Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
Team Udayavani, Jun 1, 2023, 1:51 PM IST
ಚಾಮರಾಜನಗರ: ಇಲ್ಲಿನ ಭೋಗಾಪುರ ಗ್ರಾಮದಲ್ಲಿ ನಡೆದ ಲಘು ವಿಮಾನ ದುರಂತದಲ್ಲಿ ಗಾಯಗೊಂಡ ಇಬ್ಬರು ಪೈಲಟ್ ಗಳನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಬಂದ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ಇಬ್ಬರನ್ನೂ ಕರೆದುಕೊಂಡು ಹೋಗಲಾಗಿದೆ.
ವಿಮಾನದಲ್ಲಿದ್ದ ತರಬೇತುದಾರ ವಿಂಗ್ ಕಮಾಂಡರ್ ತೇಜಪಾಲ್ (50 ವ) ಮತ್ತು ತರಬೇತಿ ಪಡೆಯುತ್ತಿದ್ದ ಭೂಮಿಕಾ (28) ಅವರು ಪತನದ ವೇಳೆ ಪ್ಯಾರಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ವಿಂಗ್ ಕಮಾಂಡರ್ ತೇಜಪಾಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಎಎಸ್ಪಿ ಉದೇಶ ‘ಉದಯವಾಣಿ’ಗೆ ತಿಳಿಸಿದರು. ಬೆಂಗಳೂರಿನಿಂದ ಬಂದ ವಾಯುಪಡೆ ಹೆಲಿಕಾಪ್ಟರ್ ಇಬ್ಬರನ್ನು ಕರೆದುಕೊಂಡು ಹೋಗಿದೆ.
ಭಾರತೀಯ ವಾಯು ಸೇನೆಯ ತರಬೇತಿ ವಿಮಾನವು ಇಂದು ಮಧ್ಯಾಹ್ನ 12 ಗಂಟೆಯ ವೇಳೆ ಭೋಗಾಪುರ ಗ್ರಾಮದ ಬಳಿ ಪತನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ