ಅರಣ್ಯಾಧಿಕಾರಿ ವಿರುದ್ಧ ಬಾರುಕೋಲು ಚಳವಳಿ; ಒಕ್ಕಲೆಬ್ಬಿಸಲು ಹುನ್ನಾರ
ಡಿ.11ರಂದು ಜಿಲ್ಲಾ ಉಸ್ತುವಾರಿ ಸಚಿವ ಜಾಗೇರಿಗೆ ಆಗಮಿಸಲಿದ್ದು ಅಲ್ಲಿ ರೈತರ ಸಮಸ್ಯೆ ಪರಿಹರಿಸಬೇಕು.
Team Udayavani, Dec 9, 2022, 5:40 PM IST
ಕೊಳ್ಳೇಗಾಲ: ತಾಲೂಕಿನ ಜಾಗೇರಿ ಸಮೀಪದ ಬೂದಗಟ್ಟೆ ದೊಡ್ಡಿ ರೈತ ಮುಖಂಡರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದನ್ನು ಖಂಡಿಸಿ ಅಧಿಕಾರಿಗಳ ವಿರುದ್ಧ ಬಾರುಕೋಲು ಚಳವಳಿಯನ್ನು ರೈತ ಮುಖಂಡರು ಗುರುವಾರ ನಡೆಸಿದರು.
ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತ ಮುಖಂಡರು ನಗರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾವಣೆಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಡಾ.ಅಂಬೇಡ್ಕರ್, ಡಾ.ರಾಜ್ಕುಮಾರ್ ರಸ್ತೆ, ಐಬಿ ರಸ್ತೆ, ಆರ್ ಎಂಸಿ ರಸ್ತೆಯ ಮೂಲಕ ಉಪ ಅರಣ್ಯ ಸಂರಕ್ಷಣೆ ಅಧಿಕಾರಿಗಳ ಕಚೇರಿಗೆ ಬಂದು ಸೇರಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ರೈತ ಮುಖಂಡರು ಸಮಸ್ಯೆಯನ್ನು ಆಲಿಸದೇ ಡಿಎಫ್ಒ ಸಂತೋಷ್ ಫಲಾಯಾನ ಮಾಡುವ ಮೂಲಕ ರೈತರಿಗೆ ದ್ರೋಹ ಎಸಗಿದ್ದಾರೆಂದು ಆರೋಪಿಸಿದರು.ಡಿ.12ರಂದು ಹನೂರು ತಾಲೂಕಿಗೆ ಮುಖ್ಯಮಂತ್ರಿಬರಲಿದ್ದು, ಅಂದು ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಿ ಸಮಸ್ಯೆ ಪರಿಹರಿಸುವಂತೆ ಧರಣಿ ನಡೆಸುವುದಾಗಿ ಹೇಳಿದರು.
ಡಿ.11ರಂದು ಜಿಲ್ಲಾ ಉಸ್ತುವಾರಿ ಸಚಿವ ಜಾಗೇರಿಗೆ ಆಗಮಿಸಲಿದ್ದು ಅಲ್ಲಿ ರೈತರ ಸಮಸ್ಯೆ ಪರಿಹರಿಸಬೇಕು. ಇಲ್ಲವಾದ ಪಕ್ಷದಲ್ಲಿ ಮುಖ್ಯಮಂತ್ರಿಗಳ ವಿರುದ್ಧವೇ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಚಳವಳಿಯಲ್ಲಿ ಉಪಾಧ್ಯಕ್ಷ ಮಹೇಶ್ ಪ್ರಭು,ರಾಜ್ಯ ಸಮಿತಿ ಸದಸ್ಯ ಪ್ರಸನ್ನ ಗೌಡ, ಮೈಸೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕುಮಾರ್, ಮುಖಂಡರಾದ ಸಿದ್ದರಾಜು, ಶೈಲೇಂದ್ರ, ಸಂತೋಷ್, ಬಸವರಾಜು, ರೈತ ಮುಖಂಡರು, ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು
ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ