ಬೀದಿನಾಯಿಗಳ ಹಾವಳಿಯಿಂದ ಜನತೆಗೆ ಆತಂಕ


Team Udayavani, Nov 7, 2019, 3:00 AM IST

bidi-nayi-hava

ಕೊಳ್ಳೇಗಾಲ: ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಎಲ್ಲಿ ಜನರ ಮೇಲೆ ಬೀಳುತ್ತದೆಯೋ ಎಂದು ಭಯಭೀತರಾಗಿದ್ದಾರೆ. ನಗರಸಭೆಯ ಅಧಿಕಾರಿಗಳು ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಿ, ಭಯಭೀತರಾಗಿರುವ ಸಾರ್ವಜನಿಕರು ಧೈರ್ಯದಿಂದ ಸಂಚಾರಿಸುವಂತೆ ಮಾಡಬೇಕಾಗಿದೆ.

ಪಟ್ಟಣದ ನಗರಸಭೆಯಲ್ಲಿ 31 ವಾರ್ಡ್‌ಗಳಿದ್ದು, ಎಲ್ಲಾ ವಾರ್ಡ್‌ಗಳಲ್ಲಿ ಬೀದಿನಾಯಿಗಳ ಉಪಟಳ ಹೆಚ್ಚಾಗಿದೆ. ಬೀದಿ, ಬೀದಿಯಲ್ಲಿ ನಾಯಿಗಳ ಕಾಟ ತಾಳಲಾರದೇ ಹಲವರು ಭಯಭೀತರಾಗಿದ್ದಾರೆ. ಮತ್ತೆ ಕೆಲವರು ರಸ್ತೆಯಲ್ಲಿ ಸೈಕಲ್‌ ಮತ್ತು ಬೈಕ್‌, ಇನ್ನಿತರ ವಾಹನಗಳಲ್ಲಿ ಚಲಿಸುವಾಗಲೂ ನಾಯಿಗಳು ಅಡ್ಡ ಬರುವುದೆ ಎಂದು ಭಯದಿಂದಲೇ ಓಡಾಡಿಸುವಂತೆ ಆಗಿದೆ.

ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು: ಕಳೆದ ಐದಾರು ವರ್ಷಗಳಿಂದ ಬೀದಿನಾಯಿಗಳ ಉಪಟಳ ಉಲ್ಬಣದಿಂದಾಗಿ ಎಲ್ಲೆಲ್ಲೂ ನಾಯಿಗಳು ಹೆಚ್ಚಾಗಿದೆ. ಇದರ ನಿಯಂತ್ರಣವನ್ನು ಅಧಿಕಾರಿಗಳು ಮಾಡದೇ ಕಣ್ಣಿದ್ದು, ಕುರುಡರಂತೆ ನಾಯಿಗಳ ದಂಡನ್ನು ವೀಕ್ಷಿಸುತ್ತಾ ನಿಯಂತ್ರಣ ಮಾಡುವಲ್ಲಿ ಮೀನಾಮೇಷ ಎಸಗುತ್ತಿದ್ದಾರೆ.

ಕಾಡಿಗೆ ನಾಯಿಗಳು: ಹಲವಾರು ವರ್ಷಗಳ ಹಿಂದೆ ನಗರಸಭೆಯ ಅಧಿಕಾರಿಗಳು ನಾಯಿಯನ್ನು ಹಿಡಿದು ಚುಚ್ಚು ಮದ್ದು ನೀಡಿ ಕೊಲ್ಲುತ್ತಿದ್ದರು. ನಂತರ ಪ್ರಾಣಿಗಳ ಮೇಲೆ ದಯ ಇಟ್ಟ ಅಧಿಕಾರಿಗಳು ಹಿಡಿದು ರಾಶಿ ರಾಶಿ ನಾಯಿಗಳನ್ನು ಕಾಡಿಗೆ ಬಿಡುವ ಮೂಲಕ ನಿಯಂತ್ರಣ ನಡೆಯುತ್ತಿತ್ತು. ಆದರೆ, ಈ ಕಾರ್ಯ ಸಂಪೂರ್ಣ ನೆಲೆಕಚ್ಚಿದೆ.

ರಾತ್ರಿ ನಿದ್ದೆಗೆ ತೊಂದರೆ: ಪಟ್ಟಣದಲ್ಲೆಡೆ ನಾಯಿಗಳ ಸಂಖ್ಯೆ ಉಲ್ಬಣಗೊಂಡಿದ್ದು, ಇಡೀ ರಾತ್ರಿಯ ಹೊತ್ತು ಬೊಗಳುವುದರಿಂದ ವೃದ್ಧರು, ಹೃದಯ ಖಾಯಿಲೆಗೆ ಒಳಗಾದವರು ಮತ್ತು ಸಣ್ಣ ಮಕ್ಕಳು ನಿದ್ರೆಯಿಂದ ಎದ್ದಿ, ಇಡೀ ರಾತ್ರಿ ನಿದ್ರೆ ಮಾಡದೇ ಪರಿತಪಿಸುವಂತಹ ವಾತವರಣ ನಾಯಿಗಳಿಂದ ನಿರ್ಮಾಣವಾಗಿದೆ.

ರಸ್ತೆ ಅಪಘಾತ: ಬೀದಿನಾಯಿಗಳ ಹಿಂಡು ರಸ್ತೆಯಲ್ಲೇ ಹೆಚ್ಚಾಗಿ ಇರುವುದರಿಂದ ರಸ್ತೆಯಲ್ಲಿ ಬರುವ ವಾಹನಗಳಿಗೂ ದಾರಿ ಬಿಡುತ್ತಿಲ್ಲ. ಗುಂಪು ಗುಂಪಾಗಿ ನಿಲ್ಲುವುದರಿಂದ ಹಲವು ಬೈಕ್‌ ಸವಾರರು ನಾಯಿಗಳಿಗೆ ಗುದ್ದಿಸಿ, ರಸ್ತೆಯಲ್ಲಿ ಬಿದ್ದು, ತೀವ್ರಗಾಯಗೊಂಡಿದ್ದು, ಹಲವು ಘಟನೆಗಳು ಜರುಗಿರುವ ನಿರ್ದೇಶನ ಪಟ್ಟಣದಲ್ಲಿ ಇದೆ.

ಭಯಪಡುವ ವಿದ್ಯಾರ್ಥಿಗಳು: ಮುಖ್ಯ ರಸ್ತೆಗಳಲ್ಲಿ ಶಾಲೆ, ಕಾಲೇಜಿಂದ ನಡೆದು ಬರುವ ವಿದ್ಯಾರ್ಥಿಗಳು, ನಾಯಿಗಳ ಹಿಂಡು ಕಂಡು ಎಲ್ಲಿ ಕಚ್ಚಿ ಬಿಡುತ್ತದೆಯೋ ಎಂದು ಭಯಭೀತರಾಗಿ, ನಾಯಿಗಳಿಗೆ ರಸ್ತೆಯನ್ನು ಬಿಟ್ಟು, ರಸ್ತೆ ಬದಿಯಲ್ಲಿ ಅಂಜಿ ಹೋಗುವಂತಹ ಪರಿಸ್ಥಿತಿ ವಿದ್ಯಾರ್ಥಿಗಳಿಗೆ ಎದುರಾಗಿದೆ.

ಇನ್ನು ಮುಂದೆಯಾದರೂ ನಗರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು, ವಿವಿಧ ಬಡಾವಣೆಗಳಲ್ಲಿ ಹೆಚ್ಚಿರುವ ನಾಯಿಗಳ ಉಪಟಳವನ್ನು ನಿಯಂತ್ರಣ ಮಾಡಿ ಭಯಭೀತರಾಗಿರುವ ಸಾರ್ವಜನಿಕರಿಗೆ, ಮಕ್ಕಳಿಗೆ ಮತ್ತು ವಾಹನ ಸವಾರರಿಗೆ ಅನುಕೂಲ ಕಲ್ಪಿಸುವರೇ ಎಂದು ಕಾದು ನೋಡಬೇಕಾಗಿದೆ.

ಬೀದಿನಾಯಿಯನ್ನು ಬೇರೆಡೆ ಸಾಗಿಸಲಾಗದ ದುಸ್ಥಿತಿ: ಈ ಹಿಂದೆ ನಗರಸಭೆ ವತಿಯಿಂದ ಬೀದಿನಾಯಿಗಳಿಗೆ ಚುಚ್ಚು ಮದ್ದುಗಳನ್ನು ಹಾಕಿ, ಕೊಲ್ಲಲಾಗುತ್ತಿತ್ತು. ನಂತರ ನಾಯಿಗಳನ್ನು ಹಿಡಿದು ಕಾಡಿಗೆ ಬಿಡಲಾಗುತ್ತಿತ್ತು. ಇದನ್ನು ಕಂಡ ಪ್ರಾಣಿ ದಯಾಳು ಸಂಘದವರು, ನಗರಸಭೆಯ ಅಧಿಕಾರಿಗಳ ಮೇಲೆ ದೂರುಗಳನ್ನು ಸಲ್ಲಿಸಿ, ನಾಯಿಗಳನ್ನು ಕೊಲ್ಲದಿರಲು ಮತ್ತು ಹಿಡಿದು ಬೇರೆಡೆಗೆ ಸಾಗಿಸಬಾರದು ಎಂದು ನ್ಯಾಯಾಲಯಗಳಲ್ಲಿ ಮೊಕದ್ದಮೆ ನೀಡಿದ ಹಿನ್ನಲೆಯಲ್ಲಿ ಬೀದಿನಾಯಿಯನ್ನು ಕೊಲ್ಲಲಾಗದೆ, ಬೇರೆಡೆಗೆ ಸಾಗಿಸಲಾಗದ ದುಸ್ಥಿತಿ ಎದುರಾಗಿದೆ ಎಂದು ನಗರಸಭೆಯ ಪೌರಾಯುಕ್ತ ನಾಗಶೆಟ್ಟಿ ತಿಳಿಸಿದ್ದಾರೆ.

ನಗರಸಭೆಯ ಅಧಿಕಾರಿಗಳು ನಾಯಿಗಳ ಸಂತಾನಹರಣ ಮಾಡಲು ಸೂಚಿಸಿದರೆ, ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪಶು ವೈದ್ಯ ಇಲಾಖೆ ಸಿದ್ಧವಾಗಿದೆ.
-ಡಾ.ವೆಂಕಟರಾಮು, ಸಹಾಯಕ ನಿರ್ದೇಶಕ, ಪಶು ವೈದ್ಯ ಇಲಾಖೆ

* ಡಿ ನಟರಾಜು

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.