ಮಳೆ ಬಂದರೆ ಬಸವಾಪುರ ಜನತೆಗೆ ಭಯ


Team Udayavani, Nov 4, 2019, 3:00 AM IST

male-bandare

ಯಳಂದೂರು: ಕೆಸರುಮಯವಾದ ರಸ್ತೆ, ನೀರು ಹೊರ ಹೋಗದ ಚರಂಡಿಗಳು, ಹಳ್ಳಕೊಳ್ಳದಲ್ಲಿ ನಿಲ್ಲುವ ಮಳೆ ನೀರು, ಜೋರು ಮಳೆ ಸುರಿದರೆ ಮನೆಯೊಳಗೆ ನುಗ್ಗುವ ಕಲುಷಿತ ಜಲ, ವಿಷ ಜಂತುಗಳು, ಕ್ರಿಮಿಕೀಟಗಳ ಆವಾಸದಲ್ಲೇ ಬದುಕು ಸಾಗಿಸುವ ಅನಿವಾರ್ಯ. ಪ್ರತಿ ಮಳೆಗಾಲದಲ್ಲೂ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಶಾಪ ಹಾಕುವ ನಾಗರಿಕರು.

ಇದು ತಾಲೂಕಿನ ಬಸವಾಪುರ ಗ್ರಾಮದ ನೈಜ ಚಿತ್ರಣ. ಕೆಸ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಹಿಂದುಳಿದ ಉಪ್ಪಾರ ಜನಾಂಗದವರೇ ವಾಸ ಮಾಡುತ್ತಾರೆ. ಇಲ್ಲಿ 140 ಕುಟುಂಬಗಳು ವಾಸವಾಗಿವೆ. 800ಕ್ಕೂ ಹೆಚ್ಚಿನ ಮಂದಿ ವಾಸವಾಗಿದ್ದು, 535 ಮತದಾರರು ಇಲ್ಲಿದ್ದಾರೆ. ಪ್ರತಿ ವರ್ಷವೂ ಮಳೆಗಾಲ ಬಂದರೆ ಈ ಗ್ರಾಮದಲ್ಲಿ ಆತಂಕ ಮನೆ ಮಾಡುತ್ತದೆ. ಸುತ್ತಲೂ ಹೊಲಗದ್ದೆಗಳಿಂದ ಕೂಡಿರುವ ಈ ಗ್ರಾಮಕ್ಕೆ ಮಳೆ ಬಂದರೆ ನೀರೆಲ್ಲಾ ಬೀದಿಯೊಳಗೆ ನುಗ್ಗುತ್ತದೆ.

ಕಾಂಕ್ರಿಟ್‌ ರಸ್ತೆ ನಿರ್ಮಾಣ ಮಾಡಿಲ್ಲ: ಇಲ್ಲಿನ ಎಲ್ಲಾ ಬೀದಿಗಳಿಗೂ ಕಾಂಕ್ರಿಟ್‌ ರಸ್ತೆ ನಿರ್ಮಾಣ ಮಾಡಿಲ್ಲ. ಹೀಗಾಗಿ ಕೆಲ ಬೀದಿಗಳಲ್ಲಿ ಇನ್ನೂ ಮಣ್ಣನ್ನು ಸುರಿಯಲಾಗಿದ್ದು, ದೊಡ್ಡ ಹಳ್ಳವಾಗಿ ರಸ್ತೆ ಮಾರ್ಪಟ್ಟಿದೆ. ಮಳೆ ಬಿದ್ದರೆ ಇಡೀ ರಸ್ತೆ ಕೆಸರುಮಯವಾಗುತ್ತದೆ. ಜನರು ಇಲ್ಲಿಂದಲೇ ಓಡಾಡುವ ಅನಿವಾರ್ಯ ಇದೆ.

ಶಾಶ್ವತ ಪರಿಹಾರ ಸಿಕ್ಕಿಲ್ಲ: ಗ್ರಾಮದ ಸುತ್ತಲೂ ವ್ಯವಸಾಯ ಜಮೀನುಗಳಿವೆ. ಈ ಹಿಂದೆ ಕಾಲುವೆ ನೀರೆಲ್ಲಾ ಗ್ರಾಮದಲ್ಲಿ ನುಗ್ಗಿತ್ತು. ಈ ಪರಿಸ್ಥಿತಿ ಈಗಲೂ ಇದೆ. ಇಲ್ಲಿ ಬಹುತೇಕರು ಕೂಲಿ ಕಾರ್ಮಿಕರಾಗಿದ್ದಾರೆ. ಕೆಲವರಿಗೆ ಇನ್ನೂ ಮಣ್ಣಿನ ಮನೆಗಳ ಆಸರೆಯಾಗಿವೆ. ಮಳೆ ಬಂದರೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತದೆ. ಈ ಬಾರಿ ಮಳೆಯಲ್ಲೂ ಅನೇಕ ಮನೆಗಳ ಗೋಡೆಗಳು ಕುಸಿದಿವೆ. ರಾತ್ರಿ ವೇಳೆಯಲ್ಲಿ ವಿಷಜಂತುಗಳು ಕ್ರಿಮಿಕೀಟಗಳ ಆವಾಸದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಇದೆ.

ಇಲ್ಲಿಗೆ ನೀರು ನುಗ್ಗದಂತೆ ಸುತ್ತಲೂ ಚರಂಡಿ ನಿರ್ಮಾಣ ಮಾಡಬೇಕು. ಎಲ್ಲಾ ಬೀದಿಗಳಿಗೂ ರಸ್ತೆ ನಿರ್ಮಿಸಬೇಕು ಎಂಬ ನಮ್ಮ ಆಸೆ ಇನ್ನೂ ಈಡೇರಿಲ್ಲ. ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಮ್ಮ ಗ್ರಾಮಕ್ಕೆ ಮಲತಾಯಿ ಧೋರಣೆ ತೋರುತ್ತಾರೆ ಎಂಬುದು ಗ್ರಾಮದ ಶಿವಮಲ್ಲಶೆಟ್ಟಿ ಆರೋಪ.

ಹುಸಿಯಾದ ಶಾಸಕರ ದತ್ತು ಗ್ರಾಮದ ಆಸೆ: ಚುನಾವಣೆಗೂ ಮುಂಚೆ ಈ ಗ್ರಾಮಕ್ಕೆ ಹಾಲಿ ಶಾಸಕ ಎನ್‌. ಮಹೇಶ್‌ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ಕಣ್ಣಾರೆ ಕಂಡು ಮರುಗಿದ್ದರು. ಅಲ್ಲದೆ, ನಾನು ಶಾಸಕನಾಗಿ ಆಯ್ಕೆಯಾದರೆ ಈ ಗ್ರಾಮವನ್ನು ದತ್ತು ಪಡೆದುಕೊಂಡು ಇದರ ಸಮಗ್ರ ಅಭಿವೃದ್ಧಿ ಮಾಡುವ ಭರವಸೆ ನೀಡಿದ್ದರು. ಅವರು ಚುನಾವಣೆಯಲ್ಲಿ ಗೆದ್ದು ಒಂದೂವರೆ ವರ್ಷವಾದರೂ ಇತ್ತ ಇನ್ನೂ ಒಂದು ಬಾರಿ ಮುಖ ಮಾಡಿಲ್ಲ.

ಈ ಬಾರಿಯ ಮಳೆಗೆ 15ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಎಷ್ಟು ಮನೆಗಳು ಕುಸಿದ ಮೇಲೆ ಇವರು ಬಂದು ಪರಿಶೀಲಿಸುತ್ತಾರೋ ಕಾದು ನೋಡಬೇಕು ಎಂಬುದು ಗ್ರಾಮದ ಚಿಕ್ಕನಾಗ, ಕೆಂಪಶೆಟ್ಟಿ ಅವರ ದೂರು.

ನರೇಗಾದಡಿ ಕಾಮಗಾರಿ ಮಾಡಲು ಜನರು ಬರುತ್ತಿಲ್ಲ: ಇಲ್ಲಿನ ರಸ್ತೆ ತುಂಬಾ ಹದಗೆಟ್ಟಿತ್ತು. ತಾತ್ಕಾಲಿಕವಾಗಿ ಗ್ರಾಪಂ ವತಿಯಿಂದ ಇಲ್ಲಿಗೆ ಮಣ್ಣನ್ನು ಹಾಕಿ, ಹಳ್ಳಗಳನ್ನು ಮುಚ್ಚಲಾಗಿದೆ. ನರೇಗಾ ಯೋಜನೆಯಲ್ಲಿ ಇಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಿಸಲು ಅವಕಾಶವಿದೆ. ಆದರೆ, ಗ್ರಾಮದ ಯಾರೊಬ್ಬರೂ ಮುಂದೆ ಬರುತ್ತಿಲ್ಲ. ಚರಂಡಿ ಹಾಗೂ ರಸ್ತೆ ನಿರ್ಮಾಣಕ್ಕೆ ಸರ್ಕಾರದ ಇತರೆ ಇಲಾಖೆಯಿಂದ ದೊಡ್ಡ ಮೊತ್ತದ ಅನುದಾನದ ಅವಶ್ಯವಿದೆ, ಸಂಬಂಧಪಟ್ಟವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕೆಸ್ತೂರು ಗ್ರಾಪಂ ಪಿಡಿಒ ಲಲಿತಾ ಮಾಹಿತಿ ನೀಡಿದರು.

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.