ಬಂಡೀಪುರ: ಹಗಲು ಸಂಚಾರ ನಿರ್ಬಂಧಿಸದಂತೆ ಒತ್ತಾಯ


Team Udayavani, Sep 6, 2019, 1:03 PM IST

cn-tdy-2

ತಾಲೂಕು ಕಚೇರಿ ಮುಂಭಾಗದಲ್ಲಿ ಬಂಡೀಪುರದಲ್ಲಿ ಹಗಲು ಸಂಚಾರ ನಿರ್ಬಂಧಿಸದಂತೆ ಒತ್ತಾಯಿಸಿ ಎಪಿಎಂಸಿ ವ್ಯಾಪಾರಸ್ಥರು ಮತ್ತು ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀ ಯ ಉದ್ಯಾನವನದ ವ್ಯಾಪ್ತಿಯಲ್ಲಿ ಹಾದು ಹೋಗಿ ರುವ ತಮಿಳುನಾಡು ಮತ್ತು ಕೇರಳದ ಹೆದ್ದಾರಿ ಯಲ್ಲಿ ಹಗಲು ಸಂಚಾರವನ್ನು ನಿರ್ಬಂಧಿಸದಂತೆ ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೂಲಿ ಕಾರ್ಮಿಕರು ಮತ್ತು ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.

ಪಟ್ಟಣದ ಹೊರವಲಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿ ಮುಂಭಾಗ ಸಮಾವೇಶಗೊಂಡು ಕೂಲಿ ಕಾರ್ಮಿಕರ ಮುಖಂಡ ಚೇತನ್‌ ಮಾತ ನಾಡಿ, ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ವನ್ಯಪ್ರಾಣಿಗಳ ಹಿತಾದೃಷ್ಟಿಯಿಂದ ಈಗಾಗಲೇ ರಾತ್ರಿ 9 ರಿಂದ ಮುಂಜಾನೆ 6 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ ಎಂದರು.

ಪರ್ಯಾಯ ರಸ್ತೆ ಮೂಲಕ ಸಂಚಾರ: ಈಗಾಗಲೇ ಕೇರಳ ಸರ್ಕಾರ ರಾತ್ರಿ ನಿರ್ಬಂಧವನ್ನು ರದ್ದುಗೊಳಿ ಸುವಂತೆ ಒತ್ತಾಯಿಸಿ ನ್ಯಾಯಾಲಯ ದಲ್ಲಿ ಮನವಿ ಮಾಡಿದೆ. ಇದನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್‌ ವನ್ಯಜೀವಿಗಳ ಓಡಾಟಕ್ಕೆ ತೊಂದರೆ ಯಾಗುತ್ತಿದ್ದರೆ ಹಗಲು ಸಂಚಾರವನ್ನು ಬಂದ್‌ ಮಾಡಬಹುದು. ಈ ನಿಟ್ಟಿನಲ್ಲಿ ಪರ್ಯಾಯ ರಸ್ತೆಗಳ ಮೂಲಕ ಸಂಚಾರ ಮಾಡಲಿ ಎಂಬ ಅಭಿ ಪ್ರಾಯವನ್ನು ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ವ್ಯಾಪಾರಸ್ಥರಿಗೆ ತೀವ್ರ ತೊಂದರೆ: ಈ ರೀತಿ ಆದೇಶವನ್ನು ನ್ಯಾಯಾಲಯ ಹೊರಡಿಸಿ ರಾಷ್ಟ್ರೀ ಯ ಹೆದ್ದಾರಿಯನ್ನು ಬಂದ್‌ ಮಾಡಿಸಿದರೆ ಕೇರಳ ಮತ್ತು ತಮಿಳುನಾಡಿಗೆ ಪಟ್ಟಣದಿಂದ ಹಣ್ಣು- ತರಕಾರಿಗಳು ಸಾಗಣೆಯಾಗುತ್ತಿದೆ. ಇದರಿಂದ ಸಂಪೂರ್ಣವಾಗಿ ಮಾರುಕಟ್ಟೆಯ ವ್ಯಾಪಾರಸ್ಥರು ಮತ್ತು ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆ ಯಾಗುತ್ತದೆ ಎಂದು ದೂರಿದರು.

ತಹಶೀಲ್ದಾರ್‌ಗೆ ಮನವಿ: ಕೂಲಿ ಕಾರ್ಮಿಕರ ಮತ್ತು ವ್ಯಾಪಾರಸ್ಥರ ಹಿತದೃಷ್ಟಿಯಿಂದ ಹಾಲಿ ಇರುವ ಹಾಗೆಯೇ ಯಥಾಸ್ಥಿತಿಯನ್ನು ಕಾಪಾಡಿ ಕೊಳ್ಳಲು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮನದಟ್ಟು ಮಾಡಬೇಕು ಎಂಬ ಮನವಿಯನ್ನು ಉಪ ತಹಶೀಲ್ದಾರ್‌ ಕಮಲಮ್ಮ ಅವರಿಗೆ ಕೂಲಿ ಕಾರ್ಮಿಕರು ಮತ್ತು ವ್ಯಾಪಾರಸ್ಥರು ಸಲ್ಲಿಸಿದರು.

ಮುಖಂಡರಾದ ಅಜರ್‌ಪಾಷಾ, ಮಹದೇವ ನಾಯ್ಕ, ಬಸವರಾಜನಾಯ್ಕ, ಶಶಿ, ಲೋಕೇಶ್‌, ಸುರೇಶ್‌, ಗಣೇಶ್‌, ಮಣಿ, ಶಿವು, ಅರುಣ್‌, ಶಬರಿ, ಗೋಪಾಲ, ಸುನಿಲ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.