ಹಕ್ಕು, ಆಕ್ಷೇಪಣೆ ಸಲ್ಲಿಕೆಗೆ ಜಾಗೃತಿ ಮೂಡಿಸಿ


Team Udayavani, Dec 30, 2019, 3:00 AM IST

hakku-ak

ಚಾಮರಾಜನಗರ: ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹಕ್ಕು, ಆಕ್ಷೇಪಣೆಗಳನ್ನು ಸಲ್ಲಿಸಲು ಜ. 15ರ ವರೆಗೂ ಕಾಲಾವಕಾಶ ನೀಡಲಾಗಿದೆ. ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲು ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಸಂಬಂಧ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಟ್ಟಿಯ ವಿಶೇಷ ಪರಿಷ್ಕರಣೆ: ಜಿಲ್ಲೆಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಡಿ.16ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು, ಆಕ್ಷೇಪಣೆಗಳನ್ನು ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಬಿ.ಎಲ್‌.ಒ ಮೂಲಕ ಹಾಗೂ ಆಯಾ ತಾಲೂಕು ಕಚೇರಿಯಲ್ಲಿ ಜ.15ರ ವರೆಗೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಪ್ರಚಾರಪಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದರು.

ಬದಲಾವಣೆಗೆ ಅವಕಾಶ: ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಹಾಗೂ ಹೆಸರು ಸರಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಮನೆ ನಂಬರ್‌ ಸರಿ ಇಲ್ಲದಿದ್ದಲ್ಲಿ, ಮತದಾರರ ಹೆಸರು ತಪ್ಪಿದ್ದಲ್ಲಿ, ಭಾವಚಿತ್ರ ಅದಲು- ಬದಲು ಆಗಿದ್ದಲ್ಲಿ, ಫೋಟೋ ಇದ್ದು ಎಪಿಕ್‌ ನಂಬರ್‌ ಇಲ್ಲದಿದ್ದಲ್ಲಿ, ಸಂಬಂಧಿಯ ಹೆಸರು ತಪ್ಪಾಗಿದ್ದಲ್ಲಿ, ಸರಿಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ರಾಜಕೀಯ ಪಕ್ಷಗಳು ಅರಿವು ಮೂಡಿಸಿ: ಜಿಲ್ಲೆಯಲ್ಲಿ 18ರಿಂದ 19ರ ವಯೋಮಾನದ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಸಹ ರಾಜಕೀಯ ಪಕ್ಷಗಳು ಅರಿವು ಮೂಡಿಸಬೇಕಿದೆ. ಹಕ್ಕು, ಆಕ್ಷೇಪಣೆಯಡಿಯಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಜನವರಿ 27ರೊಳಗೆ ಇತ್ಯರ್ಥಪಡಿಸಲಾಗುವುದು. ಬಳಿಕ ಫೆಬ್ರವರಿ 4ರೊಳಗೆ ಮತದಾರರ ಪಟ್ಟಿಗೆ ಹೆಸರು, ಫೋಟೋ ಸೇರ್ಪಡಿಸಿ ಪೂರಕ ಪಟ್ಟಿಯನ್ನು ಸಿದ್ಧಪಡಿಸಿ, ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರವರಿ 7ರಂದು ಪ್ರಕಟಿಸಲಾಗುವುದು. ಹೀಗಾಗಿ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವ ಬಗ್ಗೆ ಹಾಗೂ ಎಲ್ಲಾ ಮಾಹಿತಿಗಳು ನಿಖರವಾಗಿರುವ ಬಗ್ಗೆ ತ್ವರಿತವಾಗಿ ಪರಿಶೀಲಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂನತೆಗಳನ್ನು ಸರಿಪಡಿಸಿ: ಮಹಿಳಾ ಮತದಾರರ ವಯಸ್ಸು 30 ವರ್ಷಕ್ಕಿಂತ ಹೆಚ್ಚಿದ್ದು, ಪಟ್ಟಿಯಲ್ಲಿ ಸಂಬಂಧ ತಂದೆ ಎಂದು ಇರುವುದನ್ನು ಪರಿಶೀಲಿಸುವುದು, ಮಹಿಳಾ ಮತದಾರರು ಹೆಚ್ಚಿರುವ ಭಾಗಗಳನ್ನು ಪರಿಶೀಲನೆ ನಡೆಸಿ, ನ್ಯೂನತೆಗಳನ್ನು ಸರಿಪಡಿಸುವುದು, ಎರಡು ಕಡೆ ಹೆಸರುಗಳು ಪುನರಾವರ್ತಿತವಾಗಿರುವ ಹಾಗೂ ಮೃತರ ಹೆಸರನ್ನು ಕೈಬಿಡುವ ವಿಷಯದಲ್ಲಿ ಕ್ರಮ ವಹಿಸಬೇಕು. ಅಲ್ಲದೇ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಉಳಿದಿರುವ ತೃತೀಯ ಲಿಂಗಿಗಳು ಹಾಗೂ ವಿಕಲಚೇತನರ ಹೆಸರನ್ನು ಸೇರಿಸಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಿ: 18-19ರ ವಯೋಮಿತಿಯ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಜನವರಿ 6, 7, 8ರಂದು ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಜತೆಗೆ ರಾಜಕೀಯ ಪಕ್ಷಗಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಮಟ್ಟದ ಏಜೆಂಟ್‌(ಬಿ.ಎಲ್‌.ಎ)ಗಳನ್ನು ನೇಮಕ ಮಾಡಿ, ಮತಗಟ್ಟೆ ಮಟ್ಟದ ಅಧಿಕಾರಿ(ಬಿ.ಎಲ್‌.ಓ)ಗಳ ಜತೆ ನೇರ ಸಂಪರ್ಕದಲ್ಲಿದ್ದು, ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಹಕರಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರಡು ಮತದಾರರ ಪಟ್ಟಿಯ ಪ್ರತಿಯನ್ನು ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ. ರಮೇಶ್‌, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಪರಶಿವಮೂರ್ತಿ, ಗುರುಸ್ವಾಮಿ, ಸಿ.ಎಂ.ಕೃಷ್ಣಮೂರ್ತಿ, ಬ್ಯಾಡಮೂಡ್ಲು ಬಸವಣ್ಣ, ರವಿ ಮೌರ್ಯ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.