ಸಮಾನತೆಯೇ ಅಂಬೇಡ್ಕರ್‌ಗೆ ನೀಡುವ ಕಾಣಿಕೆ


Team Udayavani, Apr 15, 2023, 4:11 PM IST

tdy-18

ಯಳಂದೂರು: ಸಮಾಜವನ್ನು ಸಮಾನತೆಯಿಂದ ಕಾಣುವುದು, ಎಲ್ಲರೂ ಸ್ವತಂತ್ರರಾಗಿರುವುದು, ಶೋಷಿತರು, ಶೋಷಕರು ಪರಸ್ಪರ ಗೌರವದಿಂದ ವರ್ತಿಸುವುದೇ ಅಂಬೇಡ್ಕರ್‌ ಯುಗವಾಗಿದ್ದು ಇದನ್ನು ಪರಸ್ಪರರಿಗೆ ಹಂಚಿಕೆ ಮಾಡಬೇಕು ಎಂದು ಸರ್ಕಾರಿ ಪಬ್ಲಿಕ್‌ ಶಾಲೆಯ ಉಪಪ್ರಾಂಶುಪಾಲ ನಂಜುಂಡಯ್ಯ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ. ಆರ್‌.ಅಂಬೇಡ್ಕರ್‌ 132ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಸಮ ಸಮಾಜ ನಿರ್ಮಾಣವಾಗಲಿದೆ: ಅಂಬೇಡ್ಕರ್‌ ವಾದವನ್ನು ಇಂದು ಇಡೀ ವಿಶ್ವವೇ ಒಪ್ಪಿದೆ. ಇವರ ವಾದ ಅನುಸರಿ ಸುವ ವ್ಯಕ್ತಿಗಳು ಅನ್ಯಾಯದ ವಿರುದ್ಧ ಹೋರಾಡುವ ಬದಲು, ಅನ್ಯಾಯ ಆಗದಂತೆ ನೋಡಿಕೊಳ್ಳುವ ಕೆಲಸವನ್ನು ಮಾಡಬೇಕಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆದಿದ್ದೇ ಆದಲ್ಲಿ ನಮ್ಮ ದೇಶದಲ್ಲಿ ಸಮ ಸಮಾಜ ನಿರ್ಮಾಣವಾಗಲಿದೆ. ನಾವು ಸಹೋದರತ್ವ, ಐಕ್ಯತೆ ಹಾಗೂ ಸಾರ್ವಭೌಮತ್ವವನ್ನು ಕಾಪಾಡುವ ಗುರಿಯನ್ನು ಇಟ್ಟುಕೊಳ್ಳಬೇಕು. ಅಂಬೇಡ್ಕರ್‌ ಜೀವನ ಚರಿತ್ರೆಯೇ ನಮಗೆ ಪಾಠವಾಗಬೇಕು, ಶಿಕ್ಷಣವಂಚಿತರಾಗಿ ಯಾರೂ ಇರಬಾರದು ಎಲ್ಲಾ ಸಮಾಜವನ್ನು ಸರಿಸಮಾನವಾಗಿ ನಡೆಸಿಕೊಳ್ಳುವ ಕೆಲಸವಾಗಬೇಕು, ಇವರ ಪ್ರತಿಯೊಂದು ಆಲೋಚನೆಗಳೂ ವೈಜ್ಞಾನಿವಾಗಿತ್ತು. ಆದರೆ ನಾವು ಇನ್ನೂ ಕೆಲವೆಡೆ ಮೌಡ್ಯತೆಯನ್ನು ಆಚರಿಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದೇವೆ. ಇಂತಹ ಆಚರಣೆಗಳ ನಿರ್ಮೂಲನೆ ನಮ್ಮ ಕರ್ತವ್ಯವಾಗಿದೆ. ಜ್ಞಾನವನ್ನು ಬಿತ್ತರಿಸುವ ಕೆಲಸವನ್ನು ಮಾಡಬೇಕಿದೆ ಎಂದರು.

ನಮ್ಮ ಸಂವಿಧಾನ ಜಗತ್ತಿಗೆ ಮಾದರಿ: ತಹಶೀಲ್ದಾರ್‌ ಶ್ರೀಶೈಲ ಯಮನಪ್ಪ ತಳವಾರ್‌ ಮಾತನಾಡಿ, ನಮ್ಮ ದೇಶವನ್ನು ಕಟ್ಟುವುದರಲ್ಲಿ ಅಂಬೇಡ್ಕರ್‌ ಅಗ್ರಗಣ್ಯ ನಾಯಕರಾಗಿದ್ದಾರೆ. ನಮ್ಮ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ದೇಶದಲ್ಲಿ ಸಾಮಾಜಿಕ, ಆರ್ಥಿಕ ಅಸಮಾನತೆ ತೊಲಗಬೇಕಿದೆ, ಶೋಷಿತರ ಸಬಲೀಕರಣ ವಾಗಬೇಕಿದೆ, ಶಿಕ್ಷಣ, ರಾಜಕೀಯ, ಉದ್ಯೋಗಗಳಲ್ಲಿ ಈ ಸಮಾಜ ಪ್ರಬಲವಾಗಬೇಕಿದೆ. ಅಂಬೇಡ್ಕರ್‌ ಜಯಂತಿ ಆಚರಣೆಯ ಜೊತೆಗೆ ಇವರನ್ನು ಅನುಕರಣೆ ಮಾಡುವ ಪರಿಪಾಠವನ್ನು ಕಲಿಯುವಂತಾಗಬೇಕು ಎಂದು ತಿಳಿಸಿದರು. ಇದಕ್ಕೂ ಮುಂಚೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಭವನದ ಮುಂಭಾಗದ ಅಂಬೇಡ್ಕರ್‌ ಪ್ರತಿಮೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಮಾಲಾರ್ಪಣೆ ಮಾಡಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ಶಾಸಕ ನಮನ: ಶಾಸಕ ಎನ್‌.ಮಹೇಶ್‌ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ತಮ್ಮ ಬೆಂಬಲಿಗರೊಂದಿಗೆ ಪಟ್ಟಣವೂ ಸೇರಿದಂತೆ ತಾಲೂಕಿನ ಮಾಂಬಳ್ಳಿ, ಹೊನ್ನೂರು ಗ್ರಾಮಗಳಲ್ಲಿ ರುವ ಅಂಬೇಡ್ಕರ್‌ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅಂಬೇಡ್ಕರ್‌ಗೆ ನಮಿಸಿದರು.

ವಿವಿಧೆಡೆ ಸಂಭ್ರಮದ ಅಂಬೇಡ್ಕರ್‌ ಜಯಂತಿ, ಬಸ್‌ಗಳಲ್ಲೂ ಅಂಬೇಡ್ಕರ್‌ಗೆ ಅಲಂಕಾರ: ಪಟ್ಟಣವೂ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಯನ್ನು ಸಂಭ್ರಮ, ಸಡಗರಗಳಿಂದ ಆಚರಣೆ ಮಾಡಲಾಯಿತು. ಮಾಂಬಳ್ಳಿ, ಹೊನ್ನೂರು, ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಅಂಬೇಡ್ಕರ್‌ ಪ್ರತಿಮೆಗಳು, ಭಾವಚಿತ್ರಗಳಿಗೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೆಲವು ಖಾಸಗಿ ಬಸ್ಸುಗಳ ಮಾಲೀಕರು, ಚಾಲಕರು ತಮ್ಮ ಬಸ್ಸುಗಳನ್ನು ತಳಿರು ತೋರಣ, ಪುಷ್ಪಗಳಿಂದ ಅಲಂಕರಿಸಿ ಅಂಬೇಡ್ಕರ್‌ ಭಾವಚಿತ್ರವನ್ನಿಟ್ಟು ಜಯಂತಿ ಆಚರಣೆ ಮಾಡುವ ಮೂಲಕ ಗಮನ ಸೆಳೆದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.