಗ ಶರತ್(15)ಎನ್ನುವವರು ಮೃತ ದುರ್ದೈವಿಗಳಾಗಿದ್ದಾರೆ.
ಏಜೆನ್ಸಿಯನ್ನು ನಡೆಸುತ್ತಿದ್ದ ರಾಜು, ತಮ್ಮ ಮಗನ ಜತೆಗೂಡಿ ಕುದೇರು ಗ್ರಾಮಕ್ಕೆ ಅಂಗಡಿಗಳಿಗೆ ಪದಾರ್ಥವನ್ನು ಹಾಕಲು ತೆರಳುತ್ತಿದ್ದ ವೇಳೆಯಲ್ಲೇ ಗಾಳಿ ಬೀಸಿದ್ದರಿಂದ ದೊಡ್ಡ ಆಲದ ಮರವು ಇವರ ವಾಹನದ ಮೇಲೆ ಬಿದ್ದಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸಂತೆಮರಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?