ಬಿಆರ್‌ಟಿ ಅರಣ್ಯದಲ್ಲಿ ಕಾಡುಹುಲ್ಲು ಬೆಳೆಸಲು ಕ್ರಮ


Team Udayavani, Jun 5, 2020, 5:34 AM IST

brt-aranya

ಯಳಂದೂರು: ಜಿಲ್ಲೆಯ ಪ್ರಸಿದಟಛಿ ವನ್ಯ ಧಾಮ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ರಕ್ಷಿತ ಅರಣ್ಯ (ಬಿಆರ್‌ಟಿ) ಪ್ರದೇಶದಲ್ಲಿ ಲಂಟಾನ ಕಳೆಗಳನ್ನು ಬುಡಸಮೇತ ತೆಗೆದು ಆ ಸ್ಥಳದಲ್ಲಿ ಕಾಡು ಹುಲ್ಲು ಬೆಳೆಸುವ ಪ್ರಕ್ರಿಯೆ  ಆರಂಭಗೊಂಡಿದೆ. ಸಸ್ಯಾಹಾರಿ ಪ್ರಾಣಿಗಳನ್ನು ಹೆಚ್ಚಿಸಿದರೆ, ಎಲ್ಲಾ ಮಾಂಸಹಾರಿ ಪ್ರಾಣಿಗಳೂ ಇಲ್ಲೇ ನೆಲೆಯಾಗುತ್ತವೆ ಎಂಬ ವೈಜ್ಞಾನಿಕ ದೃಷ್ಟಿ ಕೋನದಿಂದ ಇದನ್ನು ಬೆಳೆಸುವ ಕಾರ್ಯ ಸದ್ದಿಲ್ಲದೆ ಸಾಗಿದೆ. ಈಗ ಈ ಸ್ಥಳವೆಲ್ಲಾ ಹಸಿರು ಮಯವಾಗಿದ್ದು ವಿಶ್ವ ಪರಿಸರ ದಿನಕ್ಕೆ ಸಾಕ್ಷಿಯಾಗಿದೆ.

ಹುಲ್ಲು ಬೆಳೆಸುವಿಕೆ: ಕಾಡಿಗೆ ಕಂಟಕವಾದ ಲಂಟಾನ ಬೆಳದು ಪೊದೆಗಳಾಗಿದೆ. ಇದು ಬೆಳೆದ ಸ್ಥಳದಲ್ಲಿ ಯಾವುದೇ ಹುಲ್ಲು ಬೆಳೆ ಯುವುದಿಲ್ಲ. ಅಲ್ಲದೆ ಪ್ರಾಣಿಗಳ ಸ್ವತ್ಛಂದ ಓಡಾಟಕ್ಕೂ ತೊಡಕಾಗುತ್ತದೆ. ಇಡೀ ಕಾಡನ್ನೇ ಆವರಿಸಿರುವ  ಇದನ್ನು ಹಂತಹಂತ ವಾಗಿ ತೆರವುಗೊಳಿಸಿ ಈ ಸ್ಥಳದಲ್ಲಿ ಆ ಕಾಡು ಹುಲ್ಲನ್ನು  ಬೆಳೆಸುವುದು, ಆ ಮೂಲಕ ಸಸ್ಯಾಹಾರಿ ಕಾಡು ಪ್ರಾಣಿಗಳ ಸಂಖ್ಯೆಯನ್ನು ವೃದಿಟಛಿಸುವುದು ಅರಣ್ಯ ಇಲಾಖೆ ಉದ್ದೇಶವಾಗಿದೆ.

ಕಳೆದ ವರ್ಷದಿಂದಲೇ  ಆಯ್ದ ಸ್ಥಳಗಳಲ್ಲಿ ನಡೆಯುತ್ತಿದೆ. ಆಗ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುವುದಿಲ್ಲ ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಯಳಂದೂರು ವಲಯದಲ್ಲಿ 50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಲಂಟಾನ ತೆರವುಗೊಳಿಸಿ ಹುಲ್ಲು ಬೆಳೆಸುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹುಲ್ಲು ಸಮೃದವಾಗಿ ಬೆಳೆದಿದೆ.

3 ವರ್ಷ ಅರಣ್ಯ ಇಲಾಖೆ ನಿರ್ವಹಣೆ: ಬಿಆರ್‌ಟಿ ಯಳಂದೂರು ವಲಯದಲ್ಲಿ 50 ಎಕರೆ ಪ್ರದೇಶದಲ್ಲಿ ಲಂಟಾನ ಸಸಿ ತೆರವುಗೊಳಿಸಿ ಹುಲ್ಲು ಬೆಳೆಸಲಾಗುತ್ತಿದೆ. ಈ ಸ್ಥಳದಲ್ಲಿ ಮತ್ತೆ ಬೇರೆ ಸಸ್ಯಗಳು ಬೆಳೆಯದಂತೆ 3  ವರ್ಷ ಅರಣ್ಯ  ಇಲಾಖೆಯೇ ನಿರ್ವಹಣೆ ಮಾಡಲಿದೆ. ಹುಲ್ಲು ಸಮೃದಟಛಿವಾಗಿ ಬೆಳೆದರೆ ಸಸ್ಯಹಾರಿ ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚುತ್ತದೆ.

ಜತೆಗೆ ಮಾಂಸಹಾರಿ ಪ್ರಾಣಿಗಳ ವೃದಿಯೂ ಆಗುತ್ತದೆ. ಕಾಡಿನ ಆಹಾರ ಸರಪಳಿಗೆ ಪೂರಕವಾಗಿದೆ. ಇದರ  ಪ್ರಮಾಣ ಮತ್ತಷ್ಟು ಹೆಚ್ಚಿಸುವ ಉದ್ದೇಶವೂ ಇಲಾಖೆಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಕ್ರಮ ವಹಿಸಲಾಗುವುದು ಎಂದು ಆರ್‌ಎಫ್ಒ ಮಹದೇವಯ್ಯ ತಿಳಿಸಿದ್ದಾರೆ.

* ಫೈರೋಜ್‌ಖಾನ್

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.