ಭೂ ಸುಧಾರಣೆ ಕಾಯ್ದೆ ಕೈಬಿಡಿ
Team Udayavani, Jun 27, 2020, 4:34 AM IST
ಕೊಳ್ಳೇಗಾಲ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಹಯೋಗದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಆರ್ಎಂಸಿ ಆವರಣದಲ್ಲಿ ಸೇರಿದ ಪ್ರತಿಭಟ
ನಾಕಾರರು, ಮುಖ್ಯ ರಸ್ತೆಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಲೋಕೋ ಪಯೋಗಿ ಇಲಾಖೆ ವಸತಿ ಗೃಹಕ್ಕೆ ಆಗಮಿಸಿ ಶಾಸಕ ಮಹೇಶ್ಗೆ ಮನವಿ ಸಲ್ಲಿಸಿದರು. ಬಳಿಕ ತಾಪಂ ಆವರ ಣದಲ್ಲಿ ಹನೂರು ಶಾಸಕ ನರೇಂದ್ರರಿಗೂ ಮನವಿ ನೀಡಿ, ಶಾಸನ ಸಭೆಯಲ್ಲಿ ಚರ್ಚಿಸಿ ಕಾಯ್ದೆ ರದ್ದುಗೊಳಿಸು ವಂತೆ ಒತ್ತಾಯಿಸಿದರು. ಶಾಸಕ ಮಹೇಶ್ ಮಾತನಾಡಿ, ಭೂ ಸುಧಾರಣಾ ಕಾಯ್ದೆ ಶಾಸನ ಸಭೆಯಲ್ಲಿ ಚರ್ಚೆಗೆ ತರದೆ ಸರ್ಕಾರ ದಿಢೀರನೆ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ.
ಈ ಬಗ್ಗೆ ಶಾಸನ ಸಭೆಯಲ್ಲಿ ರೈತರ ಪರ ಧ್ವನಿ ಎತ್ತುವು ದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸೋಮಣ್ಣ, ರೈತ ಮುಖಂಡರಾದ ಶಿವಮಲ್ಲು, ನಾಗರಾಜು, ರಾಜಪ್ಪ, ಜೋಯಲ್ಸ್, ಗೋವಿಂದರಾಜು, ಚೌಡಶೆಟ್ಟಿ, ಅಣಗಳ್ಳಿ ಬಸವರಾಜು, ರಾಜೇಂದ್ರ, ಶಿವ ಕುಮಾರ್, ರವಿನಾಯ್ಡು, ತಾಲೂಕು ಅಧ್ಯಕ್ಷ ಗೌಡೇ ಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ