ಸುತ್ತೂರು ಶ್ರೀಗಳನ್ನು ಸಿಎಂ ಮಾಡಿ!
Team Udayavani, Jan 31, 2021, 1:12 PM IST
ಚಾಮರಾಜನಗರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿರುವ ಹಾಗೆ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಆಲೂರು ಮಲ್ಲು ಒತ್ತಾಯಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಮ ಸಮಾಜದ ಕನಸನ್ನು ನನಸು ಮಾಡುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿರುವ ಸುತ್ತೂರು ಶ್ರೀಗಳು ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಲು ಕಷ್ಟಪಡುವ ಕೆಲಸಗಳನ್ನು ಸುತ್ತೂರು ಶ್ರೀಗಳು ಸರಾಗವಾಗಿ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದರು.
ಇದನ್ನೂ ಓದಿ:ಸಂಘಟನೆಗಳಿಂದ ರೈಲು ತಡೆ ಚಳವಳಿ
ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಪ್ರಕಾಶ್, ಮುಖಂಡರಾದ ಹೊನ್ನೂರು ಬಸವಣ್ಣ, ಚಿನ್ನಸ್ವಾಮಿ, ವಾಸು ಇತರರು ಹಾಜರಿದ್ದರು.