ಬಕ್ರೀದ್‌: ಕುರಿ, ಮೇಕೆಗೆ ಬೇಡಿಕೆ ಹೆಚ್ಚು


Team Udayavani, Aug 6, 2019, 3:00 AM IST

bakrid

ಸಂತೆಮರಹಳ್ಳಿ: ತ್ಯಾಗ ಬಲಿದಾನಗಳು ಸಂಕೇತವಾಗಿ ಮುಸ್ಲಿಮರು ಆಚರಿಸುವ ಬಕ್ರೀದ್‌ ಹಬ್ಬಕ್ಕೆ ಇನ್ನೊಂದು ವಾರ ಬಾಕಿ ಇದೆ. ಹಾಗಾಗಿ ಮಾರುಕಟ್ಟೆಯಲ್ಲಿ ಕುರಿಗಳ ಬೆಲೆ ಏಕಾಏಕಿ ಏರಿಕೆಯಾಗಿದೆ.

ಬಕ್ರೀದ್‌ನಲ್ಲಿ ಬೇಡಿಕೆ ಹೆಚ್ಚು: ಬಕ್ರೀದ್‌ ಹಬ್ಬದಲ್ಲಿ ಕುರಿಗಳಿಗೆ ಬಹುಬೇಡಿಕೆ. ಬಂಡೂರು, ಕಿರುಗಾವಲು ಕುರಿಗಳ ಜೊತೆಯಲ್ಲಿ ಮೇಕೆಗಳಿಗೂ ಬೇಡಿಕೆ ಹೆಚ್ಚಿದೆ. ಚಿಕ್ಕ ತಾಲೂಕು ಹಾಗೂ ಪಟ್ಟಣವಾಗಿರುವ ಯಳಂದೂರಿನಲ್ಲೇ ನೂರಾರು ಕುರಿಗಳು ಪ್ರತಿನಿತ್ಯ ಮಾರಾಟವಾಗುತ್ತವೆ. ಇದಕ್ಕೆ ಮಾರುಕಟ್ಟೆಯಾಗಿ ಪಕ್ಕದ ಸಂತೆಮರಹಳ್ಳಿ ಸಂತೆ ಹಾಗೂ ಗ್ರಾಮೀಣ ಪ್ರದೇಶದ ರೈತರಿಂದಲೇ ಹೆಚ್ಚು ಕುರಿಗಳು ಮಾರಾಟವಾಗುತ್ತವೆ. ಒಂದು ಕುರಿ ತೂಕಕ್ಕೆ ತಕ್ಕಂತೆ 10 ರಿಂದ 25 ಸಾವಿರ ರೂ. ವರೆಗೂ ಮಾರಾಟವಾಗುತ್ತವೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕುರಿ ಮಾಂಸದ ದರ 450 ರಿಂದ 500 ರೂ. ವರೆಗೆ ಇದೆ. ಆದರೆ ಕುರಿ ಕೊಂಡುಕೊಳ್ಳುವವರು ಇಡೀ ಉಂಡೆ ಕುರಿಯನ್ನೇ ತೂಕಕ್ಕೆ ಹಾಕಿ ಕಿಲೋಗೆ 1 ಸಾವಿರದಂತೆ ಬೆಲೆ ನಿಗದಿ ಮಾಡಿ ಮಾರಾಟ ಮಾಡುತ್ತಾರೆ.

ಕುರಿ ಸಾಕಾಣಿಕ ಸವಾಲಿನ ಕೆಲಸ: ಮಾರಾಟ ಮಾಡಲು ಹಲವು ತಿಂಗಳಿಂದಲೂ ಕುರಿಗಳನ್ನು ತಯಾರು ಮಾಡಲಾಗುತ್ತದೆ. ಕೊಬ್ಬಿದ, ಹೆಚ್ಚು ತೂಕವುಳ್ಳ, ಕೊಂಬಿರುವ ಕುರಿಗಳಿಗೆ ಬೇಡಿಕೆ ಹೆಚ್ಚಾಗುವ ಕಾರಣ ನಾವು ಇದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಹಬ್ಬ ಒಂದು ತಿಂಗಳು ಇದೇ ಎನ್ನುವಾಗಲೇ ಇದರ ಹಾರೈಕೆ ಕಡೆ ಹೆಚ್ಚಿನ ಗಮನ ನೀಡುತ್ತೇವೆ. ಇದಕ್ಕೆ ಹುರುಳಿ ಕಾಳಿನಂತಹ ಪೌಷ್ಟಿಕ ಆಹಾರ ನೀಡುವುದು. ಪ್ರತಿನಿತ್ಯ ತಾಜಾ ಹುಲ್ಲನ್ನು ನೀಡುವುದು. ಯಾವುದೇ ಕಾರಣಕ್ಕೂ ಮೇವಿನಲ್ಲಿ ಕೊರತೆ ಬಾರದ ಹಾಗೆ ನೋಡಿಕೊಳ್ಳುವುದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಅಲ್ಲದೆ ಕುರಿಗಳು ಸಂಘ ಜೀವಿಗಳಾಗಿರುತ್ತದೆ. ಆದರೂ ಕೆಲವೊಮ್ಮೆ ಜಗಳ ನಡೆದಾಗ ಇದಕ್ಕೆ ಗಾಯಗಳಾಗುವ ಅಪಾಯವಿದೆ.

ಗಾಯವಾದ ಕುರಿ ಬಲಿ ನೀಡಲ್ಲ: ಗಾಯವಾಗಿ ಕುರಿಯ ಯಾವುದಾದರೂ ಅಂಗ ಊನವಾದರೆ ಇದನ್ನು ಬಕ್ರೀದ್‌ ಹಬ್ಬದ ಬಲಿಗೆ ಕೊಂಡುಕೊಳ್ಳುವುದಿಲ್ಲ. ಇದಕ್ಕೆ ಇಸ್ಲಾಂನಲ್ಲಿ ಆದ್ಯತೆ ಇಲ್ಲ. ಅಲ್ಲದೆ ರೋಗಗ್ರಸ್ತವಾಗಿರುವ ಕುರಿಯನ್ನು ಬಲಿ ನೀಡುವುದಿಲ್ಲ. ಹಾಗಾಗಿ ಈ ಸಮಯ ಗಾಳಿ, ಮಳೆಗಾಲವಾಗಿದ್ದು ಇದನ್ನು ಶೀತದಿಂದ ರಕ್ಷಿಸುವುದು. ಅಂಗಗಳಿಗೆ ಗಾಯವಾಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸ ಎನ್ನುತ್ತಾರೆ ಕುರಿ ಸಾಕಾಣಿದಾರ ಬಸವೇಗೌಡ.

ಕುರಿ ಸಾಗಾಣಿಕೆದಾರರಿಗೆ ಹೆಚ್ಚು ಲಾಭ: ಬಕ್ರೀದ್‌ ಹಬ್ಬ ಬಂತೆಂದರೆ ಕುರಿ ಸಾಗಾಣಿಕೆದಾರರಿಗೆ ಹೆಚ್ಚು ಲಾಭವಾಗುತ್ತದೆ. ನಾನು ಹಲವು ವರ್ಷಗಳಿಂದ ಕುರಿ ಸಾಕುತ್ತಿದ್ದೇನೆ. ಸಂತೆಮರಹಳ್ಳಿ, ತಿ.ನರಸೀಪುರ, ಮೈಸೂರಿನ ಮಾರುಕಟ್ಟೆಗಳಿಗೂ ಕುರಿಯನ್ನು ಕೊಂಡೊಯ್ಯುತ್ತೇನೆ. ಮೈಸೂರು ಇದಕ್ಕೆ ಈ ಸಮಯದಲ್ಲಿ ಕುರಿಗಳಿಗೆ ದೊಡ್ಡ ಮಾರುಕಟ್ಟೆಯಾಗುತ್ತದೆ. ಕೊಬ್ಬಿದ ದಷ್ಟಪುಷ್ಟವಾದ ಹಾಗೂ ಆರೋಗ್ಯಯುತವಾದ ಯಾವುದೇ ಗಾಯಗಳಲ್ಲಿದ ಕುರಿಗಳಿಗೆ ಬೇಡಿಕೆ ಹೆಚ್ಚು.

ನಮ್ಮ ಕುರಿ ಮಂದೆಯಲ್ಲಿ ಇಂತಹ ಕುರಿಗಳನ್ನು ಆಯ್ದುಕೊಂಡು ಆಟೋ, ಇತರೆ ಗೂಡ್ಸ್‌ ವಾಹನಗಳಲ್ಲಿ ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಬಕ್ರೀದ್‌ ಹಬ್ಬದಲ್ಲಿ ಕುರಿಗಳಿಗೆ ಬೇಡಿಕೆ ಹೆಚ್ಚಾಗಿರುತ್ತದೆ. ಬೇರೆ ದಿನಗಳ ಹೊರತಾಗಿ ಈ ದಿನಗಳ ಮಾರಾಟದಲ್ಲಿ ಕುರಿಯೊಂದಕ್ಕೆ ಕನಿ ಷ್ಠ 1000 ರೂ. ದಿಂದ 5000 ರೂ. ಹೆಚ್ಚಾಗಿ ಲಾಭ ಸಿಗುತ್ತದೆ ಎಂದು ಕುರಿ ಸಾಕಾಣಿಕೆದಾರ ಗುಂಬಳ್ಳಿಯ ಮಹಾದೇವೇಗೌಡ ಉದಯವಾಣಿಗೆ ಮಾಹಿತಿ ನೀಡಿದರು.

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.