ಆಧಾರ್‌ ಕೇಂದ್ರ ಸ್ಥಗಿತ: ಸಾರ್ವಜನಿಕರು ಪರದಾಟ


Team Udayavani, May 15, 2019, 3:00 AM IST

aadhar

ಯಳಂದೂರು: ಪಟ್ಟಣದ ತಹಶೀಲ್ದಾರ್‌ ಕಚೇರಿಯ ಪಡಸಾಲೆಯಲ್ಲಿ ಆಧಾರ್‌ ನೋಂದಣಿ ಕೇಂದ್ರ ಸ್ಥಗಿತಗೊಂಡು ನೋಂದಣಿಗೆ ಬರುವ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಳೆದ 3 ವರ್ಷಗಳ ಹಿಂದೆ ರಾಜ್ಯ ಸರ್ಕಾರವು ಎಲ್ಲಾ ತಾಲೂಕು ಕಚೇರಿಯಲ್ಲಿ ಪಡಸಾಲೆ ಹೆಸರಿನಲ್ಲಿ ಒಂದೇ ಸೂರಿನಡಿ ಎಲ್ಲಾ ಸೇವೆ ಒದಗಿಸಲು ಯೋಜನೆ ರೂಪಿಸಿತು.

ಇಲ್ಲಿ ಆಧಾರ್‌, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಪಹಣಿ ಸೇರಿದಂತೆ 100ಕ್ಕೂ ಹೆಚ್ಚು ಸೇವೆ ಒದಗಿಸಲು ಮಹತ್ವದ ಹೆಜ್ಜೆ ಇಟ್ಟು ಈ ಯೋಜನೆ ಅನುಷ್ಠಾನ ಮಾಡಲಾಗಿತ್ತು. ಆದರೆ ಈ ಪಡಸಾಲೆಯಲ್ಲಿ ಆಧಾರ್‌ ಕಾರ್ಡ್‌ ನೋಂದಣಿ, ಪಡಿತರದಾರರ ರೇಷನ್‌ ಕಾರ್ಡ್‌ ನೋಂದಣಿ ನಡೆಯುತ್ತಿಲ್ಲ. ಜೊತೆಗೆ ಕುಡಿಯುವ ನೀರು, ಶೌಚಗೃಹ ಇಲ್ಲದೇ ಹಲವು ತಿಂಗಳಿಂದಲೂ ಸಾರ್ವಜನಿಕರು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ.

ಆಧಾರ್‌ ಕಾರ್ಡ್‌ ನೋಂದಣಿ ಸ್ಥಗಿತ: ತಾಲೂಕಿನ ಪಡೆಸಾಲೆಯಲ್ಲಿ ಹಲವು ತಿಂಗಳಿಂದಲ್ಲೂ ಆಧಾರ್‌ ಕಾರ್ಡ್‌ ನೋಂದಣಿ ಸ್ಥಗಿತಗೊಂಡಿದೆ. ಇದರಿಂದ ತಾಲೂಕಿನ ಸಾರ್ವಜನಿಕರು, ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಾಲೆಗಳಿಗೆ ಸೇರಲು ಹಾಗೂ ಇತರೆ ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್‌ ಕಡ್ಡಾಯವಾಗಿ ಕೇಳುತ್ತಾರೆ.

ಆದರೆ ಬಹುತೇಕ ಆಧಾರ್‌ ಕಾರ್ಡ್‌ನಲ್ಲಿ ಹೆಸರು, ಊರು, ಫೋನ್‌ ಸಂಖ್ಯೆ ತಿದ್ದುಪಡಿ ಹೆಚ್ಚಾಗಿರುತ್ತದೆ. ಆದರೆ ಈ ಸೌಲಭ್ಯ ಸರ್ಕಾರಿ ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ಖಾಸಗಿ ಕಂಪ್ಯೂಟರ್‌ ಕೇಂದ್ರಗಳಿಗೆ ಹೋಗಿ ಹೆಚ್ಚು ಹಣ ನೀಡಿ ಸರಿಪಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡಲೇ ಆಧಾರ್‌ ನೋಂದಣಿ ಕೇಂದ್ರವನ್ನು ಪ್ರಾರಂಭ ಮಾಡಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.

ಕುಡಿಯುವ ನೀರಿನ ಸಮಸ್ಯೆ: ಪಡಸಾಲೆಗೆ ಬರುವ ಜನರಿಗೆ ಕುಡಿಯುವ ನೀರಿನ ಸೌಲಭ್ಯ ನೀಡಲು ಕಂದಾಯ ಇಲಾಖೆ ಶುದ್ಧ ಕುಡಿಯುವ ನೀರಿನ ಆರ್‌.ಒ ಯಂತ್ರವನ್ನು ಅಳವಡಿಸಿದೆ. ದಿನನಿತ್ಯ ಬರುವ ನೂರಾರು ಜನರು, ಅರ್ಜಿ ಸಲ್ಲಿಸಲು ಬರುವ ಸಾರ್ವಜನಿಕರು ಕೆಲ ಕಾಲ ಕುಳಿತುಕೊಳ್ಳಲು ಕಬ್ಬಿಣದ ಕುರ್ಚಿ, ಟಿವಿ ವ್ಯವಸ್ಥೆ ಮಾಡಿದೆ. ಆದರೆ ಟೀವಿ ನಿರುಪಯುಕ್ತವಾಗಿದ್ದು, ಕೆಲವು ಕುರ್ಚಿಗಳು ಮುರಿದು ಮೂಲೆ ಸೇರಿವೆ ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಇದ್ದೂ ಇಲ್ಲದಂತಿರುವ ಶೌಚಗೃಹ: ಇಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾಮೂಹಿಕ ಶೌಚಗೃಹ ನಿರ್ಮಿಸಲಾಗಿದೆ. ಆ ಮೂಲಕ ದಿನನಿತ್ಯ ಇಲ್ಲಿಗೆ ಬರುವ ಜನರಿಗೆ ಅನುಕೂಲ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆದರೆ ಶೌಚಗೃಹ ನಿರ್ಮಿಸಿ ಹಲವು ವರ್ಷಗಳೇ ಕಳೆದಿವೆ. ಇದು ಉಪಯೋಗಕ್ಕೆ ಬರುತ್ತಿಲ್ಲ. ಇಲ್ಲಿಗೆ ನೀರಿನ ವ್ಯವಸ್ಥೆ ಇಲ್ಲ.

ಹಲವು ಬಾರಿ ಇದರ ದುರಸ್ತಿಯನ್ನು ಮಾಡಿಸಿದ್ದರೂ ಸರಿಯಾಗಿ ಬಳಕೆಯಾಗುತ್ತಿಲ್ಲ. ದಿನನಿತ್ಯ ಅಧಿಕಾರಿಗಳು ಈ ಮೂಲಕವೇ ಓಡಾಡುತ್ತಾರೆ. ಆದರೂ ಇದರ ದುರಸ್ತಿಗೆ ಕ್ರಮ ವಹಿಸಿಲ್ಲ. ಕಚೇರಿಗಳಿಗೆ ತಮ್ಮ ಕೆಲಸಕ್ಕೆ ಬರುವ ಸಾರ್ವಜನಿಕರು ಶೌಚಕ್ಕೆ ಹೋಗಬೇಕಾದರೆ ಪರದಾಡುವಂತಾಗಿದೆ. ಇದರಿಂದ ಅನಿವಾರ್ಯವಾಗಿ ಬಯಲನ್ನೇ ಅವಲಂಬಿಸುವಂತಾಗಿದೆ. ಈಗಲಾದರೂ ಸಂಬಂಧಪಟ್ಟವರು ಈ ಬಗ್ಗೆ ಕ್ರಮ ವಹಿಸಬೇಕಿದೆ.

ಸಾರ್ವಜನಿಕರ ಆಗ್ರಹ: ತಾಲೂಕು ತಹಶೀಲ್ದಾರ್‌ ಕಚೇರಿ ಬಳಿ ಇರುವ ಪಡಸಾಲೆಯಲ್ಲಿ ಹಲವು ತಿಂಗಳಿಂದಲೂ ಕುಡಿಯುವ ನೀರು, ಕುರ್ಚಿ ಸೇರಿದಂತೆ ಸೌಲಭ್ಯಗಳಿಲ್ಲ. ಆಧಾರ್‌ ಕಾರ್ಡ್‌ ನೋಂದಣಿ ಸ್ಥಗಿತವಾಗಿದೆ, ಇದರಿಂದ ಚಿಕ್ಕ ಮಕ್ಕಳು ಹೊಸದಾಗಿ ಆಧಾರ್‌ ಮಾಡಿಸಲು ಹಾಗೂ ತಿದ್ದುಪಡಿ ಮಾಡಿಸಲು ಕಷ್ಟವಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಖಾಸಗಿ ಕಂಪ್ಯೂಟರ್‌ ಸೆಂಟರ್‌ಗಳಲ್ಲಿ ಈ ಸೇವೆ ಇದೆ ಎಂಬುದರ ಬಗ್ಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೇ ಗಮನಹರಿಸಿ ಈ ಬಗ್ಗೆ ಕ್ರಮ ವಹಿಸಲಿ ಎಂದು ಗ್ರಾಮಸ್ಥರಾದ ಪ್ರಕಾಶ್‌ ಆಗ್ರಹಿಸಿದರು.

ಕಚೇರಿಯ ಪಡೆಸಾಲೆಯಲ್ಲಿ ಶೌಚಗೃಹ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ಸೂಚಿಸುತ್ತೇನೆ, ಜೊತೆಗೆ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರದಲ್ಲಿ ಕಂಪ್ಯೂಟರ್‌ ಆಪರೇಟರ್‌ ಇಲ್ಲದ ಕಾರಣ ಇದು ಸ್ಥಗಿತಗೊಂಡಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಆಪರೇಟರ್‌ನ್ನು ನೇಮಿಸುವಂತೆ ಪತ್ರ ಬರೆದು ಕ್ರಮವಹಿಸುತ್ತೇನೆ.
-ವರ್ಷಾ, ತಹಶೀಲ್ದಾರ್‌

* ಫೈರೋಜ್‌ಖಾನ್‌

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.