ಅಂಬೇಡ್ಕರ್‌ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ


Team Udayavani, Feb 23, 2020, 3:00 AM IST

ambedkar

ಚಾಮರಾಜನಗರ: ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗುವ ನಿಟ್ಟಿನಲ್ಲಿ ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮಗಾರಿ ವೈಜ್ಞಾನಿಕವಾಗಿರಲಿ: ಅಧಿಕಾರಿಗಳ ತಂಡದೊಂದಿಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರವಿ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳ ಸಂಪೂರ್ಣ ವಿವರವನ್ನು ಪಡೆದುಕೊಂಡರು. ವಿಶೇಷ ಅನುದಾನದಡಿ ಕೈಗೊಳ್ಳಲಾಗಿರುವ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿಯವರು, ಪ್ರಮುಖವಾಗಿ ಕ್ರೀಡಾಂಗಣಕ್ಕೆ ನೀರು ನುಗ್ಗದಂತೆ ಒಳಚರಂಡಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಹೊನಲು ದೀಪಗಳನ್ನು ಅಳವಡಿಸಬೇಕು. ಇತರೆ ವಿದ್ಯುತ್‌ ದೀಪಗಳು ಸಹ ಇರುವಂತೆ ವ್ಯವಸ್ಥೆ ಕೈಗೊಳ್ಳಲು ಸೂಚನೆ ನೀಡಿದರು.

ಜನರ ಅನುಕೂಲಕ್ಕೆ ಸೌಲಭ್ಯ ಕಲ್ಪಿಸಿ: ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿರಬೇಕು. ವಾಲಿಬಾಲ್‌, ಕಬ್ಬಡಿ, ಖೋ-ಖೋ ಹೊರಾಂಗಣ ಆಟಗಳಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಉಳಿದ ಇತರೆ ಆಟೋಟಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ಕೆಲಸ ನಿರ್ವಹಣೆ ಮಾಡಬೇಕು. ಕ್ರೀಡಾಂಗಣಕ್ಕೆ ಬೆಳಿಗ್ಗೆ ಬರುವ ವಾಯುವಿಹಾರಿಗಳಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಗಣ್ಯರ ಪ್ರವೇಶಕ್ಕೆ ಸೂಕ್ತ ದ್ವಾರ ಅಗತ್ಯ: ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ನೆರಳಿನ ವ್ಯವಸ್ಥೆಯಾಗಬೇಕು. ಕ್ರೀಡಾಂಗಣವು 20 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಆದರೆ, ಪ್ರವೇಶ ದ್ವಾರ ಒಂದೇ ಇದೆ. ಗಣ್ಯ ವ್ಯಕ್ತಿಗಳ ಪ್ರವೇಶಕ್ಕೂ ಯಾವುದೇ ಪ್ರತ್ಯೇಕ ಪ್ರವೇಶ ದ್ವಾರ ನಿರ್ಮಿಸಲಾಗಿಲ್ಲ. ಪ್ರೇಕ್ಷಕರ ಸಾಮರ್ಥ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಮತ್ತೂಂದು ಪ್ರವೇಶ ದ್ವಾರಕ್ಕೆ ಅವಕಾಶ ಕಲ್ಪಿಸಬೇಕು. ಗಣ್ಯರ ಪ್ರವೇಶಕ್ಕೂ ಸೂಕ್ತ ದ್ವಾರಕ್ಕೆ ಅವಕಾಶವಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಸಿರೀಕರಣಗೊಳಿಸಿ: ಕ್ರೀಡಾಂಗಣದ ಸುತ್ತಲೂ ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದಿಂದ ಗಿಡಗಳನ್ನು ಹಾಕುವ ಮೂಲಕ ಹಸಿರೀಕರಣಗೊಳಿಸಬೇಕು. ಕ್ರೀಡಾಂಗಣದ ಸುತ್ತ-ಮುತ್ತಲಿನ ಪರಿಸರ ಉತ್ತಮವಾಗಿರಬೇಕು. ತ್ವರಿತಗತಿಯಲ್ಲಿ ಕ್ರೀಡಾಂಗಣದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಕ್ರೀಡಾಂಗಣದ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಡೀಸಿ, ಗುಣಮಟ್ಟದ ಕೆಲಸವಾಗಬೇಕು. ರಸ್ತೆಯ ಇಕ್ಕೆಲಗಳಲ್ಲಿ ಗಿಡಗಳನ್ನು ಬೆಳಸಬೇಕು. ನೆರಳು ಹಾಗೂ ಜೈವಿಕ ಇಂಧನ ನೀಡುವ ಪರಿಸರ ಸ್ನೇಹಿ ಗಿಡಗಳನ್ನು ನೆಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಸುರೇಂದ್ರ, ನಗರಸಭೆ ಪೌರಾಯುಕ್ತ ರಾಜಣ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಎಂ.ಚಲುವಯ್ಯ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.