ಬಂಡೀಪುರ ಝೋನ್‌ ವಿಂಗಡಣೆ


Team Udayavani, Dec 5, 2022, 3:10 PM IST

ಬಂಡೀಪುರ ಝೋನ್‌ ವಿಂಗಡಣೆ

ಗುಂಡ್ಲುಪೇಟೆ: ಕಾಡಿನಲ್ಲಿರುವ ಪ್ರಾಣಿಗಳಿಗೆ ಸಫಾರಿ ವಾಹನಗಳಿಂದಾಗುವ ಕಿರಿಕಿರಿ ತಪ್ಪಿಸಲು ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ವಲಯವಾರು ಎ ಮತ್ತು ಬಿ ಝೊ ಝೋನ್‌ಗಳಾಗಿ ವಿಂಗಡಣೆಗೆ ನಿರ್ಧರಿಸಿದ್ದಾರೆ.

ಬಂಡೀಪುರ ಸಫಾರಿಗೆ ತೆರಳುವ ವಾಹನಗಳಿಗೆ ಒಂದು ವಲಯದಲ್ಲಿ ಪ್ರಾಣಿಗಳು ಕಂಡರೆ ಉಳಿದ ಸಫಾರಿ ಚಾಲಕರಿಗೆ ಫೋನ್‌ ಮೂಲಕ ಮಾಹಿತಿ ತಿಳಿಸಿ ಸ್ಥಳಕ್ಕೆ ಬರುವಂತೆ ಮಾಡುತ್ತಿದ್ದರು. ಇದರಿಂದಾಗಿ ಕಿರಿದಾದ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗುವ ಜೊತೆಗೆ ಹಳ್ಳಕೊಳ್ಳದಲ್ಲಿ ವಾಹನಗಳನ್ನು ಬಿಡುತ್ತಿದ್ದರು. ಈ ಕಾರಣದಿಂದ ಪ್ರವಾಸಿಗರಿಗೆ ಸಮಸ್ಯೆಯಾಗುತ್ತಿತ್ತು. ಈ ಬಗ್ಗೆ ಕೆಲ ಪ್ರವಾಸಿಗರು ಹಿಂದೆ ಹುಲಿ ಯೋಜನೆನಿರ್ದೇಶಕರಾಗಿದ್ದ ಅಂಬಾಡಿ ಮಾಧವ್‌ ಅವರ ಗಮನಕ್ಕೆ ತಂದಿದ್ದರು. ಅಂದೇ ವಲಯವಾರುವಿಂಗಡನೆಗೆ ಚಿಂತನೆ ನಡೆಸಿದ್ದರು. ಆದರೆ, ಬಳಿಕ ಬಂದನಿರ್ದೇಶಕರು ಈ ಬಗ್ಗೆ ಗಮನ ಹರಿಸದ ಕಾರಣ, ಈ ಕಾರ್ಯ ಚಾಲ್ತಿಗೆ ಬರಲಿಲ್ಲ.

ಬಂಡೀಪುರ ಇದೀಗ 50ನೇ ವರ್ಷ ಆಚರಣೆಗೆ ಸಿದ್ಧವಾಗಿರುವುದರಿಂದ ಹೊಸ ಯೋಜನೆಗಳುಪ್ರವಾಸಿಗರಿಗೆ ಶಾಶ್ವತವಾಗಿ ಉಪಯೋಗ ಆಗಬೇಕು.ಈ ಉದ್ದೇಶದಿಂದ ಬಂಡೀಪುರ ಹುಲಿ ಯೋಜನೆನಿರ್ದೇಶಕ ಡಾ.ರಮೇಶ್‌ಕುಮಾರ್‌ ಸಫಾರಿಯನ್ನು ಎ ಮತ್ತು ಬಿ ಝೋನ್‌ ಗಳಾಗಿ ವಿಂಗಡಣೆ ಮಾಡಿ,ಪ್ರವಾಸಿಗರಿಗೆ ಹೆಚ್ಚಿನ ಸಫಾರಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದಾರೆ.

ಶೇ.20 ಪ್ರದೇಶದಲ್ಲಿ ಸಫಾರಿ: ಬಂಡೀಪುರ ಅರಣ್ಯದಶೇ.20 ಪ್ರದೇಶದಲ್ಲಿ ಸಫಾರಿ ಮಾಡಲು ಸ್ಥಳಾವಕಾಶವಿದೆ. ಆದರೆ, ಅನುದಾನದ ಕೊರತೆಯಿಂದ ಪ್ರಸ್ತುತ ಶೇ.8 ಪ್ರದೇಶದಲ್ಲಿ ಮಾತ್ರ ಮಾಡಲಾಗುತ್ತಿದೆ. ಇನ್ನೂ ಶೇ.12 ಮಾಡಲು ಅವಕಾಶವಿದೆ. ಉಳಿದ ಕಡೆ ಸಫಾರಿಗೆ ಅವಕಾಶ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಝೊàನ್‌ ವಿಂಗಡಣೆಗೆ ಮುಂದಾಗಿದೆ ಎನ್ನಲಾಗುತ್ತಿದೆ.

ಬಂಡೀಪುರ ಸಫಾರಿಯಲ್ಲಿ 31 ವಾಹನಗಳ ಸಂಚಾ ರಕ್ಕೆ ಅವಕಾಶವಿದೆ. ಆದರೆ, ಇದೀಗ ಸಫಾರಿಯಲ್ಲಿ ಕೇವಲ 26 ವಾಹನ ಮಾತ್ರಚಾಲನೆಯಲ್ಲಿದೆ. ಇದು ತುಂಬಾ ಕಡಿಮೆಯಾಗಿದ್ದು,ಬೇರೆ ರಾಜ್ಯ ಸಫಾರಿಗೆ ಹೊಲಿಕೆ ಮಾಡಿದರೆ ಅವುಗಳ ಶೇ.25ರಷ್ಟು ಇಲ್ಲಿ ಸಫಾರಿ ನಡೆಯುತ್ತಿಲ್ಲ. ಈ ಹಿನ್ನೆಲೆ ಸಫಾರಿಗೆ ಪ್ರವಾಸಿಗರನ್ನು ಸೆಳೆಯಬೇಕು ಎಂಬಉದ್ದೇಶದಿಂದ ಅರಣ್ಯ ಇಲಾಖೆ ಝೊàನ್‌ ವ್ಯವಸ್ಥೆ ಮಾಡಲಾಗುತ್ತಿದೆ.

ಪ್ರವಾಸಿಗರು ಸಫಾರಿಗೆ ತೆರಳಿದ ವೇಳೆ ಅಭಯಾರಣ್ಯದಲ್ಲಿ ಎಲ್ಲೋ ಒಂದು ಕಡೆ ಹುಲಿ ಕಂಡರೆ ಎಲ್ಲಾ ವಾಹನಗಳು ಒಂದೇ ಕಡೆ ಜಮಾಯಿಸುತ್ತವೆ. ಇದರಿಂದ ಕಾಡುಪ್ರಾಣಿಗಳ ಸಾಮಾನ್ಯ ಜೀವನ ಶೈಲಿಗೆ ತೊಂದರೆ ಆಗುವುದನ್ನು ತಪ್ಪಿಸಲು ಎ ಮತ್ತು ಬಿ ಝೋನ್‌ ಗಳಾಗಿ ವಿಂಗಡಿಸಿ ಎ ಝೋನ್‌ನಲ್ಲಿ 13 ವಾಹನ ಮತ್ತು ಬಿ ಝೋನ್‌ ನಲ್ಲಿ 13 ವಾಹನಗಳು ಪ್ರತ್ಯೇಕವಾಗಿ ಸಂಚರಿಸುವಂತೆ ಮಾಡಲು ಉದ್ದೇಶಿಸಲಾಗಿದೆ.

ಬಂಡೀಪುರ ಸಫಾರಿಯಲ್ಲಿ ಎ ಮತ್ತು ಬಿ ಝೋನ್‌ ವಿಂಗಡಣೆಯಿಂದ ಪ್ರವಾಸಿಗರು ಕಿರಿಕಿರಿ ಇಲ್ಲದೆ ಸಫಾರಿ ಮಾಡಬಹುದಾಗಿದೆ. ಬಂಡೀಪುರ ಹುಲಿಸಂರಕ್ಷಿತ ಪ್ರದೇಶ 50 ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಶಾಶ್ವತವಾದ ಯೋಜನೆ ನೀಡಬೇಕು ಎಂಬ ಉದ್ದೇಶದಿಂದ ಝೋನ್‌ವ್ಯವಸ್ಥೆಗೆ ಚಿಂತನೆ ನಡೆಸಲಾಗಿದೆ.– ಡಾ.ರಮೇಶ್‌ ಕುಮಾರ್‌, ಬಂಡೀಪುರ ಹುಲಿ ಯೋಜನೆ ನಿರ್ದೇಶಕ.

– ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.