ಗುಂಡ್ಲುಪೇಟೆ :ಕಾಡು ಹಂದಿ ಬೇಟೆ: ಮೂವರ ಬಂಧನ
Team Udayavani, Jul 5, 2022, 6:11 PM IST
ಗುಂಡ್ಲುಪೇಟೆ (ಚಾಮರಾಜನಗರ): ಮಾಂಸಕ್ಕಾಗಿ ಕಾಡು ಹಂದಿಯನ್ನು ಕೊಂದು ಶೇಖರಿಸಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಗೋಪಾಲ ಸ್ವಾಮಿ ಬೆಟ್ಟ ವಲಯದ ಲಕ್ಕಿಪುರ ಗ್ರಾಮದ ಬಳಿ ನಡೆದಿದೆ.
ಬೇರಂಬಾಡಿ ಗ್ರಾಮದ ಸಂತೋಷ, ಕೃಷ್ಣ ಮತ್ತು ಬಂಗಾರ ಮೂವರು ಬಂಧಿತ ಆರೋಪಿಗಳು. ಇವರು ಲಕ್ಕಿಪುರದ ಲಕ್ಕಿಕಟ್ಟೆಯ ಬಳಿ ಕಾಡು ಹಂದಿ ಕೊಂದು ಅದನ್ನು ಶೇಖರಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯಲ್ಲಿ ವಲಯಾರಣ್ಯಾಧಿಕಾರಿ ನವೀನ್ ಕುಮಾರ್, ಸಿಬ್ಬಂದಿಗಳಾದ ಜ್ಞಾನಶೇಖರ, ವಿಜಯ್, ಬರ್ಕತ್ ಅಲಿ, ಮಂಜುನಾಥ್ ನಾಯಕ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ